ಕಠಿಣ ಪರಿಶ್ರಮವಿದ್ದರೆ ಯಶಸ್ಸು ನಿಮ್ಮದು


Team Udayavani, Mar 8, 2017, 12:56 PM IST

mys6.jpg

ಮೈಸೂರು: ಸಂಗೀತ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿ, ಪ್ರಸಿದ್ಧಿಗಳಿಸಲು ಬದ್ಧತೆ ಇರಬೇಕು ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಪಿಟೀಲು ವಾದಕ ವಿದ್ವಾನ್‌ ಡಾ. ಎಲ್‌. ಸುಬ್ರಮಣಿಯಂ ಕಿವಿಮಾತು ಹೇಳಿದರು. ನಗರದ ಕೃಷ್ಣಮೂರ್ತಿಪುರಂನ ನಿತ್ಯೋತ್ಸವ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ  ವಿದ್ಯಾಲಯದ ದ್ವಿತೀಯ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣ ಮಾಡಿದರು.

ಭಾರತೀಯ ಸಂಗೀತ ಕ್ಷೇತ್ರಕ್ಕೆ ಕರ್ನಾಟಕ  ಬಹುದೊಡ್ಡ ಕೊಡುಗೆ ನೀಡಿದೆ. ಕರ್ನಾಟಕ ಸಂಗೀತ ಮಾತ್ರವಲ್ಲದೆ ಹಿಂದೂಸ್ಥಾನಿ ಸಂಗೀತಕ್ಕೂ ಪ್ರಾಮುಖ್ಯತೆ ನೀಡಿ ಉನ್ನತ ಸ್ಥರಕ್ಕೆ ಕೊಂಡೊಯ್ಯಲಾಗಿದೆ. ದಕ್ಷಿಣ ಭಾರತದಲ್ಲಿ ಸವಾಯಿ ಗಂಧರ್ವ, ವೀಣೆ ಶೇಷಣ್ಣ, ಪಿಟೀಲು ಚೌಡಯ್ಯ, ಗಂಗೂಬಾಯಿ ಹಾನಗಲ್‌, ಭೀಮಸೇನ ಜೋಶಿ, ಬಾಲ ಮುರಳಿ ಕೃಷ್ಣ, ಪುಟ್ಟರಾಜ ಗವಾಯಿ ಮುಂತಾದ ದಿಗ್ಗಜರು ಸಂಗೀತದ ಘನತೆಯನ್ನು ಹೆಚ್ಚಿಸಿ, ತಾವೂ ಬೆಳೆದುದಲ್ಲದೆ, ಇತರರಿಗೂ ಪೋ›ತ್ಸಾಹ ನೀಡಿ ಬೆಳೆಸಿದ್ದಾರೆ ಎಂದರು.

ಡಾ. ಗಂಗೂಬಾಯಿ ಹಾನಗಲ್‌ ಅಂತಹವರು ಸಂಗೀತವನ್ನು ಅತ್ಯಂತ ಉನ್ನತ ಸ್ಥಾನಕ್ಕೆ ಕೊಂಡೊಯ್ದರು. ಸಂಗೀತ ಕ್ಷೇತ್ರದಲ್ಲಿನ ಅವರ ಕೊಡುಗೆ ಚಿರಸ್ಥಾಯಿಯಾಗಿರಲಿದೆ. ಗಂಗೂಬಾಯಿ ಅವರು ದೊಡ್ಡ ವಿಶ್ವವಿದ್ಯಾಲಯದಂತೆಯೇ ಕೆಲಸ ಮಾಡಿ ಅನೇಕ ದೊಡ್ಡ ದೊಡ್ಡ ಸಂಗೀತಗಾರರನ್ನು ಬೆಳೆಸಿದ್ದಾರೆ ಎಂದು ಹೇಳಿದರು.

ಸಂಗೀತ ಕ್ಷೇತ್ರದ ಈ ದಿಗ್ಗಜರಂತೆಯೇ  ಸಾಧನೆಯ ಮೂಲಕ ನಿಮ್ಮದೇ ಆದ ಮಾರ್ಗವನ್ನು ಸೃಷ್ಟಿಸಬೇಕು. ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದಿದ್ದರೆ, ಆ ಸಂದರ್ಭದಲ್ಲಿ ಇನ್ನೊಂದು ಕ್ಷೇತ್ರದತ್ತ ತೆರೆದುಕೊಳ್ಳದೆ ಏಕತಾನತೆ, ಶ್ರದ್ಧೆ, ಪರಿಶ್ರಮದಿಂದ ಅಭ್ಯಾಸದಲ್ಲಿ ತೊಡಗಿಸಿ ಕೊಂಡಾಗ ಯಶಸ್ಸು ನಿಮ್ಮದಾಗಲಿದೆ. ಸಂಗೀತವನ್ನು ಹವ್ಯಾಸವಾಗಿ ತೆಗೆದುಕೊಂಡರೆ ಸಾಧಿಸಲಾಗದು, ಬದ್ಧತೆ ತೋರಿದರೆ ಸಂಗೀತ ಕ್ಷೇತ್ರದಲ್ಲಿ ದಂತಕತೆ ಯಾಗಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪದವಿ ಪಡೆದ ಬಳಿಕ ನಿಜವಾದ ವೃತ್ತಿ ಜೀವನ ಆರಂಭವಾಗುತ್ತದೆ. ವಿಶ್ವಕ್ಕೆ ಸಂಗೀತವನ್ನು ಪರಿಚಯಿ ಸುವ ಜತೆಗೆ ಹೊರ ಜಗತ್ತಿನಲ್ಲಿ ನಡೆಯುವ ಘಟನೆಗಳ ಬಗ್ಗೆಯೂ ತಿಳಿದುಕೊಳ್ಳಬೇಕು. ದಿಢೀರ್‌ ಜನಪ್ರಿಯತೆಗಾಗಿ ವೆಬ್‌ಸೈಟ್‌ಗಳಲ್ಲಿನ ಗಂಗೂಬಾಯಿ ಹಾನಗಲ್‌ ಮೊದಲಾದವರ ಬಯೋಗ್ರಫಿ ಕತ್ತರಿಸಿ ತಮ್ಮ ಬಯೋಗ್ರಫಿಗೆ ಜೋಡಿಸಿಕೊಳ್ಳದೆ  ಅವರಂತೆಯೇ ಕಠಿಣ ಪರಿಶ್ರಮದಿಂದ ಮುಂದೆ ಬರಬೇಕಿದೆ ಎಂದರು.

ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ರಾಜ್ಯಪಾಲ ವಜುಭಾಯ್‌ ವಾಲಾ, ವಿವಿ ಕುಲಸಚಿವ ಪೊ›. ನಿರಂಜನ ವಾನಳ್ಳಿ ಉಪಸ್ಥಿತರಿದ್ದರು. ವಿವಿ ಕುಲಪತಿ ಡಾ. ಸರ್ವಮಂಗಳಾ ಶಂಕರ್‌ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪದವಿ ಪ್ರದಾನ: 47 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 12 ವಿದ್ಯಾರ್ಥಿಗಳಿಂದ 18 ಚಿನ್ನದ ಪದಕ ವಿತರಿಸಲಾಯಿತು.

ಗೇಯ ಸಂಗೀತ ನಿಕಾಯದಲ್ಲಿ ಅಕ್ಷತಾ ಗಜಾನನ ಹೆಗ್ಡೆ 2 ಚಿನ್ನದ ಪದಕ, ಸಂಧ್ಯಾ ಭಟ್‌ 3 ಚಿನ್ನದ ಪದಕ, ಕಿರಣ್ಮಯಿ ಜಿ.ವಿಠಲ್‌ 1 ಚಿನ್ನದ ಪದಕ, ಹರಿಲಕ್ಷ್ಮೀ 2 ಚಿನ್ನದ ಪದಕ ಹಾಗೂ 1 ನಗದು ಬಹುಮಾನ, ಪಿ.ಸುರಭಿ 1 ಚಿನ್ನದ ಪದಕ ಹಾಗೂ 1 ನಗದು ಬಹುಮಾನ, ಎಚ್‌.ಟಿ.ಹರೀಶ 1 ಚಿನ್ನದ ಪದಕ, ಎಸ್‌.ಉಷಾ 2 ಚಿನ್ನದ ಪದಕ, ಕೆ.ಆಶಾಪಾರ್ವತಿ ಭಟ್‌ 2 ಚಿನ್ನದ ಪದಕ, ಶ್ರೀರಂಗ ಎನ್‌.ಕಟ್ಟಿ 1 ನಗದು ಬಹುಮಾನ ಪಡೆದುಕೊಂಡರು.

ವಾದ್ಯ ಸಂಗೀತ ನಿಕಾಯದಲ್ಲಿ ಬಿ. ಅನಂತರಾಮ್‌ 1 ಚಿನ್ನದ ಪದಕ ಪಡೆದುಕೊಂಡಿದ್ದು, ನೃತ್ಯ ನಿಕಾಯದಲ್ಲಿ ಅಪೂರ್ವ ಸಮೀರ್‌ ರಾವ್‌, ನಾಗರೇಖಾ ಜಿ.ರಾವ್‌, ಬಿ. ಅಮೃತಾ ತಲಾ ಒಂದು ಚಿನ್ನದ ಪದಕ ಪಡೆದುಕೊಂಡರು.

ಟಾಪ್ ನ್ಯೂಸ್

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.