ಕರಾವಳಿಗೆ ಪ್ರತ್ಯೇಕ ಮರಳು ನೀತಿ: ಮುಖ್ಯಮಂತ್ರಿ ಒಪ್ಪಿಗೆ
Team Udayavani, Mar 8, 2017, 11:23 AM IST
ಮಂಗಳೂರು: ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
ಸೋಮವಾರ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವ ದಲ್ಲಿ ಭೇಟಿ ಮಾಡಿದ ಜಿಲ್ಲೆಯ ಮುಖಂಡರ ನಿಯೋಗದ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಯವರು ಕರಾವಳಿಯಲ್ಲಿ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕೆಂಬ ಜಿಲ್ಲೆಯ ಮುಖಂಡರ ಬೇಡಿ ಕೆಯ ಬಗ್ಗೆ ಚರ್ಚೆ ನಡೆಸಿ, ಶೀಘ್ರವೇ ನೀತಿ ಜಾರಿಗೆ ತರಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕರಾವಳಿಯಲ್ಲಿ ಮರಳು ಎತ್ತುವುದು ಮತ್ತು ಪೂರೈಕೆಯ ಸಮಸ್ಯೆಗಳು ಪದೇ ಪದೇ ಮರುಕಳಿಸುತ್ತಿವೆ. ಸಾರ್ವಜನಿಕರಿಂದಲೂ ಈ ಬಗ್ಗೆ ಒತ್ತಡಗಳು ಬರುತ್ತಿವೆ. ರಾಜ್ಯದ ಉಳಿದ ಜಿಲ್ಲೆಗಳಿಗೂ ಕರಾವಳಿಗೂ ಮರಳುಗಾರಿಕೆಯಲ್ಲಿ ವ್ಯತ್ಯಾಸವಿದೆ. ಈ ನಿಟ್ಟಿನಲ್ಲಿ ಕರಾವಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರುವುದೇ ಇದಕ್ಕೆ ಶಾಶ್ವತ ಪರಿಹಾರ ಎಂದು ಸಚಿವ ರಮಾನಾಥ ರೈ ಅವರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.
ಇದಕ್ಕೆ ಸಹಮತ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಸಾರ್ವಜನಿಕರಿಗೆ ಮರಳು ದೊರಕುವಲ್ಲಿ ಯಾವುದೇ ಸಮಸ್ಯೆಗಳುಂಟಾಗಬಾರದು. ವಿಶೇಷ ವಾಗಿ ರಾಜ್ಯ ಸರಕಾರವು ಪ್ರತಿಯೊಬ್ಬರಿಗೂ ಮನೆ ಒದಗಿಸುವ ವಸತಿ ಯೋಜನೆಯನ್ನು ಹೆಚ್ಚಿನ ಸಂಖ್ಯೆ ಯಲ್ಲಿ ಕೈಗೆತ್ತಿಕೊಂಡಿದೆ. ಎಲ್ಲರ ಅಭಿಪ್ರಾಯ ಕ್ರೋಡೀಕರಿಸಿ ಕರಾವಳಿಗೆ ಪ್ರತ್ಯೇಕ ಮರಳು ನೀತಿ ತರಲು ಕಾರ್ಯೋನ್ಮುಖರಾಗುವುದಾಗಿ ತಿಳಿಸಿದರು.
ಪಶ್ಚಿಮವಾಹಿನಿ ಅನುಷ್ಠಾನಕ್ಕೆ ಮನವಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳನ್ನು ವೈಜ್ಞಾನಿಕವಾಗಿ ಕೈಗೆತ್ತಿಕೊಳ್ಳಲು ಮತ್ತು ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಪಶ್ಚಿಮ ವಾಹಿನಿ ಯೋಜನೆಯನ್ನು ಮುಂದಿನ ಬಜೆಟ್ನಲ್ಲಿ ಕೈಗೆತ್ತಿಕೊಳ್ಳಬೇಕು. 9/11 ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು. ಪುತ್ತೂರು ತಾಲೂಕಿನಲ್ಲಿಯೂ ಮಳೆ ಕಡಿಮೆಯಾಗಿ ಬರ ಆವರಿಸಿರುವುದರಿಂದ, ಬೋರ್ವೆಲ್ ಕೊರೆಯಲು ಅನುಮತಿ ನೀಡಬೇಕು ಎಂದು ಮುಖಂಡರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಬಗ್ಗೆ ಸಕಾರಾತ್ಮಕವಾಗಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಿಯೋಗದಲ್ಲಿ ದ.ಕ. ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಶಾಹುಲ್ ಹಮೀದ್, ಶೇಖರ ಕುಕ್ಕೇಡಿ, ಪಿ.ಪಿ. ವರ್ಗೀಸ್, ಧರಣೇಂದ್ರ ಕುಮಾರ್, ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪಕ್ಷದ ಮುಖಂಡರಾದ ಕಣಚೂರು ಮೋನು, ಪೃಥ್ವಿರಾಜ್, ಹರೀಶ್ ಕುಮಾರ್, ಡಾ| ರಘು, ಪಿಯೂಸ್ ರೊಡ್ರಿಗಸ್, ಸುರೇಶ್ ಕೋಟ್ಯಾನ್, ಆಸಿಫ್ ಮೂಲ್ಕಿ, ಇಕ್ಬಾಲ್ ಬೊಳ್ಳಾಯಿ, ಶ್ರೀನಿವಾಸ ಕಿಣಿ, ಕೆ.ಪಿ. ಥಾಮಸ್, ಅಶ್ರಫ್ ಗರಾಡಿ ಮತ್ತಿತರರು ಉಪಸ್ಥಿತರಿದ್ದರು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು
Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ
Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು
Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ