“ಆರ್ಥಿಕವಾಗಿ ಸದೃಢರನ್ನಾಗಿಸುವುದೇ ಧ್ಯೇಯ’
Team Udayavani, Mar 13, 2017, 2:49 PM IST
ಬೆಳ್ತಂಗಡಿ : ಧ.ಗ್ರಾ.ಯೋಜನೆಯ ಮೂಲಕ ಸ್ವಸಹಾಯ ಸಂಘ ರಚಿಸಿ ಆರ್ಥಿಕವಾಗಿ ಸದೃಢರನ್ನಾಗಿಸುವುದೇ ಧ್ಯೇಯವಾಗಿದೆ. ಹೊಸದಾಗಿ ರಚನೆಯಾದ ಸಂಘದ ಸದಸ್ಯರು ಕೂಡ ಅಭಿವೃದ್ಧಿಯನ್ನು ಕಾಣಬೇಕು. ಸ್ವ ಉದ್ಯೋಗಿಗಳಾಗಿ ಸಾಧನೆಯನ್ನು ಮಾಡಿ ತೋರಿಸ ಬೇಕು ಎಂದು ಧ.ಗ್ರಾ. ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಚಂದ್ರಶೇಖರ ಹೇಳಿದರು.
ಅವರು ಬೆಳ್ತಂಗಡಿ ಲಾ„ಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಧ.ಗ್ರಾ. ಯೋಜನೆಯ ಬೆಳ್ತಂಗಡಿ ವಲಯದ ನೂತನ 8 ಸ್ವ ಸಹಾಯ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು.ಹಿಂದೆ ಎಲ್ಲರೂ ಆರ್ಥಿಕವಾಗಿ ಹಿಂದುಳಿದಿದ್ದರು. ಅಭಿವೃದ್ಧಿಯೂ ಇರಲಿಲ್ಲ. ಈಗ ತಂತ್ರಜ್ಞಾನ ಬೆಳೆದ ಹಾಗೆ ಬದಲಾವಣೆಯೂ ಆಗುತ್ತಿದೆ. ಉಳಿತಾಯ ಯೋಜನೆಯಿಂದ ನಮ್ಮ ಆರ್ಥಿಕ ಸ್ಥಿತಿಗತಿಯೂ ಉತ್ತಮ ವಾಗುತ್ತದೆ. ನಾವು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ನಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಂಡು ಉತ್ತಮ ಜೀವನ ನಡೆಸಲು ಇಂತಹ ಸಂಘಗಳು ಸಹಕಾರಿ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಲಾ„ಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಕಲ್ಪನೆಯ ಕೂಸು ಗ್ರಾಮಾಭಿವೃದ್ಧಿ ಯೋಜನೆ. ಇದರಿಂದ ತಾಲೂಕಿನ ಜನತೆ ಅಲ್ಲದೆ ರಾಜ್ಯದ ಜನರು ಆರ್ಥಿಕವಾಗಿ ಸಬಲಗೊಂಡಿದ್ದಾರೆ. ಮಹಿಳಾ ಸಶಕ್ತೀಕರಣವಾಗಿದೆ. ಜ್ಞಾನ ವಿಕಾಸದ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢವಾಗಿದ್ದಾರೆ. ಶ್ರೀ ಕ್ಷೇತ್ರದ ಯೋಜನೆಗಳು ಜನರ ಬದುಕಿನ ಆಶಾಕಿರಣವಾಗಿ ಮೂಡಿಬಂದಿವೆ. ಹೊಸದಾಗಿ ರಚನೆಯಾದ ಸಂಘಗಳು ಇದರ ಪ್ರಯೋಜನ ಪಡೆದು ಸಾಧನೆ ಮಾಡಿ ತೋರಿಸಬೇಕು ಎಂದರು.ವಲಯಾಧ್ಯಕ್ಷೆ ಶಾರದಾ ಎಸ್. ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಯೋಜನೆಯ ಬೆಳ್ತಂಗಡಿ ತಾ| ಯೋಜನಾಧಿಕಾರಿ ರೂಪಾ ಜಿ. ಜೈನ್, ಪತ್ರಕರ್ತ ಭುವನೇಶ್ ಗೇರುಕಟ್ಟೆ ಮತ್ತಿತರರು ಉಪಸ್ಥಿತರಿದ್ದರು. ನೂತನವಾಗಿ ರಚನೆಯಾದ 8 ಸ್ವ ಸಹಾಯ ಸಂಘಗಳ ಪದಾಧಿಕಾರಿಗಳಿಗೆ ಸಂಘದ ಪುಸ್ತಕವನ್ನು ಹಸ್ತಾಂತರಿಸಲಾಯಿತು.
ಸೇವಾ ಪ್ರತಿನಿಧಿ ಗೀತಾ ಸ್ವಾಗತಿಸಿ, ಭಾರತಿ ವಂದಿಸಿದರು. ಬೆಳ್ತಂಗಡಿ ವಲಯ ಮೇಲ್ವಿಚಾರಕ ಸುರೇಶ್ ಎಸ್. ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’
Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ