ಬಣ್ಣದೋಕುಳಿ ಸಂಭ್ರಮದಲ್ಲಿ ಕೊಲೆ
Team Udayavani, Mar 14, 2017, 12:07 PM IST
ಬೆಂಗಳೂರು: ಹೋಳಿ ಸಂಭ್ರಮದಲ್ಲಿದ್ದ ಸ್ನೇಹಿತರ ನಡುವೆ ನೀರಿನ ವಿಚಾರಕ್ಕೆ ಉಂಟಾದ ಜಗಳ ಕೊನೆಗೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಧ್ಯಾನ್ಜಿತ್ ಸಿಂಗ್ (23) ಕೊಲೆಯಾದ ದುರ್ದೈವಿ.
ಕೊಲೆಯಾದ ಧ್ಯಾನ್ಜಿತ್ ಹಾಗೂ ಆತನ ಸ್ನೇಹಿತರು ಕೋಣನಕುಂಟೆ ಕ್ರಾಸ್ ಸಮೀಪದ ಖಾಲಿ ಜಾಗದಲ್ಲಿ ಶೆಡ್ನಲ್ಲಿ ವಾಸಿಸುತ್ತಿದ್ದರು. ಭಾನುವಾರ ಹೋಳಿ ಹಬ್ಬದ ಪ್ರಯುಕ್ತ ಸಂಜೆ 4 ಗಂಟೆ ಸುಮಾರಿಗೆ ಸಾಮೂಹಿಕವಾಗಿ ಬಣ್ಣ ಎರಚಿಕೊಂಡು ಆಟವಾಡಿದ್ದಾರೆ.ಬಳಿಕ ಧ್ಯಾನ್ಜಿತ್ ಶೆಡ್ಗೆ ತೆರಳಿ ಸ್ನಾನ ಮಾಡುತ್ತಿದ್ದಾಗ ಅನಗತ್ಯವಾಗಿ ನೀರು ಪೋಲು ಮಾಡಿದ್ದಾನೆ.
ಇದನ್ನು ಕಂಡ ಸ್ನೇಹಿತರಾದ ದೀಪಕ್ ಮಹಾಪಾತ್ರ ಮತ್ತು ಸಮರ್ ಎಂಬುವವರು, ನೀರು ಪೋಲು ಮಾಡದಂತೆ ಸೂಚಿಸಿದ್ದಾರೆ. ಇದೇ ವಿಚಾರವಾಗಿ ಮೂವರ ಮಧ್ಯೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಅಲ್ಲಿಯೇ ಇದ್ದ ಕಟ್ಟಿಗೆ ತೆಗೆದುಕೊಂಡ ಇಬ್ಬರು , ಧ್ಯಾನ್ಜಿತ್ಗೆ ಮೇಲೆ ಹಲ್ಲೆ ನಡೆಸಿದ್ದಾರೆ.
ಪರಿಣಾಮ ಧ್ಯಾನ್ಜಿತ್ತಲೆಗೆ ಪೆಟ್ಟಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಈ ಸಂಬಂಧ ಇಬ್ಬರು ಆರೋಪಿಗಳು ಹಾಗೂ ಕೆಲ ಯುವಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ