5 ಕೋ. ರೂ. ವೆಚ್ಚದಲ್ಲಿ ಕೆರೆ, ಗಾರ್ಡನ್‌, ಪಾರ್ಕ್‌ ಅಭಿವೃದ್ಧಿ


Team Udayavani, Mar 13, 2017, 4:31 PM IST

12-Nadikere-1.jpg

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆಯಲ್ಲಿ ಭೂಗರ್ಭದೊಳಗೆ ಸೇರಿ ಹೋಗಿದ್ದು, ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಪುನರುಜ್ಜೀವನಗೊಳಿಸಲಾದ ಐತಿಹಾಸಿಕ ನಡಿಕೆರೆಯನ್ನು ಶಾಸಕ ವಿನಯ ಕುಮಾರ್‌ ಸೊರಕೆ ಅವರು ಮಾ. 12ರಂದು ಉದ್ಘಾಟಿಸಿ, ಬಾಗಿನ ಸಮರ್ಪಿಸಿದರು.

ಬಳಿಕ ಮಾತನಾಡಿದ ಅವರು ಕಾಪು ಪುರಸಭಾ ವ್ಯಾಪ್ತಿಯ ವಿವಿಧ ಕೆರೆ, ಗಾರ್ಡ್‌ನ್‌ ಮತ್ತು ಪಾರ್ಕ್‌ ಅಭಿವೃದ್ಧಿಗಾಗಿ 5 ಕೋ. ರೂ. ಅನುದಾನವನ್ನು ಮೀಸಲಿರಿಸಲಾಗಿದ್ದು, ಹಂತ-ಹಂತವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು. ಈಗಾಗಲೇ 7-8 ಕೆರೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದ್ದು, ನಡಿಕೆರೆಯನ್ನು ಮಾದರಿಯಾಗಿಟ್ಟುಕೊಂಡು ಎಲ್ಲಾ ಕೆರೆಗಳನ್ನು ಆಭಿವೃದ್ಧಿ ಪಡಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡುವುದಾಗಿ ಹೇಳಿದರು.

ನಾವು ಪರಿಸರವನ್ನು ರಕ್ಷಿಸಿದರೆ, ಪರಿಸರ ನಮ್ಮನ್ನು ರಕ್ಷಿಸುತ್ತದೆ. ಮಾರ್ಚ್‌ ಪ್ರಥಮಾರ್ಧದಲ್ಲೇ ಕೆಲವು ಕಡೆಗಳಲ್ಲಿ ನೀರಿನ ಲಭ್ಯತೆ ಕಡಿಮೆಯಾಗುತ್ತಿದ್ದು, ಈ ಕಾರಣದಿಂದಾಗಿ ನೀರಿನ ಒರತೆಗಳನ್ನು ಹುಡುಕಿ ಪುನುರುಜ್ಜೀವನ ಗೊಳಿಸುವುದು ಇಂದಿನ ಅನಿ ವಾರ್ಯತೆಯಾಗಿದೆ. 

ನಡಿಕೆರೆಯ ಪುನರುಜೀjವನದ ಮೂಲಕವಾಗಿ ಹತ್ತಾರು ಕೀ. ಮೀ. ವ್ಯಾಪ್ತಿಯಲ್ಲಿ ನೀರಿನ ಒರತೆ ವೃದ್ಧಿಯಾಗಲಿದೆ ಎಂದರು.ಕಾಪು ಪುರಸಭಾಧ್ಯಕ್ಷೆ ಕು| ಸೌಮ್ಯಾ ಎಸ್‌., ಉಪಾಧ್ಯಕ್ಷ ಎಚ್‌. ಉಸ್ಮಾನ್‌, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಉದ್ಯಮಿ ಮನೋಹರ್‌ ಎಸ್‌. ಶೆಟ್ಟಿ, ಗೌರವ್‌ ಶೇಣವ, ಎಂಜಿನಿಯರ್‌ ಎಸ್‌. ಟಿ. ಗೌಡ, ಗುತ್ತಿಗೆದಾರ ನಾಗರಾಜ್‌, ಪುರಸಭಾ ಸದಸ್ಯೆ ರಮಾ ವೈ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಕೆರೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಕಾಪು ಶಾಸಕ ವಿನಯ ಕುಮಾರ್‌ ಸೊರಕೆ, ಅಧಿಕಾರಿ ಎಸ್‌. ಟಿ. ಗೌಡ, ಗುತ್ತಿಗೆದಾರ ನಾಗರಾಜ್‌, ಕಲ್ಲಿನ ಕೆಲಸದ ಹುಸೇನ್‌ ಸಾಹೇಬ್‌, ಪ್ರಗತಿಪರ ಕೃಷಿಕ ರಾಮ ಪೂಜಾರಿ ಇವನ್ನು ಸಮ್ಮಾನಿಸಲಾಯಿತು. ಇಂಜಿನಿಯರ್‌ ಗೌತಮ್‌, ಮ್ಯಾನೇಜರ್‌ ನಾರಾಯಣ ದೇವಾಡಿಗ ಅವರನ್ನು ಅಭಿನಂದಿಸಲಾಯಿತು.

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ ಸ್ವಾಗತಿಸಿದರು. ವಂದನಾ ಶೆಟ್ಟಿ ವಂದಿಸಿದರು. ಕರಂದಾಡಿ ಶಾಲಾ ಮುಖ್ಯ ಶಿಕ್ಷಕ ನಿರ್ಮಲ್‌ ಕುಮಾರ್‌ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.