ಈ ಗ್ರಾಮದ ಜನರಿಗೆ ಬೇಸಗೆಯೂ ಬಿಸಿಯೇ!


Team Udayavani, Mar 13, 2017, 4:27 PM IST

113AKA2a.jpg

ಆಲಂಕಾರು: ಇಲ್ಲಿಯ ಬುಡೇರಿಯಾ, ಚಾಮೆತ್ತಡ್ಕ ದಲಿತ ಕಾಲನಿ ಹಾಗೂ ಆಸುಪಾಸು ಗಳಲ್ಲಿ ಕುಡಿಯುವ ನೀರಿಗಾಗಿ ಬೇಸಿಗೆಯ ಆರಂಭದಲ್ಲೇ ಅಭಾವ ಉಂಟಾಗಿದೆ.

ಜಿಲ್ಲಾ ಪಂಚಾಯತ್‌ ನೀಡಿದ ಭರವಸೆ ಯಂತೆ ಕೊಳವೆಬಾವಿ ಮತ್ತು ಟ್ಯಾಂಕ್‌ ನಿರ್ಮಿಸಿದ್ದರೆ ಜನರಿಗೆ ಅನುಕೂಲವಾಗು ತ್ತಿತ್ತು. ಅದಾಗದ್ದರಿಂದ ಈ ಭಾಗದ ಜನತೆ ನೀರಿಗಾಗಿ ಅಲೆದಾಟ ಆರಂಭಿಸಿದ್ದಾರೆ. ಬುಡೇರಿಯಾ ಪಜ್ಜಡ್ಕದ ಜನತೆ ಇದುವರೆಗೆ ಆಶ್ರಯಿಸಿದ್ದ ಕುಮಾರಧಾರ ನದಿಯ ಕಿರುತೋಡು ಬತ್ತಿಹೋಗಿದೆ. ಹನಿ ನೀರಿ ಗಾಗಿ ಹೊಗೆಯಲ್ಲಿ ಗುಂಡಿ ತೋಡಿ ನೀರಿನ ಮೂಲವನ್ನು ಹುಡುಕಲಾಗುತ್ತಿದೆ. ಕಳೆದ ವರ್ಷದಿಂದ ಈ ಭಾಗದಲ್ಲಿ ಜಿಲ್ಲಾ ಪಂಚಾಯತ್‌ ಅನುದಾನದಲ್ಲಿ ಕೊಳವೆಬಾವಿ ಮತ್ತು ಟ್ಯಾಂಕ್‌ ನಿರ್ಮಾಣವಾಗುತ್ತದೆ ಎಂಬ ಭರವಸೆ ಜನಪ್ರತಿನಿಧಿಗಳಿಂದ ಸಿಕ್ಕಿತ್ತು. ಆದರೆ ಈ ಭರವಸೆ ಇನ್ನೂ ಈಡೇರಿಲ್ಲ. ಇದೀಗ ನೀರಿಗಾಗಿ ಕುಮಾರಧಾರ ಕಿರು ನದಿಯ ಉದ್ದಗಲಕ್ಕೂ ಜೆಸಿಬಿ ಯಂತ್ರದ ಮೂಲಕ ಗುಂಡಿಯನ್ನು ತೋಡಲಾಗುತ್ತಿದೆ. ಮತ್ತೆ ಕೆಲವರು ಮಾನವ ಶಕ್ತಿಯನ್ನು ಬಳಸಿ ಗುಂಡಿ ನಿರ್ಮಿಸುತ್ತಿದ್ದಾರೆ. ಒಟ್ಟಿನಲ್ಲಿ ಬಿಸಿಲ ಧಗೆಗೆ ಸಿಕ್ಕಿದ ನೀರೂ ಬತ್ತಿ ಹೋಗುತ್ತಿದ್ದು, ಗ್ರಾಮಸ್ಥರು ಕಂಗಾಲಾಗಿದ್ದಾರೆ.

ಬೆರಳೆಣಿಕೆಯಷ್ಟು ಮಂದಿ ತಾವು ತೋಡಿದ ಗುಂಡಿ ಮರಳಿನಲ್ಲಿ ಮುಚ್ಚಿಹೋಗ ಬಾರದು ಎಂಬ ದೃಷ್ಟಿಯಿಂದ ಕಳೆದ ಬಾರಿ ಸಿಮೆಂಟಿನ ರಿಂಗ್‌ಗಳನ್ನು ಬಳಸಿ ನೀರು ಸಂಗ್ರಹವಾಗುವಂತೆ ಪ್ರಯತ್ನಿಸಿದ್ದರು. ಆದರೆ ಈ ಬಾರಿ ಆ ಗುಂಡಿಗಳಲ್ಲೂ ನೀರು ಬತ್ತಿ ಹೋಗುವ ಲಕ್ಷಣಗಳಿವೆ. ಇದರಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ನೀರಿನ ಕೊರತೆ ಜತೆಗೆ ಸಾವಿರಾರು ರೂ. ನಷ್ಟವಾದಂತಾಗಿದೆ. ಸ್ಥಳೀಯಾಡಳಿತ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ನಾವು ಗುಳೆ ಹೋಗಬೇಕಾದೀತು ಎಂದು ಆತಂಕ ವ್ಯಕ್ತಪಡಿಸುತ್ತಾರೆ ಗ್ರಾಮಸ್ಥರು.

ನಾಶವಾಗುತ್ತಿರುವ ಕೃಷಿ
ಕಳೆದ ವರ್ಷವೇ ಈ ಭಾಗದ ಜನತೆಗೆ ಕುಡಿಯುವ ನೀರಿಗಾಗಿ ಪೈಪ್‌ ಲೈನ್‌ ಮಾಡಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಸ್ಥಳೀಯಾಡಳಿತ ಭರವಸೆ ನೀಡಿತ್ತು. ಆದರೆ ಅದೂ ಜಾರಿಯಾಗಿಲ್ಲ. ಕುಮಾರಧಾರಾ ನದಿಯ ಉಪ ನದಿಯಾದ ಕಿರು ತೋಡು ಜೀವ ಈ ಭಾಗಕ್ಕೆ ಜೀವನದಿ. ಇದುವರೆಗೆ ಎಪ್ರಿಲ್‌ ಅಂತ್ಯಕ್ಕೆ ನೀರಿಗಾಗಿ ತೋಡಿನಲ್ಲಿ ಗುಂಡಿ ತೋಡಲಾಗುತ್ತಿತ್ತು. ಈ ಬಾರಿ ಮಾತ್ರ ಮಾರ್ಚ್‌ ಆರಂಭಕ್ಕೆ ನೀರಿಗೆ ಕೊರತೆ ಎದುರಾಗಿದೆ. ಈ ಭಾಗದ ಜನರು ಅಲ್ಲಲ್ಲಿ ಗುಂಡಿ ತೋಡಿ ಕೃಷಿ ಕೆಲಸಗಳಿಗೂ ಬಳಸುತ್ತಿದ್ದರು. ಈಗ ಕೃಷಿಯೂ ಇಲ್ಲ, ಕುಡಿಯಲು ನೀರೂ ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ. ಅಡಿಕೆ ತೆಂಗು ಕೃಷಿ ತೋಟವೂ ನೀರಿಲ್ಲದೆ ಸಂಪೂರ್ಣ ನಾಶವಾಗುವ ಭೀತಿ ಎದುರಾಗಿದೆ.

ನೀರು ಅರಸಿ ಬಾವಿ ತೋಡಿದರು
ಕಿರು ತೋಡಿನ ಗುಂಡಿಯನ್ನು ಒಮ್ಮೆ ದುರಸ್ತಿ ಮಾಡಿದರೆ ಮತ್ತೆ ಇದರ ನೀರು ಉಪಯೋಗಿಸಲು ಕಡಿಮೆ ಪಕ್ಷ 5 ದಿನವಾದರೂ ಬೇಕು. ಇದೀಗ ನೀರು ಕಡಿಮೆಯಿದ್ದು ಮಣ್ಣು ಮಿಶ್ರಿತವಾಗಿರುತ್ತದೆ. ಹಾಗಾಗಿ ತಿಳಿಯಾಗಲು ಬಹುದಿನ ಬೇಕು. ಇಂತಹ ಸಂದರ್ಭದಲ್ಲಿ ಕಾಲನಿಯ ಜನ ತರಲು  ಸುಮಾರು 2 ಕಿಲೋ ಮೀಟರ್‌ ದೂರದ ಕುಮಾರಧಾರಾ ನದಿಗೆ ಹೋಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮನೆಯಂಗಳದಲ್ಲಿ ಬಾವಿ ಕೊರೆಯಲು ಆರಂಭಿಸಿದ್ದಾರೆ. ಆದರೆ ಬಾವಿ ತೋಡಿದರೂ ನೀರು ಸಿಗುತ್ತಿಲ್ಲ ಎಂಬುದು ಅವರ ಕೊರಗು.

ಬುಡೇರಿಯಾ ಸುತ್ತಮುತ್ತಲಿನ ಗ್ರಾಮದ ಜನರು ಕುಡಿಯುವ ನೀರಿಗೆ ಕಳೆದ ವರ್ಷವೂ ಸಮಸ್ಯೆ ಎದುರಿಸಿದ್ದರು. ಆಗ ಜನಪ್ರತಿನಿಧಿಗಳು ಶಾಶ್ವತ ನೀರಿನ ಯೋಜನೆಯ ಕನಸು ಬಿತ್ತಿದ್ದರು. ಅದಿನ್ನೂ ಈಡೇರದ ಕಾರಣ ಈ ವರ್ಷವೂ ಬೇಸಗೆಯಲ್ಲಿ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ.

ತುರ್ತು ಕಾಮಗಾರಿಗೆ ಅನುದಾನ
ಬುಡೇರಿಯಾದಲ್ಲಿ ನೀರಿನ ಸಮಸ್ಯೆ ತಲೆದೋರಿರುವುದು ಗಮನಕ್ಕೆ ಬಂದಿದೆ. ಇಲ್ಲಿ ಶಾಶ್ವತ ನೀರಿನ ಯೋಜನೆಗೆ 10 ಲಕ್ಷ ರೂ.ಗಳ ಅನುದಾನ ಬೇಕು. ಈ ವರ್ಷ ಜಿ.ಪಂ. ನಿಂದ ಅಸಾಧ್ಯ. ತುರ್ತು ವ್ಯವಸ್ಥೆಗಾಗಿ 1 ಲಕ್ಷ ರೂ. ನೀಡಬಹುದು. ಇಲ್ಲಿ ನೀರಿನ ಸಮಸ್ಯೆಯ ಬಗ್ಗೆ ಮುಂದಿನ ಜಿ.ಪಂ. ಅಭಿವೃದ್ಧಿ ಕಾರ್ಯಗಳ ಅವಲೋಕನ ಸಭೆಯಲ್ಲಿ ಚರ್ಚಿಸಿ ಶಾಶ್ವತ ನೀರಿನ ಯೋಜನೆಯನ್ನು ಶೀಘ್ರವೇ ಅನುಷ್ಠಾನ ಮಾಡಲಾಗುವುದು.

– ಪ್ರಮೀಳಾ ಜನಾರ್ದನ್‌, 
ಜಿ.ಪಂ.ಸದಸ್ಯೆ

–  ಸದಾನಂದ ಆಲಂಕಾರು

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.