ಮಚ್ಚಿನ ಪ್ರೌಢಶಾಲೆ: ಅರ್ಧದಲ್ಲಿ ನಿಂತ ಕಟ್ಟಡ ಕಾಮಗಾರಿ


Team Udayavani, Feb 25, 2017, 11:32 AM IST

2302mdrph1.jpg

ಮಡಂತ್ಯಾರು: ಇದು ಸರಕಾರಿ ಶಾಲೆ. ಆದರೆ ಉತ್ತಮ ಶಿಕ್ಷಣದ, ವಿದ್ಯಾರ್ಥಿಗಳ ಕೊರತೆ ಇಲ್ಲ. ಈಗ ಇರುವುದು ಕೊಠಡಿಗಳ ಕೊರತೆ !

ಬೆಳ್ತಂಗಡಿ ತಾಲೂಕಿನ ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕೊಠಡಿ ಸಮಸ್ಯೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಶಾಲೆಯ ಹೊರಗಡೆ ಪಾಠ ಕೇಳುವ ಪರಿಸ್ಥಿತಿ ಉಂಟಾಗಿದೆ. ಕೊಠಡಿ ಕೊರತೆ ನೀಗಿಸುವ ಉದ್ದೇಶದಿಂದ   ಎಸ್‌ಡಿಎಂಸಿ  ಮತ್ತು ಊರಿನವರು ಕೈಗೆತ್ತಿಕೊಂಡ ಕೊಠಡಿ ನಿರ್ಮಾಣ ಕಾಮಗಾರಿ ಈಗ  ಅನುದಾನದ ಕೊರತೆಯಿಂದಾಗಿ ಅರ್ಧದಲ್ಲಿ ನಿಂತಿದೆ. ಮೇಲಂತಸ್ತಿನ ಕೆಲಸ ಮೇಲೇರುತ್ತಿಲ್ಲ. 

ವಿದ್ಯಾರ್ಥಿಗಳ ಆಶಾಕಿರಣ 
ಮಚ್ಚಿನದಲ್ಲಿ ಮೊದಲು ಪ್ರಾಥಮಿಕ ಶಿಕ್ಷಣ ಮಾತ್ರ ಲಭ್ಯವಿತ್ತು. ಮಚ್ಚಿನ ಗ್ರಾಮ ಅಷ್ಟೇ ಅಲ್ಲದೆ ನೆರೆಹೊರೆಯ ಗ್ರಾಮಗಳ ವಿದ್ಯಾರ್ಥಿಗಳು ಕೂಡ ಇಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದರು. ಆದರೆ ಪ್ರೌಢಶಾಲಾ ಶಿಕ್ಷಣದ ಬೇಡಿಕೆ ಈಡೇರಲಿಲ್ಲ. ಪ್ರೌಢಶಿಕ್ಷಣಕ್ಕಾಗಿ ಮಡಂತ್ಯಾರು ಅಥವಾ ಪುಂಜಾಲಕಟ್ಟೆ  ಶಾಲೆಗೆ ತೆರಳಬೇಕಾಗಿತ್ತು. ಸಂಚಾರ ವ್ಯವಸ್ಥೆ ಮತ್ತು ಆರ್ಥಿಕ ಸಮಸ್ಯೆಯಿಂದ ಪ್ರಾಥಮಿಕ ಹಂತದ ಶಿಕ್ಷಣಕ್ಕೆ ಸೀಮಿತಗೊಳಿಸುವ ಅನಿವಾರ್ಯತೆ ಇತ್ತು. ಬಹುಜನರ ಬೇಡಿಕೆಯಂತೆ ಮಚ್ಚಿನ ಗ್ರಾಮಕ್ಕೆ  2007ರಲ್ಲಿ ಪ್ರೌಢಶಾಲೆ ಮಂಜೂರುಗೊಂಡು  2012ರಲ್ಲಿ ನೂತನ ಕಟ್ಟಡದಲ್ಲಿ ಕಾರ್ಯಾರಂಭಿಸಿತು. ಮೂರು ಕೊಠಡಿಗಳನ್ನು ಒಳಗೊಂಡಿದ್ದು  9 ಮತ್ತು 10ನೇ ತರಗತಿಗಳನ್ನು ನಡೆಸುತ್ತಾ ಬಂದಿದೆ. ಪ್ರಸ್ತುತ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದ್ದು ಒಂದು ಕೊಠಡಿಯಲ್ಲಿ 70 ಮಕ್ಕಳು ಕುಳಿತುಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಬೇಕಾದ ಗ್ರಂಥಾಲಯ ಕೂಡ ಇಲ್ಲ. ಆಫೀಸು ಕೊಠಡಿಯನ್ನೇ ಎಲ್ಲದಕ್ಕೂ ಬಳಸುವಂತಾಗಿದೆ.

ಕಾಮಗಾರಿ ನಿಂತು 3 ವರ್ಷ
ಸ್ಥಳೀಯರ ಮತ್ತು ಆಸಕ್ತರ ಮುಂದಾಳತ್ವದಲ್ಲಿ  ಕಟ್ಟಡ ಕಾಮಗಾರಿ ಪ್ರಾರಂಭಿಸಲಾಯಿತು. ಎಸ್‌.ಇ.ಝಡ್‌.ನಿಂದ 5 ಲ.ರೂ., ತಾ.ಪಂ.ನಿಂದ 2 ಲ.ರೂ., ಧರ್ಮಸ್ಥಳದಿಂದ 50,000ರೂ. ಅನುದಾನ ದೊರಕಿದೆ. ಒಟ್ಟು 7.5 ಲ.ರೂ. ಅನುದಾನದಲ್ಲಿ  ಸುಮಾರು 4.90 ಲ.ರೂ.ವೆಚ್ಚದ ಕಾಮಗಾರಿ ನಡೆದಿದೆ ಎಂದು ತಿಳಿದು ಬಂದಿದೆ. ಗೋಡೆ ನಿರ್ಮಾಣವಾಗಿ 2014ರಲ್ಲಿ ಕಾಮಗಾರಿ ನಿಂತಿದೆ. ಸುಮಾರು 3 ಲ. ರೂ. ಹಣ ಖಾತೆಯಲ್ಲಿದ್ದು ಮುಂದಿನ ಕಾಮಗಾರಿಗೆ ಅನುದಾನ ಸಾಕಾಗದೆ ಅರ್ಧದಲ್ಲಿ ನಿಂತಿದೆ. ಕಾಮಗಾರಿ ಪ್ರಾರಂಭದಲ್ಲಿ  15 ಲ.ರೂ. ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿತ್ತು. ಆದರಂತೆ ಇನ್ನೂ 7.5 ಲ.ರೂ. ಹಣ ಬೇಕಾಗಬಹುದು ಎಂಬುದು ಹೆತ್ತವರ ಲೆಕ್ಕಾಚಾರ. 

ಕಟ್ಟುವುದೋ ಕೆಡವುದೋ?
ಕಾಮಗಾರಿ ಅರ್ಧದಲ್ಲೇ ನಿಂತಿರುವುದರಿಂದ ಮಳೆಗಾಲದಲ್ಲಿ ಕಟ್ಟಡದ ಒಳಗೆ ನೀರು ನಿಲ್ಲುತ್ತದೆ. ಇದರಿಂದ ಕೆಳಗಿನ ಕಟ್ಟಡದಲ್ಲಿ ನೀರು ಸೋರಿಕೆಯಾಗುತ್ತದೆ. ಗೋಡೆಗೆ ನೀರು ಬಿದ್ದು ಅದರ ಗುಣಮಟ್ಟವನ್ನು ಕಳೆದುಕೊಳ್ಳುತ್ತಾ ಬಂದಿದೆ. ಅದೇ ಕಟ್ಟಡದ ಕೆಳಗೆ ವಿದ್ಯಾಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ಆತಂಕದಲ್ಲಿರುವಂತಾಗಿದೆ. ಇದನ್ನು ಕೆಡಹುವ  ಇಲ್ಲವೇ ಕಾಮಗಾರಿ ಮುಂದುವರಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಶೀಘ್ರ ಅನುದಾನ ಒದಗಿಸಿ ಕಟ್ಟಡವನ್ನು ಪೂರ್ಣಗೊಳಿಸಲು ಆದ್ಯತೆ ನೀಡಬೇಕಾಗಿದೆ. ಈ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಆಶಾಕಿರಣವಾಗಿರುವ ಈ ಶಾಲೆ ಮತ್ತಷ್ಟು ಮಂದಿಗೆ ಉತ್ತಮ ಶಿಕ್ಷಣ ಒದಗಿಸುವಂತೆ ಮಾಡಬೇಕಿದೆ. 

ಕಂಪ್ಯೂಟರ್‌ ಇಲ್ಲ
2012ರಿಂದ 2017ರ ಒಳಗೆ ಕಂಪೂಟರ್‌ ಪರೀಕ್ಷೆ ಪಾಸ್‌ ಮಾಡಬೇಕು ಎನ್ನುವ ನಿಯಮ ಇದೆ. ಮಚ್ಚಿನ ಪ್ರೌಢಶಾಲೆಗೆ ಕಂಪ್ಯೂಟರ್‌ ಟೇಬಲ್‌, ಬ್ಯಾಟರಿ ಇವುಗಳನ್ನು ನೀಡಿದ್ದು ಇದುವರೆಗೆ ಕಂಪ್ಯೂಟರ್‌ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಶಿಕ್ಷಣ ಲಭಿಸುತ್ತಿಲ್ಲ. ಶಾಲೆಯ ಆನ್‌ಲೈನ್‌ ಕೆಲಸಕ್ಕೂ  ಶಿಕ್ಷಕರು ಸೈಬರ್‌ ಬಳಸಬೇಕಾಗಿದೆ.

ಕಂಪ್ಯೂಟರ್‌ ಶೀಘ್ರ ಪೂರೈಕೆ 
ಡಿಎಸ್‌ಇಆರ್‌ಟಿಯಿಂದ ಶಾಲೆಗಳನ್ನು  ಐಸಿಟಿ 1, 2 ಎಂದು ವಿಭಜನೆ ಮಾಡಿ ಹಂಚಿಕೆ ಮಾಡಲಾಗುತ್ತಿದೆ.  ಈ ಶಾಲೆಗೂ ಶೀಘ್ರದಲ್ಲಿ   ಕಂಪ್ಯೂಟರ್‌ ಪೂರೈಕೆ ಆಗಲಿದೆ.

 – ಗುರು ಪ್ರಸಾದ್‌, ಕ್ಷೇತ್ರ ಶಿಕ್ಷಣಾಧಿಕಾರಿ,  ಬೆಳ್ತಂಗಡಿ

ಮುಂದಿನ ಕಾಮಗಾರಿಗೆ ಕ್ರಮ 
ಮಚ್ಚಿನ ಪ್ರೌಢಶಾಲೆಯ ಕಟ್ಟಡ ಕಾಮಗಾರಿ ಅರ್ಧದಲ್ಲಿ ನಿಂತಿದ್ದು  ಈ ವರೆಗೆ ಆದ ಖರ್ಚುವೆಚ್ಚಗಳ ಬಗ್ಗೆ ಲೆಕ್ಕಾಚಾರ ಮಾಡಿ ಮುಂದಿನ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಲಾಗುವುದು.

– ವಸಂತ ಬಂಗೇರ, ಬೆಳ್ತಂಗಡಿ ಶಾಸಕರು

– ಪ್ರಮೋದ್‌ ಬಳ್ಳಮಂಜ

ಟಾಪ್ ನ್ಯೂಸ್

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.