ರಾಜ್ಯದಲ್ಲಿ ಉದ್ಯೋಗ ಖಾತ್ರಿ ಕೆಲಸದ ಅವಧಿ ಕಡಿತ


Team Udayavani, Mar 6, 2017, 3:45 AM IST

Labur.jpg

ಚಿತ್ರದುರ್ಗ: ಕೆಂಡದಂತಹ ಬಿಸಿಲು ಜನಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತಿರುವುದರಿಂದ ರಾಜ್ಯ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಮಾಡುವ ಕಾರ್ಮಿಕರ ಕೂಲಿ ಕೆಲಸದಲ್ಲಿ ಸ್ಪಲ್ಪ ಮಟ್ಟಿನ ರಿಯಾಯಿತಿ ನೀಡಿದೆ.

ರಾಜ್ಯವನ್ನು ಕಾಡುತ್ತಿರುವ ಬರ, ಬಿರುಬಿಸಿಲಿನಿಂದ ಕೂಲಿ ಕಾರ್ಮಿಕರನ್ನು ರಕ್ಷಿಸಲು ಕೆಲಸದ ಅವಧಿಯ ಪ್ರಮಾಣದಲ್ಲಿ ಕಡಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವ ಎಚ್‌.ಕೆ. ಪಾಟೀಲ್‌ ಮಾ. 1ರಂದು ಆದೇಶ ಹೊರಡಿಸಿದ್ದಾರೆ.

ತೆಲಂಗಾಣ ರಾಜ್ಯ ರೂಪಿಸಿರುವ ಹೊಸ ಮಾದರಿ ಅನುಸರಿಸಲು ಕರ್ನಾಟಕವೂ ಮುಂದಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರು, ತಮಗೆ ನಿಗದಿಪಡಿಸಿದ ಕೆಲಸಕ್ಕಿಂತ ಕಡಿಮೆ ಕೆಲಸ ಮಾಡಿದರೂ ಸಾಕೆಂದು ಆದೇಶಿಸಲಾಗಿದೆ.
ರಿಯಾಯಿತಿ ಪ್ರಮಾಣ ನಿಗದಿ:

ಫೆಬ್ರವರಿಯಿಂದ ಜೂನ್‌ವರೆಗೆ ರಿಯಾಯಿತಿ ಪ್ರಮಾಣದಲ್ಲಿ ಕೆಲಸ ಮಾಡುವ ಭಾಗ್ಯವನ್ನು ಕೂಲಿ ಕಾರ್ಮಿಕರು ಪಡೆದಿದ್ದಾರೆ. ಮಾರ್ಚ್‌ನಲ್ಲಿ ಶೇ.25, ಏಪ್ರಿಲ್‌ನಲ್ಲಿ ಶೇ.30, ಮೇನಲ್ಲಿ ಶೇ.30 ಹಾಗೂ ಜೂನ್‌ನಲ್ಲಿ ಶೇ.20ರಷ್ಟು ರಿಯಾಯಿತಿ ಕೂಲಿ ಕೆಲಸಕ್ಕೆ ನೀಡಲಾಗಿದೆ. ಉದಾಹರಣೆಗೆ ದಿನವೊಂದಕ್ಕೆ ಒಬ್ಬ ಕೂಲಿ ಕಾರ್ಮಿಕ 100 ಮೀಟರ್‌ ಉದ್ದದಷ್ಟು ನೆಲ ಅಗೆತದ ಕೆಲಸ ಮಾಡಬೇಕು ಎಂದಿಟ್ಟುಕೊಳ್ಳೋಣ. ಇದಕ್ಕೆ ಮಾರ್ಚ್‌ ತಿಂಗಳ ಶೇ.25ರಷ್ಟು ರಿಯಾಯಿತಿ ಅಂದರೆ 75 ಮೀಟರ್‌ನಷ್ಟು ನೆಲ ಅಗೆದರೂ ಆತನಿಗೆ ಪೂರ್ಣ ಪ್ರಮಾಣದ ಸಂಬಳವಾದ 224 ರೂ. ನೀಡಬೇಕು. ಜೂನ್‌ ತಿಂಗಳವರೆಗೆ ರಿಯಾಯಿತಿ ಸೌಲಭ್ಯ ಮುಂದುವರಿಯಲಿದೆ.

ಎಲ್ಲ ತಾಲೂಕುಗಳಿಗೂ ಅನ್ವಯ
ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ಅವಧಿ ಕಡಿಮೆಗೊಳಿಸಿರುವ ಆದೇಶ, ರಾಜ್ಯ ಸರ್ಕಾರ ಘೋಷಣೆ ಮಾಡಿರುವ 160 ಬರಪೀಡಿತ ತಾಲೂಕುಗಳಲ್ಲಷ್ಟೇ ಅಲ್ಲದೆ ರಾಜ್ಯದ ಎಲ್ಲ ತಾಲೂಕುಗಳಿಗೂ ಅನ್ವಯವಾಗಲಿದೆ.

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೂಲಿ ಕಾರ್ಮಿಕರಿಗೆ 150 ಮಾನವ ದಿನಗಳಿಗೆ ಕೂಲಿ ದಿನಗಳನ್ನು ಹೆಚ್ಚಿಸಿ ಸರ್ಕಾರ ಕರುಣೆ ತೋರಿತ್ತು. ಈಗ ಬಿಸಿಲಿನ ತಾಪದಿಂದ ಯಾವುದೇ ಸಾವು-ನೋವು ಸಂಭವಿಸಬಾರದು ಎನ್ನುವ ಮುಂಜಾಗ್ರತೆಯಿಂದ ಕೆಲಸದ ಅವಧಿ ಕಡಿಮೆ ಮಾಡಿರುವುದು ಗಮನಾರ್ಹ.

ಮಾ. 1ರಿಂದ ಅನ್ವಯವಾಗುವಂತೆ ನಿಗದಿತ ಕೂಲಿ ಕೆಲಸದ ಪ್ರಮಾಣ ಶೇ.20ರಿಂದ 30ರ ತನಕ ಕಡಿತ ಮಾಡಿ ಕೂಲಿ ಕಾರ್ಮಿಕರಿಗೆ ರಿಯಾಯಿತಿ ನೀಡಲಾಗಿದೆ. ಉದಾಹರಣೆಗೆ ಒಬ್ಬ ಕೂಲಿ ಕಾರ್ಮಿಕ ದಿನವೊಂದಕ್ಕೆ 100 ಕ್ಯೂಬಿಕ್‌ ಮೀ. ಕೆಲಸ ಮಾಡಬೇಕಿದ್ದರೆ ಮಾರ್ಚ್‌ ತಿಂಗಳಲ್ಲಿ ಶೇ.25ರಷ್ಟು ಕಡಿತ ಮಾಡಿ ಶೇ.75ರಷ್ಟು ಕೆಲಸ ಮಾಡಿದರೂ ಸಾಕು. ಈ ಆದೇಶ ರಾಜ್ಯದ ಎಲ್ಲ ತಾಲೂಕುಗಳಿಗೂ ಅನ್ವಯವಾಗಲಿದೆ. ಜೂನ್‌ ಅಂತ್ಯದವರೆಗೆ ಈ ಸೌಲಭ್ಯ ಇರಲಿದೆ.
– ಟಿ.ಎಂ. ವಿಜಯಭಾಸ್ಕರ್‌, ಸರ್ಕಾರದ ಅಪರ ಮುಖ್ಯ 
ಕಾರ್ಯದರ್ಶಿ.

– ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.