ಮೋದಿ ಭಾಷಣಕ್ಕೆ ಮಾತ್ರ ಸೀಮಿತ: ರಮೇಶ್ಕುಮಾರ್
Team Udayavani, Mar 8, 2017, 12:54 PM IST
ಕೆ.ಆರ್.ನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಕೇವಲ ಭಾಷಣಕ್ಕೆ ಮಾತ್ರ ಸೀಮಿತ ಗೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಕೆ.ಆರ್.ರಮೇಶ್ಕುಮಾರ್ ಟೀಕಿಸಿದರು. ಪಟ್ಟಣದ ಹಳೆ ಹೆರಿಗೆ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಮೋದಿಯವರು ಅಧಿಕಾರಕ್ಕೆ ಬಂದು 3 ವರ್ಷ ಕಳೆದರೂ ಚುನಾವಣೆ ಸಮಯದಲ್ಲಿ ಹೇಳಿದ ಯಾವ ಕಾರ್ಯವೂ ಅನುಷ್ಠಾನಗೊಂಡಿಲ್ಲ. ಕಪ್ಪು ಹಣ ಪತ್ತೆ ಹಚ್ಚುತ್ತೇವೆ ಎಂದು ಹೇಳಿದ್ದ ಪ್ರಧಾನಿಗಳು ಈವರೆಗೂ ಒಬ್ಬನನ್ನು ಕೂಡ ಗುರುತಿಸಿ ಜೈಲಿಗೆ ಕಳುಹಿಸಿರುವ ಉದಾಹರಣೆಗಳು ಇಲ್ಲ ಎಂದು ತಿಳಿಸಿದರು.
ದೇಶದಲ್ಲಿ 1 ಲಕ್ಷ ಕೋಟಿ ವರೆಗೂ ಸಾಲ ಪಡೆದು ಸುಸ್ತಿ ಆಗಿರುವವರು ಇದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರು ಮಾತ್ರ ರೈತರು ಎಂದ ಸಚಿವರು ಕೇಂದ್ರ ಸರ್ಕಾರ ಕೂಡಲೇ ಕಪ್ಪು ಹಣ ಇರುವವರನ್ನು ಗುರುತಿಸಿ ಮತ್ತು ಸುಸ್ತಿದಾರ ಉದ್ಯಮಿಗಳನ್ನು ಜೈಲಿಗೆ ಹಾಕಿ ಅವರಿಂದ ಹಣ ಪಡೆದು ರೈತರಿಗೆ ನೀಡಬೇಕು. ಆಗ ಮಾತ್ರ ರೈತರ ಆತ್ಮಹತ್ಯೆಯನ್ನು ತಡೆಗಟ್ಟಲು ಸಾಧ್ಯ ಎಂದರು.
ಭಾರತದ ಸಂಸ್ಕೃತಿಯನ್ನು ಹಾಳು ಮಾಡುವ ಚಲನಚಿತ್ರಗಳು ಮತ್ತು ಧಾರವಾಹಿ ಗಳು ಕಪ್ಪು ಹಣ ಹೊಂದಿರುವ ಒಡೆಯರಿಂದ ನಿರ್ಮಾಣವಾಗುತ್ತಿವೆ. ಆದರೆ ನಮ್ಮದು ಉತ್ತಮ ಸಂಸ್ಕೃತಿ ಹೊಂದಿರುವ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯವರು ತಡೆಯುವಲ್ಲಿ ವಿಫಲಗೊಂಡಿದ್ದಾರೆ ಎಂದು ಆರೋಗ್ಯ ಮತ್ತು ಸಚಿವ ಕೆ.ಆರ್.ರಮೇಶ್ಕುಮಾರ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
Madhu Bangarappa ಈ ವರ್ಷ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ
Prajwal ರೇವಣ್ಣಗೂ ನಮಗೂ ಯಾವುದೇ ಸಂಬಂಧವಿಲ್ಲ: ಜಿ.ಟಿ.ದೇವೇಗೌಡ
Madhu Bangarappa ಬಿಜೆಪಿಯವರು ಕಲಾಂ ಹೇರ್ಕಟ್ ಬಗ್ಗೆ ಮಾತನಾಡುವರೇ?
Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Legislative Council Polls; ಪದವೀಧರ ಮತದಾರರ ನಿರಾಸಕ್ತಿ!
Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ
Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ
ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್
ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್