ಇಂಜಿನಿಯರ್ ನಿವಾಸದ ಮೇಲೆ ಎಸಿಬಿ ದಾಳಿ: ಅಪಾರ ಚಿನ್ನಾಭರಣ ಪತ್ತೆ
Team Udayavani, Mar 3, 2017, 9:19 AM IST
ಮೈಸೂರು : ಗ್ರಾಮೀಣ ನೀರು ಪೂರೈಕೆ ಇಲಾಖೆ ಯ ಅಧೀಕ್ಷಕ ಇಂಜಿನಿಯರ್ ನಿವಾಸದ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಭ್ರಷ್ಟಾಚಾರ ನಡೆಸಿದ್ದಾರೆ ಎಂದು ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಅಧೀಕ್ಷಕ ಇಂಜಿನಿಯರ್ ರಂಗನಾಥ ನಾಯಕ್ ವಿಜಯನಗರದ ನಿವಾಸದ ಮೇಲೆ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದ್ದು , ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿರುವ ಬಗ್ಗೆ ವರದಿಯಾಗಿದೆ.
ದಾಳಿ ವೇಳೆ 1 ಕೆ.ಜಿ.ಗೂ ಹೆಚ್ಚು ಚಿನ್ನಾಭರಣ ಮತ್ತು ಅಪಾರ ಪ್ರಮಾಣದ ಬೆಳ್ಳಿಯ ವಸ್ತುಗಳು ಪತ್ತೆಯಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.