ಸಿ.ವಿ.ರಾಮನ್ನಗರ : ಮ್ಯಾನ್ಹೋಲ್ಗೆ ಮೂವರು ಕಾರ್ಮಿಕರು ಬಲಿ
Team Udayavani, Mar 7, 2017, 9:28 AM IST
ಬೆಂಗಳೂರು : ನಗರದ ಸಿ.ವಿ.ರಾಮನ್ನಗರದ ಕಗ್ಗದಾಸಪುರ ಮುಖ್ಯರಸ್ತೆಯಲ್ಲಿ ದುರಸ್ತಿಗೆಂದು ಮ್ಯಾನ್ಹೋಲ್ ಒಳಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
11 ಗಂಟೆಯ ವೇಳೆಗೆ ಟ್ರ್ಯಾಕ್ಟರ್ನಲ್ಲಿ ಬಂದಿದ್ದ ಇಬ್ಬರು ಕಾರ್ಮಿಕರು ನೀರಿನ ಸೋರಿಕೆ ತಡೆಗೆಂದು ಮ್ಯಾನ್ಹೋಲ್ನೊಳಗೆ ಇಳಿದಿದ್ದಾರೆ. ಆಮ್ಲಜನಕದ ಕೊರತೆಯಿಂದ ಉಸಿರಾಟ ಸಾಧ್ಯವಾಗದೆ ಬೊಬ್ಬಿಟ್ಟಿದ್ದಾರೆ. ಕೂಡಲೆ ನೆರವಿಗಾಗಿ ಟ್ರ್ಯಾಕ್ಟರ್ ಚಾಲಕ ಮ್ಯಾನ್ಹೋಲ್ನೊಳಗೆ ಇಳಿದಿದ್ದು, ಮೂವರು ಉಸಿರು ಗಟ್ಟಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕೆಲಹೊತ್ತಲ್ಲೇ ಅಗ್ನಿ ಶಾಮಕದಳದ ಸಿಬಂದಿಗಳು ಸ್ಥಳಕ್ಕಾಗಮಿಸಿದರಾದರೂ ಅದಾಗಲೇ ಮೂವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಮೂವರ ಶವಗಳನ್ನು ಮೇಲಕ್ಕೆತ್ತಲಾಗಿದ್ದು ಅವರ ಗುರುತು ಇನ್ನಷ್ಟೆ ಪತ್ತೆಯಾಗಬೇಕಿದೆ.
ಈ ಬಗ್ಗೆ ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ
Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್ ಕುಣಿಕೆ ಬಿಗಿದು ಸಾವು