ಶಿವನ ದೇಗುಲಗಳಿಗೆ ಹರಿದು ಬಂದ ಭಕ್ತರು


Team Udayavani, Feb 25, 2017, 12:57 PM IST

mys7.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಅರಮನೆಯ ಆವರಣದಲ್ಲಿರುವ ಐತಿಹಾಸಿಕ ತ್ರಿನೇಶ್ವರಸ್ವಾಮಿ ದೇವಸ್ಥಾನ ಸೇರಿದಂತೆ ನಗರದ ಶಿವ ದೇವಾಲಯಗಳಲ್ಲಿ ಶುಕ್ರವಾರ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಂಜಾನೆಯಿಂದಲೇ ದೇವಾಲಯಗಳತ್ತ ಧಾವಿಸಿದ ಸಾವಿರಾರು ಮಂದಿ ಶಿವ ಭಕ್ತರು ಶಿವನ ದರ್ಶನ ಪಡೆದು ಶ್ರದ್ಧಾ, ಭಕ್ತಿಯಿಂದ ಮಹಾಶಿವರಾತ್ರಿ ಹಬ್ಬ ಆಚರಿಸಿದರು. ಆ ಮೂಲಕ ದಿನವಿಡೀ ಶಿವನ ಆರಾಧನೆಯಲ್ಲಿ ತಲ್ಲೀನರಾದ ಭಕ್ತರು ಪರಶಿವನ ಸ್ಮರಣೆ ಮಾಡುತ್ತಾ ಜಾಗರಣೆ ಮಾಡುವ ಮೂಲಕ ಭಗವಂತನ ಕೃಪೆಗೆ ಪಾತ್ರರಾದರು.

ತ್ರಿನೇಶ್ವರಸ್ವಾಮಿ ದೇವಸ್ಥಾನ: ಶಿವರಾತ್ರಿ ಹಿನ್ನೆಲೆಯಲ್ಲಿ ಅರಮನೆಯ ಶ್ರೀ ತ್ರಿನೇಶ್ವರ ದೇವಸ್ಥಾನದಲ್ಲಿ ಸೋಮಧಿವಾರ ಮುಂಜಾನೆ 4.30ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭಗೊಂಡಿತು. ಗಂಗಾಜಲ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳನ್ನು ಸಲ್ಲಿಸಲಾಯಿತು.ಶಿವರಾತ್ರಿ ಹಿನ್ನೆಲೆಯಲ್ಲಿ ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ರಾಜವಂಶಸ್ಥೆ ಡಾ. ಪ್ರಮೋದಾದೇವಿ ಒಡೆಯರ್‌ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಅಂತೆಯೇ ಧಾರ್ಮಿಕ ಕೈಂಕರ್ಯಗಳು ಪೂರ್ಣಗೊಂಡ ಬಳಿಕ ¸‌ಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದೇವರ ದರ್ಶನ ಪಡೆದ ಭಕ್ತರು ದೇವರಿಗೆ ಬಿಲ್ವಪತ್ರೆ ಸಮರ್ಪಿಸಿ, ಭಕ್ತಭಾವ ಮೆರೆದರು. ಶಿವರಾತ್ರಿ ಪ್ರಯುಕ್ತ ತ್ರಿನೇಶ್ವರಸ್ವಾಮಿಗೆ 11 ಕೆಜಿ ತೂಕದ ಚಿನ್ನದ ಕೊಳಗ (ಮುಖವಾಡ) ಧಾರಣೆ ಮಾಡಲಾಗಿತ್ತು. ದೇವರಿಗೆ ಶಿವರಾತ್ರಿಯಂದು ಮಾತ್ರವೇ ಚಿನ್ನದ ಮುಖವಾಡವನ್ನು ಧಾರಣೆ ಮಾಡುವುದರಿಂದ ವಿಶೇಷ ಆಕರ್ಷಣೆಯಲ್ಲಿದ್ದ ದೇವರ ದರ್ಶನ ಪಡೆಯಲು ಅಪಾರ ಸಂಖ್ಯೆಯ ಭಕ್ತರ ದೇವಸ್ಥಾನಕ್ಕೆ ಆಗಮಿಸಿದ್ದರು.

ಎಲ್ಲೆಡೆ ಶಿವನಾಮ ಸ್ಮರಣೆ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಶಿವನಾಮ ಸ್ಮರಣೆ ಕೇಳಿಬಂತು. ಪ್ರಮುಖವಾಗಿ ಶಿವದೇವಾಲಯಗಳು ಸೇರಿದಂತೆ ಇತರೆ ದೇವಸ್ಥಾನಗಳಲ್ಲೂ ಶಿವರಾತ್ರಿ ಅಂಗವಾಗಿ ನಾನಾ ಪೂಜಾ ಕೈಂಕರ್ಯಗಳು ನಡೆಯಿತು.

ಅದರಂತೆ ಶಿರಡಿ ಸಾಯಿ ಸೇವಾಶ್ರಮಟ್ರಸ್ಟ್‌ನಿಂದ ಶಿವರಾತ್ರಿ ಅಂಗವಾಗಿ ಶಿವಗಣ ಹೋಮ, ಸಂಕಲ್ಪ, ಪುಷ್ಪಾರ್ಚನೆ, ಅಭಿಷೇಕ, ಭಜನೆ, ಪ್ರಸಾದ ವಿನಿಯೋಗ ನಡೆಯಿತು. ಲಷ್ಕರ್‌ ಮೊಹಲ್ಲಾದ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರ ಉತ್ಸವಮೂರ್ತಿ, ಸುವರ್ಣ ಕೊಳಗದ ಮೆರವಣಿಗೆ, ಮಹದೇಶ್ವರ ಸ್ವಾಮಿ ಪ್ರಾಣಲಿಂಗಕ್ಕೆ ಮಹಾರುದ್ರಾಭಿಷೇಕ ಇನ್ನಿತರ ಪೂಜೆಗಳು ನಡೆದವು.

ಉಳಿದಂತೆ ಚಾಮುಂಡಿಬೆಟ್ಟದ ಮಹಾಬಲೇಶ್ವರ ಸ್ವಾಮಿದೇವಸ್ಥಾನ, ಗಂಗೋತ್ರಿ ಬಡಾವಣೆಯಲ್ಲಿರುವ ಮಾರುತಿ ದೇವಸ್ಥಾನ, ಹಳೆಸಂತೇಪೇಟೆ ಪ್ರಸನ್ನ ನಂಜುಂಡೇಶ್ವರ ಸ್ವಾಮಿದೇವಸ್ಥಾನ, ಖೀಲ್ಲೆ ಮೊಹಲ್ಲಾ ಬೈರವೇಶ್ವರಸ್ವಾಮಿ ದೇವಸ್ಥಾನ, ಅಗ್ರಹಾರದ ನೂರೊಂದು ಗಣಪತಿದೇವಸ್ಥಾನ, ನಾಗಲಿಂಗೇಶ್ವರ ಮಠ, ವೀರನಗೆರೆ ಮುಕ್ಕಣ್ಣೇಶ್ವರಸ್ವಾಮಿ ದೇವಾಲಯ, ವಿಜಯನಗರದ ಯೋಗಾನರಸಿಂಹಸ್ವಾಮಿ ದೇವಾಲಯ, ದೇವರಾಜ ಮೊಹಲ್ಲಾ ದಿವಾನ್ಸ್‌ರಸ್ತೆ ಅಮೃಧಿತೇಶ್ವರ ದೇವಾಲಯ, ವಿವಿ ಮೊಹಲ್ಲಾದ ಚಂದ್ರಮೌಳೇಶ್ವರ ದೇವಾಲಯ, ಕುರುಬಾರಹಳ್ಳಿ ಮಲೆ ಮಹದೇಶ್ವರ ಸ್ವಾಮಿದೇವಾಲಯ, ಚಾಮುಂಡಿಪುರಂನ ಪ್ರಸನ್ನ ವಿರೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.

ಮಳೆಯಾಗದೆ ಬರಗಾಲ ಬಂದಿರುವುದರಿಂದ ಜನ-ಜಾನುವಾರುಗಳಿಗೆ ತೊಂದರೆ ಉಂಟಾಗಿದೆ. ಈ ವರ್ಷವಾದರೂ ಉತ್ತಮ ಮಳೆಯಾಗಿ ಬರಗಾಲ ನಿವಾರಣೆಯಾಗಲಿ ಎಂದು ತ್ರಿನೇಶ್ವರ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ.
-ಡಾ.ಪ್ರಮೋದಾದೇವಿ ಒಡೆಯರ್‌, ರಾಜ ವಂಶಸ್ಥರು.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.