ಕಾಲುವೆ ಕಾಮಗಾರಿ ವಿರೋಧಿಸಿ ರೈತರ ಆತ್ಮಹತ್ಯೆ ಯತ್ನ
Team Udayavani, Mar 9, 2017, 3:45 AM IST
ಹಾವೇರಿ: ಮೂಲನಕ್ಷೆಯಲ್ಲಿರುವ ಜಮೀನು ಬಿಟ್ಟು ಬೇರೆ ಜಮೀನಿನಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆ ಕಾಮಗಾರಿ ಮಾಡುತ್ತಿದ್ದಾರೆಂದು ಆಕ್ಷೇಪಿಸಿ ರೈತರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಕಳ್ಳಿಹಾಳ ಹಾಗೂ ನಗರದ ಜಿಲ್ಲಾಸ್ಪತ್ರೆ ಬಳಿ ನಡೆಯಿತು.
ಕಾಲುವೆ ನಿರ್ಮಾಣಕ್ಕಾಗಿ ಅಧಿಕಾರಿಗಳು ಬುಧವಾರ ಜೆಸಿಬಿ ಯಂತ್ರದೊಂದಿಗೆ ಪೊಲೀಸ್ ಭದ್ರತೆಯಲ್ಲಿ ಕಳ್ಳಿಹಾಳ ಗ್ರಾಮಕ್ಕೆ ಆಗಮಿಸಿದ್ದರು.
ಕಾಮಗಾರಿ ಸ್ಥಳದಲ್ಲಿ ಜಮಾಯಿಸಿದ ರೈತರು, ಮೂಲನಕ್ಷೆ ಬಿಟ್ಟು ಬೇರೆ ಜಮೀನಿನಲ್ಲಿ ಕಾಲುವೆ ನಿರ್ಮಿಸುತ್ತಿದ್ದೀರಿ ಎಂದು ಕಾಮಗಾರಿಗೆ ತಡೆಯೊಡ್ಡಿದರು. ಈ ವೇಳೆ ರೈತರನ್ನು ಪೊಲೀಸರು ನಿಯಂತ್ರಿಸಲು ಮುಂದಾದಾಗ ಅಜ್ಜಪ್ಪ ಗೊಣ್ಣೆಪ್ಪನವರ ಎಂಬ ರೈತ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ. ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ರೈತ ವಿಷ ಸೇವಿಸಿದ ಸುದ್ದಿ ಹರಡುತ್ತಿದ್ದಂತೆ ಕಳ್ಳಿಹಾಳ, ತೋಟದಯಲ್ಲಾಪುರ ಗ್ರಾಮದ ನೂರಾರು ರೈತರು ಜಿಲ್ಲಾಸ್ಪತ್ರೆ ಎದುರು ಧಾವಿಸಿದರು.
ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದು, ವಾತಾವರಣ ಪ್ರಕ್ಷುಬಟಛಿಗೊಂಡಿತು. ಆಗ ರೈತ ಪುಟ್ಟಪ್ಪ ಎಂಬಾತ ವಿಷ ಕುಡಿಯಲು ಮುಂದಾದಾಗ ಪೊಲೀಸರು ಬಾಟಲಿ ಕಿತ್ತುಕೊಂಡು ಅನಾಹುತ ತಡೆದರು. ಘಟನೆ ಬಳಿಕ ಇತ್ತ ಕಳ್ಳಿಹಾಳದಲ್ಲಿ ಕಾಮಗಾರಿ ನಡೆಸಲು ಬಂದಿದ್ದ ಅಧಿಕಾರಿಗಳು ವಾಪಸ್ಸಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ