ಉಡುಪಿ ಜಿಲ್ಲಾಸ್ಪತ್ರೆ ರಾಜ್ಯದ ಮೊದಲ ಸರಕಾರಿ ಇ-ಆಸ್ಪತ್ರೆ


Team Udayavani, Feb 28, 2017, 2:50 PM IST

govt-hospital.jpg

ಉಡುಪಿ: ಚಿಕಿತ್ಸೆಗಾಗಿ ಹೊರರೋಗಿಗಳು, ಒಳರೋಗಿಗಳ ಅಲೆದಾಟ, ಬಿಲ್ಲಿಂಗ್‌ಗಾಗಿ ಕಾದು ಕಾದು ಸುಸ್ತಾಗುವುದು, ಆಸ್ಪತ್ರೆಯಲ್ಲಿ ದಾಖಲಾತಿಗಾಗಿ ಗಂಟೆಗಟ್ಟಲೆ ಕಾಯುವ ತಾಪತ್ರಯ… ಇದು ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ನಿತ್ಯ ಕಾಣುವ ಪರಿಸ್ಥಿತಿ. ಆದರೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಇನ್ಮುಂದೆ ರೋಗಿಗಳಿಗೆ ಇದ್ಯಾವುದೇ ಸಮಸ್ಯೆ ಎದುರಾಗದು. ಯಾಕೆಂದರೆ ಅಜ್ಜರಕಾಡಿನ ಸರಕಾರಿ ಜಿಲ್ಲಾಸ್ಪತ್ರೆಯು ರಾಜ್ಯದಲ್ಲೇ ಮೊದಲ ಸರಕಾರಿ ಇ-ಆಸ್ಪತ್ರೆಯಾಗಿ ಮಾರ್ಪಾಡಾಗಲಿದೆ.

ಬೆಂಗಳೂರಿನಲ್ಲಿ ಸರಕಾರದ ಜತೆಗೆ ಖಾಸಗಿ ಸಹಭಾಗಿತ್ವ ಹೊಂದಿರುವ ಕೆ.ಸಿ. ಜನರಲ್‌ ಆಸ್ಪತ್ರೆ ಹಾಗೂ ಸಂಜಯ್‌ ಗಾಂಧಿ ಆಸ್ಪತ್ರೆ ಹೊರತುಪಡಿಸಿದರೆ ಸಂಪೂರ್ಣ ಸರಕಾರಿ ಆಸ್ಪತ್ರೆಗಳಲ್ಲಿ ಆನ್‌ಲೈನ್‌ ಮುಖಾಂತರ ವ್ಯವಹಾರ ನಡೆಸುವ ಯಾವುದೇ ಆಸ್ಪತ್ರೆಗಳು ರಾಜ್ಯದಲ್ಲಿ ಇಲ್ಲ. ಉಡುಪಿ ಸರಕಾರಿ ಜಿಲ್ಲಾಸ್ಪತ್ರೆಯು ಮಾ. 13ರಂದು “ಪೇಪರ್‌ಲೆಸ್‌’ ಆಗಲಿದ್ದು, ಆ ಮೂಲಕ ರಾಜ್ಯದಲ್ಲೇ ಹೊಸ ಮೈಲುಗಲ್ಲು ಸ್ಥಾಪಿಸಲಿದೆ.

ಮೊದಲಿಗೆ ಮೂರು ಸೇವೆ
ಆಸ್ಪತ್ರೆಗಳಲ್ಲಿ ಲಭ್ಯವಿರುವ ಒಟ್ಟು 16 ವಿಭಾಗದಲ್ಲಿ ಮೊದಲಿಗೆ 3 ವಿಭಾಗಗಳಲ್ಲಿ ಆನ್‌ಲೈನ್‌ ಸೇವೆಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಒಳರೋಗಿ ವಿಭಾಗ, ಹೊರರೋಗಿ ವಿಭಾಗ, ಬಿಲ್ಲಿಂಗ್‌ ವಿಭಾಗವು ಸಂಪೂರ್ಣ ಪೇಪರ್‌ಲೆಸ್‌ ಆಗಲಿದೆ. ಮುಂಬರುವ ದಿನಗಳಲ್ಲಿ ದಾಖಲಾತಿ, ಲ್ಯಾಬ್‌, ಎಕ್ಸ್‌-ರೇ ಸಹಿತ ಎಲ್ಲ 16 ವಿಭಾಗಗಳಲ್ಲೂ ಆನ್‌ಲೈನ್‌ ಸೇವೆ ಒದಗಿಸಲಾಗುವುದು. ರಶೀದಿ ಶುಲ್ಕಕೂಡ ಶೀಘ್ರ ನಗದು ರಹಿತವಾಗಿಸುವ ಯೋಜನೆಯಿದೆ ಎಂದು ಸರ್ಜನ್‌ ಡಾ| ಮಧುಸೂದನ್‌ ನಾಯಕ್‌ ತಿಳಿಸಿದ್ದಾರೆ.

ಹೈದರಾಬಾದ್‌ ಮೂಲದ ಲ್ಯುಮಿನಸ್‌ ಕಂಪೆನಿಗೆ ಇದರ ಜವಾಬ್ದಾರಿ ನೀಡಲಾಗಿದೆ. ಒಡಿಶಾದ ಅನಿಮೇಶ್‌ ನೇತೃತ್ವದಲ್ಲಿ ಕಾರ್ಯ ಪ್ರಗತಿಯಲ್ಲಿದೆ. ಕಂಪ್ಯೂಟರ್‌ಗಳಿಗೆ ಬೇಕಾದ ತಂತ್ರಜ್ಞಾನಗಳನ್ನೆಲ್ಲ ಅಭಿವೃದ್ಧಿಪಡಿಸುತ್ತಿದ್ದಾರೆ. ಅವರೊಂದಿಗೆ ಬಿಹಾರ ಮೂಲದ ಗೌತಮ್‌ ಕೂಡ ಸಾಫ್ಟ್ವೇರ್‌ ಅಳವಡಿಕೆಯಲ್ಲಿ ಸಹಕರಿಸುತ್ತಿದ್ದಾರೆ.

ಮಾ. 13: ಜನೌಷಧ ಮಳಿಗೆಗೆ ಚಾಲನೆ
ಜಿಲ್ಲಾಸ್ಪತ್ರೆಯಲ್ಲಿ ಜನೌಷಧ ಮಳಿಗೆಯು ಮಾ. 13ರಂದು ಉದ್ಘಾಟನೆಗೊಳ್ಳಲಿದ್ದು, ಅದೇ ದಿನ ಇ- ಆಸ್ಪತ್ರೆ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಚಾಲನೆ ನೀಡಲಿದ್ದಾರೆ.

ಏನು ಪ್ರಯೋಜನ?
ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳು ಇ-ಆಸ್ಪತ್ರೆಗಳಾಗಿ ಅಭಿವೃದ್ಧಿ ಹೊಂದಿದರೆ ಮುಂದಿನ ದಿನಗಳಲ್ಲಿ ಒಬ್ಬ ರೋಗಿಯು ರಾಜ್ಯದ ಯಾವುದೇ ಆಸ್ಪತ್ರೆಗಳಲ್ಲಿ ದಾಖಲಾದರೂ ಅವರ ಎಲ್ಲ ಮಾಹಿತಿ ಕಂಪ್ಯೂಟರ್‌ನಲ್ಲಿ ಲಭ್ಯವಿರುತ್ತದೆ. ಆ ರೋಗಿಯ ಆಧಾರ್‌ ನಂಬರ್‌ ಅಥವಾ ಮೊಬೈಲ್‌ ನಂಬರ್‌ ಮೂಲಕ ಅವರ ಬಗ್ಗೆ ಮಾಹಿತಿ ಪಡೆಯಬಹುದು.
ಉದಾಹರಣೆಗೆ ಉಡುಪಿಯ ವ್ಯಕ್ತಿ ಮೊದಲಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಯಾವುದಾದರೂ ರೋಗಕ್ಕೆ ಚಿಕಿತ್ಸೆ ಪಡೆದಿದ್ದರೆ, ಅನಂತರ ಮಂಗಳೂರು ಅಥವಾ ಬೇರೆ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಾದಾಗ ಅವರ ಮೊಬೈಲ್‌ ಅಥವಾ ಆಧಾರ್‌ ನಂಬರ್‌ ಹಾಕಿದಾಗ ಆ ವ್ಯಕ್ತಿಗೆ ಹಿಂದೆ ನೀಡಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಲಭಿಸುತ್ತದೆ. ಅದರ ಜತೆಗೆ ಆಸ್ಪತ್ರೆಗಳಲ್ಲಿ ದಿನವೊಂದಕ್ಕೆ ಬಳಕೆಯಾಗುವ ಅಪಾರ ಪ್ರಮಾಣದ ಕಾಗದವೂ ಉಳಿತಾಯವಾಗುವುದರಿಂದ ಇದರ ಹಿಂದೆ ಪರಿಸರ ಸಂಬಂಧಿ ಕಳಕಳಿಯೂ ಇದೆ ಎನ್ನಲಡ್ಡಿಯಿಲ್ಲ.

ಸುಲಭ ಸೇವೆ
ಜನರಿಗೆ ಸುಲಭವಾಗಿ ವೈದ್ಯಕೀಯ ಸೇವೆಗಳು ಲಭ್ಯವಾಗಲಿ ಎನ್ನುವ ದೃಷ್ಟಿಯಿಂದ ರಾಜ್ಯ ಸರಕಾರವು ಈ ಸೇವೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಉಡುಪಿಯನ್ನೇ ಕೇಂದ್ರವಾಗಿಟ್ಟುಕೊಂಡು ಆರೋಗ್ಯ ಇಲಾಖೆಯು ಈ ಯೋಜನೆಜಾರಿಗೆ ತರುತ್ತಿದ್ದು, ಜನರು ಇದರ ಸದುಪಯೋಗಪಡಿಸಿಕೊಳ್ಳಬೇಕು. ಸಾರ್ವಜನಿಕರಿಗೆ, ರೋಗಿಗಳಿಗೆ ಯಾವುದೇ ರೀತಿಯ ಗೊಂದಲ, ತೊಂದರೆ ಉಂಟಾಗದಂತೆ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.
 – ಪ್ರಮೋದ್‌ ಮಧ್ವರಾಜ್‌ ,ಜಿಲ್ಲಾ  ಉಸ್ತುವಾರಿ ಸಚಿವ

ಜನರಿಗೆ ಹೆಚ್ಚಿನ ಅನುಕೂಲ
ಸಾರ್ವಜನಿಕರಿಗೆ ಇನ್ನಷ್ಟು ಸುಲಭವಾಗಿ ಆರೋಗ್ಯ ಸಂಬಂಧಿ ಸೇವೆಗಳು ಲಭ್ಯವಾಗಲಿ ಅನ್ನುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯನ್ನು ಇ-ಆಸ್ಪತ್ರೆಯಾಗಿ ಮಾರ್ಪಡು ಮಾಡಲಾಗುತ್ತಿದೆ. ಈಗಾಗಲೇ ಒಂದು ಖಾಸಗಿ ಸಂಸ್ಥೆಗೆ ಅದರ ಜವಾಬ್ದಾರಿ ವಹಿಸಿಕೊಟ್ಟಿದ್ದು, ಅವರು ಅದರ ಎಲ್ಲ ರೀತಿಯ ಸಾಧಕ-ಬಾಧಕಗಳನ್ನು ಪರಿಶೀಲಿಸುತ್ತಿದ್ದಾರೆ.
 – ಡಾ| ರೋಹಿಣಿ, ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ

32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿMulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ

INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ

Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ

Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

1-aaaa

Udupi; ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ

32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿMulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.