ಗೀತಾ ಎದುರು ಪತಿಯ ಸರಣಿ ಗೆಲುವಿನ ಸವಾಲು


Team Udayavani, Mar 12, 2017, 3:45 AM IST

Ban12031707Medn.jpg

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿ 1994ರಿಂದ 2013ರವರೆಗೂ ಜಯಭೇರಿ ಬಾರಿಸುವ ಮೂಲಕ ಜಿಲ್ಲೆಯಲ್ಲಿ ಯಾರೂ ಮಾಡಿರದ ವಿಶೇಷ ಸಾಧನೆಯನ್ನು ಎಚ್‌. ಎಸ್‌. ಮಹದೇವಪ್ರಸಾದ್‌ ಮಾಡಿದ್ದರು.  ಈಗ ಅವರ ಅನುಪಸ್ಥಿತಿಯಲ್ಲಿ ಮಹದೇವಪ್ರಸಾದ್‌ ಪತ್ನಿ ಗೀತಾ ಮಹದೇವಪ್ರಸಾದ್‌ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪತಿಯ ಜಯಭೇರಿಯನ್ನು ಮುಂದುವರಿಸುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.

1994ರಲ್ಲಿ ಪ್ರಥಮ ಬಾರಿಗೆ ಜಯಗಳಿಸಿದ ಎಚ್‌.ಎಸ್‌. ಮಹದೇವಪ್ರಸಾದ್‌, ನಂತರ 1999, 2004, 2008ರ ವಿಧಾನಸಭಾ ಚುನಾವಣೆಗಳಲ್ಲಿ ಸತತವಾಗಿ ಗೆದ್ದು ಬಂದಿದ್ದರು. ಕಳೆದ 2013ರ ಚುನಾವಣೆಯಲ್ಲೂ ಜಯಭೇರಿ ಬಾರಿಸುವ ಮೂಲಕ ಸತತ ಐದನೇ ಬಾರಿ ಗೆದ್ದು ದಾಖಲೆ ನಿರ್ಮಿಸಿದ್ದರು.

ಹೀಗಾಗಿಯೇ ಅವರನ್ನು ಸೋಲಿಲ್ಲದ ಸರದಾರ ಎಂದೇ ಕರೆಯಲಾಗುತ್ತಿತ್ತು. ವಿಶೇಷವೆಂದರೆ, ಮಹದೇವಪ್ರಸಾದ್‌ ನಾಲ್ಕು ಚುನಾವಣೆಗಳಲ್ಲೂ ನಾಲ್ಕು ಪಕ್ಷದಿಂದ ನಾಲ್ಕು ಬೇರೆ ಬೇರೆ ಚಿಹ್ನೆಗಳಿಂದ ಆರಿಸಿ ಬಂದಿದ್ದರು. 1994ರಲ್ಲಿ ಜನತಾದಳ (ಚಕ್ರದಗುರುತು), 1999ರಲ್ಲಿ ಸಂಯುಕ್ತಜನತಾದಳ(ಬಾಣದ ಗುರುತು) 2004ರಲ್ಲಿ ಜಾತ್ಯತೀತ ಜನತಾದಳ (ಟ್ಯಾಕ್ಟರ್‌ ಗುರುತು), 2008 ಹಾಗೂ 2013ರಲ್ಲಿ ಕಾಂಗ್ರೆಸ್‌ನಿಂದ (ಹಸ್ತದಗುರುತು) ಗೆದ್ದಿದ್ದರು. ಪದೇಪದೆ ಪಕ್ಷ ಹಾಗೂ ಚಿಹ್ನೆ ಬದಲಾದರೂ ಕ್ಷೇತ್ರದ ಜನತೆ ಅವರ ವ್ಯಕ್ತಿತ್ವ ನೋಡಿಯೇ ಗೆಲ್ಲಿಸುತ್ತಿದ್ದರು.

ಗುಂಡ್ಲುಪೇಟೆ ಕ್ಷೇತ್ರದಲ್ಲಿ ರಾಜ್ಯದ ಪ್ರಥಮ ಹಾಗೂ ಏಕೈಕ ಮಹಿಳಾ ಸ್ಪೀಕರ್‌ ಕೆ.ಎಸ್‌. ನಾಗರತ್ನಮ್ಮ ಅವರು 1957, 1962, 1967, 1972ರಲ್ಲಿ ಆರಿಸಿ ಬಂದಿದ್ದರು. 1978ರಲ್ಲಿ ಪಕ್ಷೇತರ ಅಭ್ಯರ್ಥಿ ಎಚ್‌.ಕೆ. ಶಿವರುದ್ರಪ್ಪ ಅವರಿಂದ 271 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಚುನಾವಣೆಯಲ್ಲಿ ನಾಗರತ್ನಮ್ಮ ಅವರ ಸತತ ಗೆಲುವಿನ ದಾರಿಗೆ ಭಂಗವಾಯಿತು. ಮತ್ತೆ 1983, 1985,1989ರಲ್ಲಿ ನಾಗರತ್ನಮ್ಮ ಗೆದ್ದಿದ್ದರು. ನಾಗರತ್ನಮ್ಮ ವಿರುದಟಛಿ 1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ ಮಹದೇವಪ್ರಸಾದ್‌ ಮತ್ತೆ 1989ರ ಚುನಾವಣೆಯಲ್ಲೂ ಅಮ್ಮನ ವಿರುದಟಛಿ (ನಾಗರತ್ನಮ್ಮ ಅವರನ್ನು ಕ್ಷೇತ್ರಾದ್ಯಂತ ಜನರು ಅಮ್ಮ ಎಂದೇ ಕರೆಯುತ್ತಿದ್ದರು)ಸೋಲನುಭವಿಸಿದ್ದರು. ಇದೇ ಅಮ್ಮನ ವಿರುದ್ಧ 1993ರಲ್ಲಿ ಮಹದೇವಪ್ರಸಾದ್‌ ಅವರ ತಂದೆ ಎಚ್‌.ಎನ್‌. ಶ್ರೀಕಂಠಶೆಟ್ಟಿ ಜನತಾಪಕ್ಷದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಅಮ್ಮ ಬದುಕಿರುವವರೆಗೂ ತಂದೆ-ಮಗ ಇಬ್ಬರೂ ಗೆಲ್ಲಲು ಸಾಧ್ಯವಾಗಿರಲಿಲ್ಲ.

1993ರಲ್ಲಿ ನಾಗರತ್ನಮ್ಮ ನಿಧನಾನಂತರ, 1994ರಲ್ಲಿ ನಡೆದ ಚುನಾವಣೆಯ ನಂತರ ಮಹದೇವಪ್ರಸಾದ್‌ ಅವರ ಅದೃಷ್ಟವೇ ಬದಲಾಯಿತು. ಹಾಗೆಯೇ ಕ್ಷೇತ್ರದ ಚಿತ್ರಣವೂ ಬದಲಾಯಿತು. ಅದುವರೆಗೂ ಅಮ್ಮ ಎನ್ನುತ್ತಿದ್ದ ಕ್ಷೇತ್ರ ಅಪ್ಪನ ಕ್ಷೇತ್ರವಾಗಿ ಪರಿವರ್ತನೆಗೊಂಡಿತು.7 ಬಾರಿ ಗೆದ್ದಿದ್ದರೂ ನಾಗರತ್ನಮ್ಮನವರ ಅವಧಿಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ಗಣನೀಯ ಪ್ರಮಾಣದಲ್ಲಿ ನಡೆದಿರಲಿಲ್ಲ. ಮಹದೇವಪ್ರಸಾದ್‌ ಐದು ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ನಡೆದವು.

ಆದರೆ ಸತತವಾಗಿ ಐದು ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ದಾಖಲೆ ಈಗ ಮಹದೇವಪ್ರಸಾದ್‌ ಹೆಸರಿಗೆ ಜಮೆಯಾಗಿದೆ. ಸತತ ಗೆಲುವನ್ನು ಹೊರತುಪಡಿಸಿದರೆ ಗುಂಡ್ಲುಪೇಟೆ ಕ್ಷೇತ್ರದಲ್ಲಿ 7 ಬಾರಿ ಗೆದ್ದ ದಾಖಲೆ ನಾಗರತ್ನಮ್ಮನವರ ಹೆಸರಿನಲ್ಲೇ ಇದೆ. ಒಟ್ಟಾರೆ ಸ್ವಾತಂತ್ರ್ಯ ನಂತರದ ಚುನಾವಣೆ ಆರಂಭಿಸಿ ಇದುವರೆಗೂ, ಒಮ್ಮೆ ಎಚ್‌.ಕೆ. ಶಿವರುದ್ರಪ್ಪ ಅವರು ಗೆದ್ದಿದ್ದನ್ನು ಹೊರತುಪಡಿಸಿ, ನಾಗರತ್ನಮ್ಮ ಹಾಗೂ ಮಹದೇವಪ್ರಸಾದ್‌ ಅವರಿಬ್ಬರೇ ಆ ಕ್ಷೇತ್ರದ ಅಧಿಪತಿಗಳಾಗಿದ್ದರು.

– ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.