ಇಂದು “ಕಮಲ’ ತೆಕ್ಕೆಗೆ ಜಯಪ್ರಕಾಶ್ ಹೆಗ್ಡೆ
Team Udayavani, Mar 8, 2017, 7:40 AM IST
ಬೆಂಗಳೂರು: ಮಾಜಿ ಸಂಸದ ಉಡುಪಿ ಜಿಲ್ಲೆಯ ಕೆ.ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ತೊರೆದು ಬುಧವಾರ ಬಿಜೆಪಿ ಸೇರಲಿದ್ದಾರೆ.
ಇವರೊಂದಿಗೆ ಈಗಾಗಲೇ ಕಾಂಗ್ರೆಸ್ ತೊರೆದಿರುವ ಬಳ್ಳಾರಿ ಜಿಲ್ಲೆ ಹೊಸಪೇಟೆ ಕ್ಷೇತ್ರದ ಮಾಜಿ ಶಾಸಕ ರತನ್ ಸಿಂಗ್ ಕೂಡ ಬಿಜೆಪಿ ಸೇರಲಿದ್ದು, ಬೆಳಗ್ಗೆ 11ಕ್ಕೆ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಬ್ಬರನ್ನೂ ಪಕ್ಷಕ್ಕೆ
ಬರಮಾಡಿಕೊಳ್ಳಲಿದ್ದಾರೆ. ಬ್ರಹ್ಮಾವರ ಕ್ಷೇತ್ರ ದಿಂದ ಶಾಸಕರಾದ ಜಯಪ್ರಕಾಶ್ ಹೆಗ್ಡೆ ನಂತರ ಸಚಿವರಾಗಿಯೂ ಕೆಲಸ ಮಾಡಿ
ದ್ದರು. ಜನತಾ ಪರಿವಾರದ ಒಳಜಗಳದ ಹಿನ್ನೆಲೆಯಲ್ಲಿ ಪಕ್ಷದಿಂದ ಹೊರಬಂದು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು.
ಬಳಿಕ ಕಾಂಗ್ರೆಸ್ ಸೇರಿದ್ದ ಅವರು, ಸಂಸದರಾಗಿದ್ದ ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿ ಯಾದ ಬಳಿಕ ನಡೆದ ಉಪ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು. 2014ರ ಲೋಕಸಭೆ
ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಸೋಲು ಅನುಭವಿಸಿದ್ದರು. ಆರಂಭದಿಂದಲೂ ಬಿಜೆಪಿ ವಿರುದ್ಧವೇ ರಾಜಕಾರಣ ಮಾಡಿಕೊಂಡು ಬಂದಿದ್ದ ಜಯಪ್ರಕಾಶ್ ಹೆಗ್ಡೆ ಇದೀಗ ಬಿಜೆಪಿ ಸೇರುತ್ತಿದ್ದಾರೆ. ಇವರ ಜತೆಗೆ ಹೊಸಪೇಟೆಯ ಮಾಜಿ ಶಾಸಕ ರತನ್ ಸಿಂಗ್ ಕೂಡ ಬಿಜೆಪಿ ಸೇರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ