ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿದ ವಿದೇಶಿ ಡ್ರಗ್ಸ್, ಗಾಂಜಾ ಮಾಫಿಯಾ
Team Udayavani, Mar 16, 2017, 4:06 PM IST
ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪ್ರಜೆಗಳಿಂದಾಗಿ ಗಾಂಜಾ ಮತ್ತು ಡ್ರಗ್ಸ್ ಮಾಫಿಯಾ ಹೆಚ್ಚಳವಾಗುತ್ತಿದೆ. ಚಿಕ್ಕಮಕ್ಕಳಿಂದಲೂ ನಗರದಲ್ಲಿ ಡ್ರಗ್ಸ್ ಜಾಲ ಹರಡುತ್ತಿದೆ. ಹಾಗಾಗಿ ನೈಜೀರಿಯನ್ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಬಿಜೆಪಿ ಎಂಎಲ್ ಸಿ ಸೋಮಣ್ಣ ಗುರುವಾರ ಮೇಲ್ಮನೆ ಕಲಾಪದಲ್ಲಿ ಆಗ್ರಹಿಸಿದರು.
ವಿಧಾನಪರಿಷತ್ ಕಲಾಪದಲ್ಲಿ, ಡ್ರಗ್ಸ್ ಮಾಫಿಯಾದ ಬಗ್ಗೆ ಕಳವಳ ವ್ಯಕ್ತಪಡಿಸಿ ಮಾತನಾಡಿದ ಅವರು, ಜಯನಗರ ಶಾಲೆಯಲ್ಲಿ ಓದುತ್ತಿರುವ ಇಬ್ಬರು ಮಕ್ಕಳು ಚಾಕ್ಲೆಟ್ ತಿಂದು ಸ್ಥಿಮಿತ ಕಳೆದುಕೊಂಡಿದ್ದು, ಬಳಿಕ ವೈದ್ಯಕೀಯ ತಪಾಸಣೆ ವೇಳೆ ಅವರು ತಿಂದಿದ್ದು ಡ್ರಗ್ಸ್ ಮಿಶ್ರಿತ ಚಾಕೋಲೇಟ್ ಎಂಬುದು ಪತ್ತೆಯಾಗಿದೆ ಎಂದು ಹೇಳಿದರು.
ಈ ವಿಚಾರದ ಪ್ರಸ್ತಾಪಕ್ಕೆ ಅಚ್ಚರಿವ್ಯಕ್ತಪಡಿಸಿದ ಗೃಹ ಸಚಿವ ಪರಮೇಶ್ವರ್, ನಾವು ಮಾದಕ ವಸ್ತು ಜಾಲ ಬೆಳೆಯಲು ಬಿಡುವುದಿಲ್ಲ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಅಲ್ಲದೇ ನೈಜೀರಿಯನ್ ಪ್ರಜೆಗಳ ವಿರುದ್ಧ ದಾಖಲಾದ ಪ್ರಕರಣಗಳ ಮಾಹಿತಿ ನೀಡಿ, ಪ್ರಕರಣದಲ್ಲಿ ಸಿಲುಕಿದ ನೈಜೀರಿಯನ್ ಪ್ರಜೆಗಳ ಗಡಿಪಾರಿಗೆ ಶಿಫಾರಸು ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಪರಿಷತ್ ನಲ್ಲೂ ಡೈರಿ ಫೈಟ್:
ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ನೀಡಿದ್ದಾರೆನ್ನಲಾದ ಡೈರಿ ವಿಚಾರ ಗದ್ದಲ, ಕೋಲಾಹಲಕ್ಕೆ ಕಾರಣವಾಗಿ ಕಲಾಪ ನಾಳೆಗೆ ಮುಂದೂಡಿಕೆಯಾಗಿದೆ. ಡೈರಿ ವಿವಾದ ವಿಧಾನಪರಿಷತ್ ನಲ್ಲೂ ಪ್ರತಿಧ್ವನಿಸಿತು. ಡೈರಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಆಗ್ರಹಿಸಿದರು. ಆದರೆ ಸಭಾಪತಿ ಡಿಎಚ್ ಶಂಕರಮೂರ್ತಿ ಪ್ರಸ್ತಾಪವನ್ನು ತಳ್ಳಿಹಾಕಿದರು. ಏತನ್ಮಧ್ಯೆ ಮಧ್ಯಪ್ರವೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಬಿಐ ಮೇಲೆ ನಿಮಗೆ ಯಾವಾಗಿನಿಂದ ಮೋಹ ಪ್ರಾರಂಭವಾಯಿತೋ? ಕೇಂದ್ರದಲ್ಲಿ ನಿಮ್ಮ (ಬಿಜೆಪಿ) ಸರ್ಕಾರ ಬಂದ ಮೇಲೆ ಸಿಬಿಐ ಮೇಲೆ ಪ್ರೀತಿ ಹೆಚ್ಚಾಗಿದೆ. ಇಲ್ಲದಿದ್ದರೆ ಅದು ಕಾಂಗ್ರೆಸ್ ಕೈಗೊಂಬೆ ಎಂದು ಟೀಕಿಸುತ್ತಿದ್ದೀರಿ ಎಂದು ಟಾಂಗ್ ನೀಡಿದ ಅವರು, ಸಿಬಿಐಗೆ ವಹಿಸುವಂತೆ ನೀವೇ ಒತ್ತಾಯಿಸಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್ಒ ಸೇರಿ ಐವರಿಗೆ ನೋಟಿಸ್
ಅಧಿಕಾರಿ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸಿ: ಯತ್ನಾಳ್
BJP workers: ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ
Hasana: ಪೈನ್ಡ್ರೈವ್ ಹಂಚಿಕೆ; ಚೇತನ್, ಲಿಖಿತ್ ಗೌಡಗೆ ಜಾಮೀನು
Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್