ಎಡಿಬಿ ಮೊದಲ ಹಂತದ ಕಾಮಗಾರಿ 2017ಕ್ಕೆ ಪೂರ್ಣ: ಎಚ್‌.ಸಿ. ಮಹದೇವಪ್ಪ


Team Udayavani, Mar 8, 2017, 11:46 AM IST

08-REPO-13.jpg

ಮಂಗಳೂರು: ರಾಜ್ಯದ ಸುಮಾರು 300 ಕಿ.ಮೀ. ಉದ್ದದ ಕಡಲ ತೀರದಲ್ಲಿ ವಿವಿಧ ಯೋಜನೆಗಳನ್ನು (ಸುಸ್ಥಿರ ಕರಾವಳಿ ತೀರ ಸಂರಕ್ಷಣೆ ಹಾಗೂ ನಿರ್ವಹಣ ಯೋಜನೆ) ಕೈಗೆತ್ತಿಕೊಳ್ಳುವ ಇರಾದೆಯಿಂದ ಈಗಾಗಲೇ ಎಡಿಬಿ ನೆರವಿನಿಂದ ಕೈಗೊಂಡ 911 ಕೋ.ರೂ.ಗಳ ಯೋಜನೆಯಲ್ಲಿ 223.32 ಕೋ. ರೂ. ಮೊತ್ತದ ಮೊದಲ ಹಂತದ ಕಾಮಗಾರಿ 2017ರ ಮೇ ತಿಂಗಳಿನಲ್ಲಿ ಪೂರ್ಣಗೊಳ್ಳಲಿದೆ. 2020ರೊಳಗೆ ಉಳಿದ ಎರಡನೇ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಲೋಕೋಪಯೋಗಿ, ಬಂದರು, ಒಳನಾಡು ಜಲಸಾರಿಗೆ ಸಚಿವ ಡಾ| ಎಚ್‌.ಸಿ. ಮಹದೇವಪ್ಪ ಹೇಳಿದರು.

ಮಂಗಳೂರು ಹಳೆ ಬಂದರಿಗೆ ಮಂಗಳವಾರ ಆಗಮಿಸಿದ ಅವರು, ಬಳಿಕ ಟಗ್‌ನಲ್ಲಿ ಪ್ರಯಾಣಿಸಿ ಅಳಿವೆಬಾಗಿಲು ಸುತ್ತಮುತ್ತಲ ಪರಿಸ್ಥಿತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಉಳ್ಳಾಲದ ವರೆಗೆ ಟಗ್‌ನಲ್ಲಿ ತೆರಳಿದ ಸಚಿವರು ಸಮುದ್ರದಲ್ಲಿ ಹೂಳೆತ್ತುವಿಕೆ ಹಾಗೂ ವಿವಿಧ ಬಂದರು ಅಭಿಧಿವೃದ್ಧಿ ಕುರಿತ ಕಾಮಗಾರಿ ಪರಿಶೀಲಿಸಿದ ಅನಂತರ ಸುದ್ದಿಗಾರರ ಜತೆಗೆ ಮಾತನಾಡಿದರು. 2011ರಲ್ಲಿ ಯುಪಿಎ ಅವಧಿಯಲ್ಲಿ ಈ ಯೋಜನೆಗೆ ಮಂಜೂರಾತಿ ದೊರಕಿತ್ತು. ರಾಜ್ಯ ಸರಕಾರ ಶೇ. 15ರಷ್ಟು  ಹಾಗೂ ಎಡಿಬಿ ಶೇ. 85ರಷ್ಟು ಹಣ ನೀಡಲಿದೆ. ಕೇಂದ್ರ ಸರಕಾರ ಇದಕ್ಕೆ ಗ್ಯಾರಂಟಿ ನೀಡುತ್ತದೆ. 2014ರಲ್ಲಿ ಇದರ ಕಾಮಗಾರಿ ಪ್ರಾರಂಭವಾಗಿದ್ದು, 20 ಕೋ.ರೂ. ಕಾಮಗಾರಿ ಈಗಾಗಲೇ ಪೂರ್ಣವಾಗಿದೆ. ಮೀನುಗಾರರ ಜೀವನ ಸುಧಾರಣೆ ಹಾಗೂ ಅವರ ಆರ್ಥಿಕ ಮಟ್ಟ ಏರಿಕೆ ಮಾಡುವ ನೆಲೆಯಲ್ಲಿ ಸರಕಾರ ಬದ್ಧತೆಯಿಂದ ಕೆಲಸ ನಿರ್ವಹಿಸುತ್ತದೆ. ಬಂದರು ಇಲಾಖೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ಮುಂದಿನ ಬಜೆಟ್‌ನಲ್ಲಿ 500ರಿಂದ 600 ಕೋ.ರೂ. ನೀಡಲು ಮುಖ್ಯಮಂತ್ರಿಗೆ ಈ ಬಾರಿ ಕೇಳಿದ್ದೇವೆ ಎಂದರು. 

ಮಂಗಳೂರಿಗೆ ಹೂಳೆತ್ತುವ ಯಂತ್ರ
ಮಂಗಳೂರಿನಲ್ಲಿ ಪ್ರಸ್ತುತ ಖಾಸಗಿಯಾಗಿ ಹೂಳೆತ್ತುವ ಯಂತ್ರ ಬಳಸಲಾಗುತ್ತಿದೆ. ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಸುಮಾರು 1 ಕೋ.ರೂ. ಖರ್ಚು ಮಾಡಲಾಗಿದೆ. ಹೀಗಾಗಿ ಮಂಗಳೂರಿಗೆ ಪ್ರತ್ಯೇಕ ಹೂಳೆತ್ತುವ ಯಂತ್ರವನ್ನು ಸರಕಾರದಿಂದ ಖರೀದಿ ಮಾಡಿ ಕಾಮಗಾರಿ ನಡೆಸುವ ಸಂಬಂಧ ಶಾಸಕ ಜೆ.ಆರ್‌. ಲೋಬೋ ಸೇರಿದಂತೆ ಮೀನುಧಿಗಾರರು ಆಗ್ರಹಿಸಿದ್ದಾರೆ. ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು. 

ಉಳ್ಳಾಲದಲ್ಲಿ 29.70 ಕೋ.ರೂ. ಮೊತ್ತದ ಪ್ರಾಯೋಗಿಕ ಕಾಮಗಾರಿಗೆ ಟೆಂಡರ್‌ ವಹಿಸಲಾಗಿದೆ ಎಂದರು. ಸಚಿವ ಯು.ಟಿ. ಖಾದರ್‌, ಶಾಸಕ ಜೆ.ಆರ್‌. ಲೋಬೋ, ಕಾಪೊರೇಟರ್‌ ಅಬ್ದುಲ್‌ ಲತೀಫ್‌, ಬಂದರು ಇಲಾಖೆ ನಿರ್ದೇಶಕ ಕ್ಯಾ| ಸ್ವಾಮಿ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್‌ ಕಾಂತರಾಜು, ಕಾರ್ಯಕಾರಿ ಎಂಜಿನಿಯರ್‌ ಗಣೇಶ್‌, ಎಡಿಬಿಯ ಗೋಪಾಲ್‌ ನಾಯ್ಕ ಉಪಸ್ಥಿತರಿದ್ದರು. 

ಎಡಿಬಿ ಎರಡನೇ ಹಂತಕ್ಕೆ  623 ಕೋ.ರೂ.
ಸಚಿವ ಡಾ| ಎಚ್‌.ಸಿ. ಮಹದೇವಪ್ಪ ಮಾತನಾಡಿ, ಎಡಿಬಿ ಎರಡನೇ ಹಂತದಲ್ಲಿ ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ್ಕೊರೆತ ಸಮಸ್ಯೆ ತೀವ್ರ ಕಾಡುತ್ತಿದೆ. ಅದರಲ್ಲೂ ಸೋಮೇಶ್ವರ, ಎರ್ಮಾಳ್‌ ತೆಂಕ, ಉದ್ಯಾವರ, ಕೋಡಿಬೆಂಗ್ರೆ, ಪಾವಿನ ಕುರ್ವೆ, ಕೋಡಿಕನ್ಯಾಣ, ಮರವಂತೆ, ಮುರುಡೇಶ್ವರ ಮತ್ತು ಕಮ್ಯೂನಿಟಿ ಉಪಯೋಜನೆಗಳು ಸೇರಿದಂತೆ ಒಟ್ಟು 54.75 ಕಿ.ಮೀ. ಉದ್ದಕ್ಕೆ  623 ಕೋ.ರೂ. ಮೊತ್ತದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ವಹಿಸಲಾಗಿದೆ. ಉದ್ಯಾವರದಲ್ಲಿ 5 ಕಿ.ಮೀ. ಕಾಮಗಾರಿ ನಿರ್ವಹಿಸಲು 78.44 ಕೋ.ರೂ., ಮರವಂತೆಯಲ್ಲಿ 3.50 ಕಿ.ಮೀ. ಕಾಮಗಾರಿ ನಿರ್ವಹಿಸಲು 88.27 ಕೋ.ರೂ. ನಿಗದಿಪಡಿಸಿ ಗುತ್ತಿಗೆ ನೀಡಲಾಗಿದೆ. ಉಳಿದ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.