ಪೆರುವಾಯಿ ನಾರಾಯಣ ಭಟ್ಟರಿಗೆ ಪಡ್ರೆ ಚಂದು ಪ್ರಶಸ್ತಿ


Team Udayavani, Feb 24, 2017, 3:50 AM IST

23-KALA-5.jpg

ತೆಂಕುತಿಟ್ಟು ಯಕ್ಷಗಾನ ಪರಂಪರೆಯನ್ನು ಸಮರ್ಥವಾಗಿ ಮುಂದುವರಿಸಲು ಮಾರ್ಗದರ್ಶಿ ಸಂಸ್ಥೆಯಾಗಿ ತಲೆಯೆತ್ತಿ ನಿಂತಿರುವ ಕಾಸರಗೋಡಿನ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರಕ್ಕೆ ಇದೀಗ ಹನ್ನೆರಡನೇ ವರ್ಷದ ಸಂಭ್ರಮ. ಯಕ್ಷಗಾನ ಕಲಿಕೆಯ ಬಗೆಗೆ ಆಸಕ್ತಿಯುಳ್ಳವರಿಗೆ ಉಚಿತವಾಗಿ ಊಟ ಹಾಗೂ ವಸತಿಯ ಸಹಿತ ತರಬೇತಿ ಒದಗಿಸುತ್ತಿರುವ ತೆಂಕಿನ ಏಕೈಕ ಕಲಾ ಕೇಂದ್ರವೆಂಬ ಅಗ್ಗಳಿಕೆಯೂ ಈ ಸಂಸ್ಥೆಗಿದೆ. ಖ್ಯಾತ ಯಕ್ಷಗಾನ ಕಲಾವಿದ ಸಬ್ಬಣಕೋಡಿ ರಾಮ ಭಟ್ಟರಿಂದ ಮುನ್ನಡೆಸಲ್ಪಡುತ್ತಿರುವ ಈ ಸಂಸ್ಥೆ ಪ್ರತಿ ವರ್ಷವೂ ತನ್ನ ವಾರ್ಷಿಕೋತ್ಸವದಂದು ಅರ್ಹ ಯಕ್ಷಗಾನ ಕಲಾವಿದರಿಗೆ “ಪಡ್ರೆ ಚಂದು ಪ್ರಶಸ್ತಿ’ಯನ್ನು ನೀಡಿ ಗೌರವಿಸುತ್ತಾ ಬಂದಿದೆ. ಪ್ರಸ್ತುತ ವರ್ಷ ಈ ಗೌರವಕ್ಕೆ ಪಾತ್ರರಾಗಿರುವವರು ಕಟೀಲು ಮೇಳದ ಹಿರಿಯ ಮದ್ದಳೆ ವಾದಕ ಬಿ. ನಾರಾಯಣ ಭಟ್‌ ಪೆರುವಾಯಿ.

ಬಂಟ್ವಾಳ ತಾಲೂಕಿನ ಒಂದು ಮೂಲೆಯಲ್ಲಿರುವ ಪೆರುವಾಯಿಯ ಕಡೆಂಗೋಡ್ಲು ಬರೆಮನೆ ಎಂಬಲ್ಲಿ ಇವರ ಜನನವಾಯಿತು. ತಂದೆ ಮಹಾಲಿಂಗ ಭಟ್‌ ಹಾಗೂ ತಾಯಿ ಮೂಕಾಂಬಿಕಾ. ಓದಿದ್ದು ಪಿಯುಸಿ, ಸೆಳೆದದ್ದು ಯಕ್ಷಗಾನ!  ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸಿŒಗಳೊಡನೆ 1974ರಲ್ಲಿ ಸೊರ್ನಾಡು ಮೇಳದಲ್ಲಿ ತಿರುಗಾಟ ಆರಂಭಿಸಿದ ನಾರಾಯಣ ಭಟ್‌, 1975ರಲ್ಲಿ ಬಲಿಪ ನಾರಾಯಣ ಭಾಗವತರ ಶಿಫಾರಸಿನ ಮೇಲೆ ಕಟೀಲು ಮೇಳಕ್ಕೆ ಪದಾರ್ಪಣೆ ಮಾಡಿದವರು. ಇರಾ ಗೋಪಾಲಕೃಷ್ಣ ಭಾಗವತ, ನೆಡ್ಲೆ ನರಸಿಂಹ ಭಟ್ಟರಂತಹ ದಿಗ್ಗಜರೊಂದಿಗೆ ಮದ್ದಳೆಯ ಪಟ್ಟುಗಳನ್ನು ಅರಿತವರು. ಪರಿಣಾಮವಾಗಿಯೇ 1981ರಿಂದ ಕಟೀಲು ಎರಡನೇ ಮೇಳದಲ್ಲಿ ಪ್ರಧಾನ ಮದ್ದಳೆವಾದಕರಾಗಿ ಸೇವೆ ಸಲ್ಲಿಸುತ್ತಾ ಬಂದಿರುವವರು.

ಪಡ್ರೆ ಚಂದು, ಕೇದಗಡಿ ಗುಡ್ಡಪ್ಪ ಗೌಡ, ಬಣ್ಣದ ಮಾಲಿಂಗ, ಅಳಿಕೆ ರಾಮಯ್ಯರೈ, ಪೆರುವಾಯಿ ನಾರಾಯಣ ಶೆಟ್ಟಿ ಮೊದಲಾದ ಕಲಾವಿದರ ಒಡನಾಟ ಇವರನ್ನು ಮಾಗಿಸಿತು ಎಂಬುದರಲ್ಲಿ ಸಂಶಯವಿಲ್ಲ. ಹಲವಾರು ಕಡೆಗಳಲ್ಲಿ ಹಿಮ್ಮೇಳ ವಾದನದ ತರಗತಿಯನ್ನೂ ನಡೆಸಿ ಶಿಷ್ಯರನ್ನೂ ರೂಪಿಸಿದ ಹೆಗ್ಗಳಿಕೆ ಇವರದು. ಇವರಿಗೆ ಪಡ್ರೆ ಚಂದು ಪ್ರಶಸ್ತಿ ಅರ್ಹವಾಗಿಯೇ ಒಲಿದು ಬಂದಿದೆ.

ಪೂಕಳರಿಗೆ ಅಡ್ಕಸ್ಥಳ ಪ್ರಶಸ್ತಿ 
ಯಕ್ಷ ಗಾನ ಕೇಂದ್ರದ ವಾರ್ಷಿಕ ಉತ್ಸವ ದಂದು ಅಡ್ಕಸ್ಥಳ ಪ್ರಶಸ್ತಿ ಯನ್ನು ಹಿರಿಯ ಕಲಾವಿದ ಪೂಕಳ ಲಕ್ಷ್ಮೀನಾರಾಯಣ ಭಟ್ಟರಿಗೆ ನೀಡಲಾಗುತ್ತಿದೆ. ಖ್ಯಾತ ಅರ್ಥಧಾರಿ ಪೂಕಳ ಕೃಷ್ಣ ಭಟ್‌ ಹಾಗೂ ಶಂಕರಿ ಅಮ್ಮನವರ ಪುತ್ರನಾದ ಇವರು ಮೂವತ್ತೈದಕ್ಕೂ ಹೆಚ್ಚು ವರ್ಷಗಳಿಂದ ಕಲಾಸೇವೆಗೈಯುತ್ತಿದ್ದಾರೆ. ಪ್ರೇಕ್ಷಕರ, ಕಲಾವಿದರ, ಸಂಘಟಕರ ಹೀಗೆ ಎಲ್ಲರ ಮನಗೆದ್ದ ಈ ಕಲಾವಿದನಿಗೆ ಈ ಬಾರಿಯ ಅಡ್ಕಸ್ಥಳ ಪ್ರಶಸ್ತಿ ದೊರೆತಿದೆ. ಇದೇ ಸಂದರ್ಭದಲ್ಲಿ ಖ್ಯಾತ ಮೃದಂಗ ವಿದ್ವಾನ್‌ ಶಂಕರ ಭಟ್‌ ಕುಕ್ಕಿಲ ಅವರಿಗೆ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ.

ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ     ಪೆರ್ಲದಲ್ಲಿ ಫೆಬ್ರವರಿ 25ರಂದು  ನಡೆಯಲಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ಸಹಿತ ವಿವಿಧ ಕಾರ್ಯಕ್ರಮಗಳು, ಯಕ್ಷಗಾನ ಪ್ರದರ್ಶನಗಳು ಜರಗಲಿವೆ.

ರಾಕೇಶ್‌ ಕುಮಾರ್‌ ಕಮ್ಮಜೆ

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.