“ಯಕ್ಷಗಾನ ಸಂಪ್ರದಾಯದ ಸಂರಕ್ಷಣೆಗೆ ಅಕಾಡೆಮಿ ಬದ್ಧ ‘
Team Udayavani, Feb 23, 2017, 4:57 PM IST
ಉಡುಪಿ: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಪ್ರಾದೇಶಿಕ ರಂಗಕಲೆಗಳ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಿರುವ ಯಕ್ಷಗಾನ ಭಾಗವತಿಕೆ ಮತ್ತು ಹೆಜ್ಜೆಗಾರಿಕೆ ವಿಷಯಗಳ ಐದು ದಿನಗಳ ದೃಶ್ಯ-ಶ್ರವಣ ದಾಖಲಾತಿಯ ಎರಡನೆಯ ದಿನ ತೆಂಕುತಿಟ್ಟಿನ ಹಿರಿಯ ಭಾಗವತರ ಸಾಂಪ್ರದಾಯಿಕ ಶೈಲಿಯ ಭಾಗವತಿಕೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
ಮಣಿಪಾಲ ಎಸ್ಒಸಿ ಚಿತ್ರೀಕರಣ ಕೊಠಡಿಯಲ್ಲಿ ಜರಗಿದ ದಾಖಲೀಕರಣ ಕಾರ್ಯಕ್ರಮದ ಆರಂಭದಲ್ಲಿ ಅಕಾಡೆಮಿ ಸದಸ್ಯ ಸಂಚಾಲಕ ಪಿ. ಕಿಶನ್ ಹೆಗ್ಡೆಯವರು, ಯಕ್ಷಗಾನದ ದಾಖಲೀಕರಣದ ಔಚಿತ್ಯವನ್ನು ವಿವರಿಸಿ ಮರೆಯಾಗುತ್ತಿರುವ ಸಾಂಪ್ರದಾಯಿಕ ಶೈಲಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಕಾಡೆಮಿ ಪ್ರಸ್ತುತ ಯೋಜನೆಯನ್ನು ಹಾಕಿಕೊಂಡಿದೆ ಎಂದರು.
ಬಲಿಪ ನಾರಾಯಣ ಭಾಗವತ, ಅಗರಿ ರಘುರಾಮ ಭಾಗವತ, ತೆಂಕಬೈಲು ತಿರುಮಲೇಶ್ವರ ಶಾಸಿŒ, ಕುರಿಯ ಗಣಪತಿ ಶಾಸಿŒ, ಕುಬಣೂರು ಶ್ರೀಧರ ರಾವ್, ಲೀಲಾವತಿ ಬೈಪಾಡಿತ್ತಾಯ ಮತ್ತು ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರ ಭಾಗವತಿಕೆಗೆ ಪದ್ಯಾಣ ಶಂಕರನಾರಾಯಣ ಭಟ್, ಹರಿನಾರಾಯಣ ಬೈಪಾಡಿತ್ತಾಯ, ದೇಲಂತಮಜಲು ಸುಬ್ರಹ್ಮಣ್ಯ ಭಟ್ ಚಂಡೆ-ಮದ್ದಲೆ ಸಾಥಿ ನೀಡಿದರು. ಗಣೇಶ ಕೊಲೆಕಾಡಿ ಮತ್ತು ನಿತ್ಯಾನಂದ ರಾವ್ ಸುರತ್ಕಲ್ ಅನುಕ್ರಮವಾಗಿ ಛಂದಸ್ಸು ಮತ್ತು ಸಂಗೀತಶಾಸ್ತ್ರಗಳ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಎಂ.ಎಲ್. ಸಾಮಗ ದಾಖಲಾತಿಯ ಸಂಯೋಜನೆಯಲ್ಲಿ ಸಹಕರಿಸಿದರು.
ಕೇಂದ್ರದ ಸಂಯೋಜನಾಧಿಕಾರಿ ಪ್ರೊ| ವರದೇಶ ಹಿರೇಗಂಗೆ ಪ್ರಸ್ತಾವನೆಗೈದರು. ಸಹಸಂಯೋ ಜನಾಧಿಕಾರಿ ಡಾ| ಅಶೋಕ ಆಳ್ವ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಅಮಿತಾಭ್ ಟು ಶಾರುಖ್: ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ
Tollywood: ʼಫ್ಯಾಮಿಲಿ ಸ್ಟಾರ್ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್ ಮಾಡಿದ ದೇವರಕೊಂಡ