ವಿದೇಶಿಯರಿಗೆ ನಶೆಯೇರಿಸುತ್ತಿವೆ ಸಮುದ್ರ ಬಾಳೆ ಬೀಜ!


Team Udayavani, Mar 4, 2017, 3:50 AM IST

03-gvt-03a.jpg

ಗಂಗಾವತಿ: ಹಂಪಿ, ಕಿಷ್ಕಿಂದ ಹಾಗೂ ವಿರೂಪಾಪುರಗಡ್ಡಿ ಪ್ರದೇಶದ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಹಾಗೂ ಅಧ್ಯಯನಕ್ಕೆ ಆಗಮಿಸುವ ವಿದೇಶಿಯರಿಗೆ ಮತ್ತೇರಿಸಿಕೊಳ್ಳಲು ಈಗ ಹೊಸದೊಂದು ಮಾದಕ ವಸ್ತು ಸಿಕ್ಕಿದೆ.

ವಿದೇಶಿ ಪ್ರವಾಸಿಗರು ಇಲ್ಲಿನ ರೆಸಾರ್ಟ್‌ಗಳಲ್ಲಿ ವಾರ, ತಿಂಗಳುಗಟ್ಟಲೆ ಕಾಲ ಕಳೆಯುತ್ತಾರೆ. ಬೇಸಿಗೆ ಸಂದರ್ಭದಲ್ಲಿ ವಿದೇಶಿಯರು, ಐಟಿ-ಬಿಟಿ ವಲಯದ ಟೆಕ್ಕಿಗಳು ಇಲ್ಲಿ ವಿಶ್ರಾಂತಿ ಪಡೆಯುತ್ತಾರೆ, ಬಿಸಿಲಿಗೆ ಮೈಯೊಡ್ಡುತ್ತಾರೆ, ಜಲಾಶಯ – ನದಿಯಲ್ಲಿ ಮನದಣಿಯೆ ಈಜುತ್ತಾರೆ.

ಹೋಟೆಲ್‌, ರೆಸ್ಟೊರೆಂಟ್‌ಗಳಲ್ಲೂ ಮದ್ಯ- ಸಿಗರೇಟು ಇತ್ಯಾದಿ ಮಾರಾಟ ಆಗುತ್ತಿರುತ್ತದೆ.  ಗಾಂಜಾ, ಚರಸ್‌ ಇತ್ಯಾದಿಗಳ ಪೂರೈಕೆಯೂ ಕಣ್ಣೆದುರೇ ನಡೆಯುತ್ತದೆ ಈಗ ಅದರ ಜೊತೆಗೆ ಮತ್ತೆರಿಸುವ ಸಮುದ್ರಬಾಳೆಯೂ ಸೇರ್ಪಡೆಗೊಂಡಿದೆ.

ನಶೆಗಾಗಿ ಗಿಡಮೂಲಿಕೆ ಬಳಕೆ:
ಇಲ್ಲಿಗೆ ಆಗಮಿಸುವ ಕೆಲ ವಿದೇಶಿ ಪ್ರವಾಸಿಗರು ಗಾಂಜಾ ಸೇವಿಸುತ್ತಾರೆ. ಇದರೊಂದಿಗೆ ಸ್ಥಳೀಯವಾಗಿ ಗರಿಷ್ಠ ಪ್ರಮಾಣದಲ್ಲಿ ಸಿಗುವ ಸಮುದ್ರಬಾಳೆ ಎಂಬ ಗಿಡದ ಎಲೆ ಹಾಗೂ ಬೀಜಗಳನ್ನು ಸೇವಿಸಿ ಮತ್ತು ಬರಿಸಿಕೊಳ್ಳುವುದು ಸಾಮಾನ್ಯವಾಗಿದೆ. ವಿರೂಪಾಪುರಗಡ್ಡಿಯ ಬಹುತೇಕ ಅಂಗಡಿಗಳಲ್ಲಿ 1000ದಿಂದ 2000 ರೂ. ವರೆಗೆ ಸಮುದ್ರಬಾಳೆ ಬೀಜಗಳು ಮಾರಾಟವಾಗುತ್ತವೆ. ಬೀಜ ಸೇವಿಸಿದ ವ್ಯಕ್ತಿ ವಾಂತಿ ಮಾಡಿಕೊಳ್ಳುತ್ತಾನೆ. ಆ ಬಳಿಕ ಸುಮಾರು ಎರಡು ದಿನಗಳ ಕಾಲ ತನ್ನ ಸ್ಥಿಮಿತ ಕಳೆದುಕೊಂಡು ಮತ್ತಿನ ಲೋಕದಲ್ಲಿ ವಿಹರಿಸುತ್ತಾನೆ. ವಿದೇಶಿಯರು ಈ ಬೀಜಗಳನ್ನು ಮುಗಿಬಿದ್ದು ಖರೀದಿಸುವುದರಿಂದ ಇವುಗಳನ್ನು ಸಂಗ್ರಹಿಸಲು ಇಲ್ಲಿನ ಕೆಲವು ಯುವಕರು ನದಿಯ ದಂಡೆ, ಕುರುಚಲು ಕಾಡುಗಳಲ್ಲಿ ಅಡ್ಡಾಡುತ್ತಾರೆ.

ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿ:
ಇತಿಹಾಸ ಪ್ರಸಿದ್ಧ ಹಂಪಿ, ಕಿಷ್ಕಿಂದ ಪ್ರದೇಶ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಂದ ಸಮುದ್ರ ಬಾಳೆ ಬೀಜ ಖರೀದಿ ನಡೆಯುತ್ತದೆ. ಪ್ರತಿದಿನ ಸ್ಥಳೀಯ ಕೆಲವರು ಬೀಜ ಸಂಗ್ರಹ ಮಾಡಿ ಅಂಗಡಿಗಳಿಗೆ ಕೊಡುತ್ತಾರೆ. ಅಂಗಡಿಯವರು ಸ್ಥಳೀಯರಿಂದ ಕಡಿಮೆ ಬೆಲೆಗೆ ಬೀಜ ಖರೀದಿಸಿ, ದುಬಾರಿ ಬೆಲೆಗೆ ಮಾರುವುದು ಸಾಮಾನ್ಯವಾಗಿದೆ.  ವಹಿವಾಟು ಜೋರಾಗಿಯೇ ಇದೆ. ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಂಡು ಇದನ್ನು ತಡೆಗಟ್ಟಬೇಕು ಎಂದು ಸ್ಥಳೀಯ  ನಾಗರಿಕರು ಆಗ್ರಹಿಸುತ್ತಿದ್ದಾರೆ.

ಹಂಪಿ ವಿರೂಪಾಪುರಗಡ್ಡಿ ಪ್ರದೇಶ ಐತಿಹಾಸಿಕವಾಗಿ ಮಹತ್ವದ್ದು. ಪ್ರತಿದಿನವೂ ಸಾವಿರಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ನಿಯೋಜನೆ ಮಾಡಲಾಗಿದೆ. ಸಮುದ್ರ ಬಾಳೆ ಬೀಜ ಸೇವನೆ ಮಾಡಿ ನಶೆ ಹೆಚ್ಚಿಸಿಕೊಳ್ಳುವ ಪ್ರವೃತ್ತಿ ಹೆಚ್ಚಾಗುತ್ತಿರುವ ಮಾಹಿತಿ ಇಲಾಖೆಗೆ ಇದೆ. ಬೀಜದ ಮಾದರಿ ಸಂಗ್ರಹ ಮಾಡಿ ತೋಟಗಾರಿಕೆ ಇಲಾಖೆ ಅಥವಾ ವಿವಿಗೆ ಕಳುಹಿಸಲಾಗುವುದು.  ಸ್ಥಳೀಯರಲ್ಲೂ ಜಾಗೃತಿ ಮೂಡಿಸಲು ಇಲಾಖೆ ಕ್ರಮ ಕೈಗೊಳ್ಳಲಿದೆ.
– ಡಾ| ಕೆ. ತ್ಯಾಗರಾಜನ್‌, ಕೊಪ್ಪಳ ಪೊಲೀಸ್‌ ವರಿಷ್ಠಾಧಿಕಾರಿ

– ಕೆ. ನಿಂಗಜ್ಜ

ಟಾಪ್ ನ್ಯೂಸ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.