ಕರ್ನಾಟಕದಲ್ಲೂ ಬಿಜೆಪಿ ಗೆಲುವು ಪಕ್ಕಾ: ಅಮಿತ್ ಶಾ
Team Udayavani, Mar 13, 2017, 3:45 AM IST
ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯ ದಿಗ್ವಿಜಯವನ್ನು 2014ರ ಲೋಕಸಭೆ ಚುನಾವಣೆಗಿಂತಲೂ ಮಿಗಿಲಾದ ಯಶಸ್ಸು ಎಂದು ವ್ಯಾಖ್ಯಾನಿ ಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, 2019ರ ಚುನಾವಣೆಯಲ್ಲೂ ಜನಾದೇಶ ಬಿಜೆಪಿ ಪರ ಇರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಚುನಾವಣಾ ವಿಜಯದ ಹಿನ್ನೆಲೆಯಲ್ಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಧಾನಿ ಮೋದಿ ಅವರ ಸನ್ಮಾನ ಕಾರ್ಯಕ್ರಮಕ್ಕೂ ಮುನ್ನ ಕಾರ್ಯ ಕರ್ತರನ್ನುದ್ದೇಶಿಸಿ ಮಾತನಾಡಿದ ಶಾ, ಈ ವಿಜಯ ಯಾತ್ರೆ ಮುಂಬರುವ ಕರ್ನಾಟಕ, ಹಿಮಾಚಲ ಪ್ರದೇಶ, ಗುಜರಾತ್ ರಾಜ್ಯಗಳ ಚುನಾವಣೆಯಲ್ಲೂ ಮುಂದುವರಿಯಲಿದ್ದು, ದೇಶದ ಪೂರ್ವ ಹಾಗೂ ದಕ್ಷಿಣ ರಾಜ್ಯಗಳನ್ನೂ ತಲುಪಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ವಿಜಯವನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಬಡವರ ಪರವಾದ ನೀತಿಗಳಿಗೆ ಸಿಕ್ಕ ಮನ್ನಣೆ ಎಂದಿರುವ ಅಮಿತ್ ಶಾ, ಪಂಚ ರಾಜ್ಯಗಳಲ್ಲಿ ಪಕ್ಷಕ್ಕೆ ಲಭಿಸಿರುವುದು ಅಭುತಪೂರ್ವ ಜಯ. ಇದು 2014ರ ಐತಿಹಾಸಿಕ ಗೆಲುವನ್ನು ಮುಂದುವರಿಸಿಕೊಂಡು ಹೋಗುವ ಸೂಚನೆ ಎಂದರು. ಈ ವೇಳೆ ಪಕ್ಷದ ಇತರ ಹಿರಿಯ ಮುಖಂಡರೊಂದಿಗೆ ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದ ಶಾ, ನೋಟು ಅಮಾನ್ಯ ಕ್ರಮ ದೇಶದ ಜನರನ್ನು ಪಕ್ಷದ ಸನಿಹ ಕರೆತಂದಿದೆ. ಇದು ನರೇಂದ್ರ ಮೋದಿ ಅವರ ಜನಪರ ಆಡಳಿತಕ್ಕೆ ಸಂದ ಗೆಲುವು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
MUST WATCH
ಹೊಸ ಸೇರ್ಪಡೆ
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ