ತುಳು ಸಂಘ  ಬೊರಿವಲಿಯ ವಾರ್ಷಿಕೋತ್ಸವ ಸಂಭ್ರಮ


Team Udayavani, Mar 16, 2017, 4:30 PM IST

14-Mum01a.jpg

ಮುಂಬಯಿ: ಮೊದಲಿನ ಕಾಲದಲ್ಲಿ ನಮ್ಮ ನಾಡಿನಲ್ಲಿ ತುಳುವರೆಲ್ಲರೂ ಒಂದು ಕುಟುಂಬದಂತೆ ಒಟ್ಟಿಗೆ ಇದ್ದವರು. ಇದನ್ನು ನಾವು ಮುಂಬಯಿಯಲ್ಲೂ ಮುಂದುವರಿಸುತ್ತಿರುವೆವು. ಇಂದು ನಾವು ಉದಯೋನ್ಮುಖ ಕರಾಟೆ ಚಾಂಪಿಯನ್‌ ಅನ್ನು ಸಮ್ಮಾನಿಸಿದ್ದೇವೆ. ಈ ಕರಾಟೆ  ಪ್ರಾರಂಭಗೊಂಡದ್ದು ನಮ್ಮ ತುಳುನಾಡಿನಲ್ಲಿ ಹೊರತು ಚೀನಾದಲ್ಲಿ ಅಲ್ಲ, ವೀರತನವು ಬಂದದ್ದು,  ತುಳು ನಾಡಿನಿಂದ, ನಮ್ಮ ತುಳುನಾಡಿನ ಕೊಡುಗೆ, ಅದೂ ಕೋಟಿ ಚೆನ್ನಯರಿಂದ ಎಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮಾಜಿ ಅಧ್ಯಕ್ಷ ಎಲ್‌. ವಿ. ಅಮೀನ್‌ ನುಡಿದರು.

ಮಾ. 11ರಂದು ಬೊರಿವಲಿ ಪಶ್ಚಿಮದ ಗ್ಯಾನ್‌ ಸಾಗರ್‌ ಆ್ಯಂಪಿ ಥೀಯೆಟರ್‌ನಲ್ಲಿ ನಡೆದ  ತುಳು ಸಂಘ ಬೊರಿವಲಿಯ ಆರನೇ ವಾರ್ಷಿಕೋತ್ಸವ ಸಮಾರಂಭದ ಗೌರವ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಇಂದು ಬೊರಿವಲಿಯಲ್ಲಿ ನಾವೆಲ್ಲರೂ ಒಂದಾಗಿದ್ದು,  ನಮ್ಮ ಹಿರಿಯರು ಕಟ್ಟಿದ ಆ ತುಳುನಾಡನ್ನು ಇಂದು ನಮ್ಮವರು ಮುಂಬಯಿಯಲ್ಲೂ ಕಟ್ಟುತ್ತಿರುವುದು ಅಭಿನಂದನೀಯ. ಇಂದು ಇಲ್ಲಿ ತುಳುನಾಡಿನ ಸುಂದರವಾದ ವಾತಾವರಣ ನಿರ್ಮಾಣಗೊಂಡಿದೆ.  ಯುವ ಜನಾಂಗದಿಂದ ಇಂದು ತುಳು ಭಾಷೆ ಉಳಿಯುತ್ತಿದೆ.  ತುಳು ಭಾಷೆಗಾಗಿಯೇ ಸ್ಥಾಪನೆಗೊಂಡ ಚಿಣ್ಣರ ಬಿಂಬದಂತಹ ಸಂಘಟನೆಯಲ್ಲಿ ಇಂಗ್ಲಿಷ್‌ ಮಾಧ್ಯಮದ ಮಕ್ಕಳಿದ್ದು ಬಹಳ ಸುಂದರವಾಗಿ ತುಳು ಭಾಷೆಯಲ್ಲಿ ಕಾರ್ಯಕ್ರಮ ನಿರ್ವಹಿಸುತ್ತಿರುವಾಗ ಸಂತೋಷವಾಗುತ್ತಿದೆ. ನಾವೆಲ್ಲ ಒಂದಾಗಿ ತುಳು ಭಾಷೆಯನ್ನು ಉಳಿಸಿ ಬೆಳೆಸುತ್ತಿರುವ ಕಾರ್ಯಮಾಡುತ್ತಿದ್ದು ಇಂದಿನ ಜನಾಂಗಕ್ಕೆ ಇದು ಅನಿವಾರ್ಯ.  ಎಲ್ಲ ತುಳುವರು ಒಂದಾಗಿ ತುಳು ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ತುಳುನಾಡಿನ ಸೌಂದರ್ಯವನ್ನು ಬೆಳೆಸೋಣ. ಪೇಟೆಮನೆ ಪ್ರಕಾಶ್‌  ಶೆಟ್ಟಿ ಹಾಗೂ ಅವರ ತಂಡದವರಿಂದ ಈ ಸಂಘವು ಇನ್ನಷ್ಟು ಬೆಳೆಯಲಿ ಎಂದರು.

ಇನ್ನೋರ್ವ ಗೌರವ ಅತಿಥಿ ಬಂಟರ ಸಂಘ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಕೋಶಾಧಿಕಾರಿ ಕೊಂಡಾಡಿ ಪ್ರೇಮನಾಥ ಶೆಟ್ಟಿ ಅವರು ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿ, ತುಳು ಸಂಸ್ಕೃತಿ ವಿಶಿಷ್ಟವಾಗಿದ್ದು,  ತುಳುನಾಡನ್ನು ಕೇವಲ ಒಂದು ವಾಕ್ಯದಲ್ಲಿ ವರ್ಣಿಸಲು 

ಅಸಾಧ್ಯ, ಇಂದು ತುಳು ಸಮಾಜದ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಇಲ್ಲಿ ಸಮ್ಮಾನಿಸಿದ್ದು ನಿಜವಾಗಿಯೂ ಅಭಿನಂದನೀಯ. ತುಳು ಸಂಘದ ಅಭಿಮಾನಿಗಳಲ್ಲಿ ನಾನೂ ಓರ್ವನಾಗಿದ್ದೇನೆ. ಈ ಸಮಾರಂಭದಲ್ಲಿ ಬಹಳ ಸಂಖ್ಯೆಯಲ್ಲಿ ಮಕ್ಕಳು ಕಂಡು ಬರುತ್ತಿದ್ದು ಅವರನ್ನು ಇಲ್ಲಿಗೆ ತಂದುದಕ್ಕೆ ಅವರ ಹೆತ್ತವರಿಗೆ ಅಭಿನಂದನೆ ಸಲ್ಲಿಸಬೇಕಾಗಿದೆ. ಭೂತಾರಾದನೆ ಹಾಗೂ ಇತರ ಧಾರ್ಮಿಕ ಕಾರ್ಯದಲ್ಲಿ ಹೆಸರಾಗಿರುವ ತುಳುನಾಡಿನ ಎಲ್ಲಾ ಜಾಗದಲ್ಲಿ ವಿಶೇಷತೆಯಿದೆ.  ತುಳುವರನ್ನು ಒಟ್ಟುಗೂಡಿಸುವ ಕೆಲಸ ಈ ಸಂಘದಿಂದ ಇನ್ನಷ್ಟು ನಡೆಯಲಿ ಎಂದರು.

ತುಳು ಸಂಘ ಬೊರಿವಲಿಯ ಅಧ್ಯಕ್ಷ ಪೇಟೆಮನೆ ಪ್ರಕಾಶ್‌ ಶೆಟ್ಟಿ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅತಿಥಿಗಳನ್ನು ಪರಿಚಯಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಘದ ಸದಸ್ಯರಾದ ರೋಹಿಣಿ ಕೋಟ್ಯಾನ್‌, ಜಯಂತಿ ಸಾಲ್ಯಾನ್‌,  ಇಂದಿರಾ ಕಾಂಚನ್‌ ಹಾಗೂ ಇಂದಿರಾ ಪೂಜಾರಿ ಪ್ರಾರ್ಥನೆಗೈದರು.  ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಸ್ಥಳೀಯ ತುಳು ಸಂಘಟನೆಗಳನ್ನು ಸಮ್ಮಾನಿಸಲಾಯಿತು. ಬಂಟರ ಸಂಘ ಮುಂಬಯಿ  ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ  ಕಾರ್ಯಾಧ್ಯಕ್ಷ ವಿಜಯ ಆರ್‌. ಭಂಡಾರಿ ಮತ್ತು   ಬಿಲ್ಲವರ ಅಸೋಸಿಯೇಶದ್‌  ಬೊರಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸುಂದರ ಎಂ. ಪೂಜಾರಿ ಅವರನ್ನು ಅತಿಥಿಗಳು ಹಾಗೂ ಸಂಘದ ಪದಾಧಿಕಾರಿಗಳು ಸಮ್ಮಾನಿಸಿದರು. ಅಂಜನಾ ಮಹೇಶ್‌ ಶೆಟ್ಟಿ ಸಮ್ಮಾನಿತರನ್ನು ಪರಿಚಯಿಸಿದರು.

ಅತಿಥಿಗಳನ್ನು ಅಧ್ಯಕ್ಷರಾದ ಪೇಟೆಮನೆ ಪ್ರಕಾಶ ಶೆಟ್ಟಿ ಅವರೊಂದಿಗೆ ಉಪಾಧ್ಯಕ್ಷ ಪ್ರಭಾಕರ ಬಿ. ಶೆಟ್ಟಿ, ಕೋಶಾಧಿಕಾರಿ ರಜಿತ್‌  ಎಲ್‌. ಸುವರ್ಣ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಹರಿಣಾ ಆರ್‌. ಶೆಟ್ಟಿ ಅವರು ಪುಷ್ಪಗುತ್ಛ, ಸ್ಮರಣಿಕೆಯೊಂದಿಗೆ ಶಾಲು ಹೊದಿಸಿ ಸಮ್ಮಾನಿಸಿ  ಗೌರವಿಸಿದರು. ಹತ್ತನೆಯ ಹಾಗೂ ಹನ್ನೆರಡನೆಯ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದು ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.

ಸಂಘದ ಗೌರವ  ಪ್ರಧಾನ ಕಾರ್ಯದರ್ಶಿ ಕರುಣಾಕರ ಎಂ. ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಮಹಿಳಾ ವಿಭಾಗದವರಿಂದ ಅರಸಿನ ಕುಂಕುಮ ಹಾಗೂ ಸದಸ್ಯರಿಂದ ಹಾಗೂ ಮಕ್ಕಳಿಂದ ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆದವು. ಮನೋರಂಜನಾ ಕಾರ್ಯಕ್ರಮವನ್ನು ಸಂಘದ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಹರಿಣಾ ಆರ್‌. ಶೆಟ್ಟಿ ಅವರು ನಿರ್ವಹಿಸಿದರು. ಸದಸ್ಯತನ ಕಾರ್ಯಾಧ್ಯಕ್ಷೆ ಸುಮತಿ ಸಿ. ಸಾಲ್ಯಾನ್‌, ಕ್ರೀಡಾ ಕಾರ್ಯಾಧ್ಯಕ್ಷೆ ಶೋಭಾ ಸಿ. ಶೆಟ್ಟಿ ಮೊದಲಾದವರು  ಸಹಕರಿಸಿದರು.

ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಮೃತಾ ವೆಂಕಟ್ರಮಣ ತಂತ್ರಿ ಅವರನ್ನು ಗೌರವಿಸಲಾಯಿತು, ಜೊತೆ ಕೋಶಾಧಿಕಾರಿ ಸವಿತಾ ಸಿ. ಶೆಟ್ಟಿ ಅವರು ಅವರನ್ನು ಪರಿಚಯಿಸಿದರು. ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಪ್ರತಿಭೆಗಳಾದ ಕಾರ್ತಿಕ್‌ ಉಮಾನಾಥ ಶೆಟ್ಟಿ, ಕರಾಟೆಪಟು ದಿಯಾ ಶೆಟ್ಟಿ, ಅಂಜನಾ ಮಹೇಶ್‌ ಶೆಟ್ಟಿ, ಮೋಹಿತ್‌  ಉಮಾನಾಥ ಶೆಟ್ಟಿ ಅವರನ್ನು ಗೌರವಿಸಲಾಯಿತು. ಆಶಾ ಶೆಟ್ಟಿ ಸಮ್ಮಾನಿತರನ್ನು ಪರಿಚಯಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಗಣ್ಯರಾದ ಉಷಾ ಗೋಪಾಲ ಶೆಟ್ಟಿ, ಮುಂಡಪ್ಪ ಪಯ್ಯಡೆ, ಎಂ. ಡಿ. ಶೆಟ್ಟಿ, ವಿನೋದಾ ಶೆಟ್ಟಿ, ಅಪ್ಪಿ$ ವಿಟuಲ್‌ ಶೆಟ್ಟಿ ಮತ್ತಿತರ ಸಂಘಟನೆಗಳ ಮುಖ್ಯಸ್ಥರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಜತೆ ಕಾರ್ಯದರ್ಶಿ ಪ್ರವೀಣ್‌ ಆರ್‌. ಶೆಟ್ಟಿ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಕರುಣಾಕರ ಎಂ. ಶೆಟ್ಟಿ ವಂದಿಸಿದರು. ಆಭಿನಯ ಮಂಟಪ ಮುಂಬಯಿ ಕಲಾವಿದರಿಂದ ಕರುಣಾಕರ ಕಾಪು ನಿರ್ದೇಶನದ ತುಳು ಹಾಸ್ಯಮಯ ನಾಟಕ ಒಯಿಕ್‌  ಲಾ ದಿನ ಬರೊಡು ಪ್ರದರ್ಶನಗೊಂಡಿತು. 

ಇಂದಿಲ್ಲಿ ಸೇರಿದ ಜನಸಂಖ್ಯೆಯನ್ನು ನೋಡಿದಾಗ ನಾವು ನಿಮ್ಮೆಲ್ಲರ ಪ್ರೀತಿಯನ್ನು ಗೆದ್ದಿರುವುದು ಇಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ.  ಕಳೆದ ಆರು ವರ್ಷಗಳಿಂದ ಈ ಸಂಘದ ಮೂಲಕ ನಾವು ಪರಿಸರದಲ್ಲಿ ತುಳು ಭಾಷೆ ಹಾಗೂ ತುಳು ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿರುವೆವು. ನಮ್ಮ ಕಾಲದಲ್ಲಿ ನಾವು ಹೆಚ್ಚಿನ ಸಮಯವನ್ನು ನಮ್ಮ ಹಿರಿಯರೊಂದಿಗೆ ಕಳೆದ ಕಾರಣ ನಮಗೆ ನಮ್ಮ ಸಂಸ್ಕೃತಿಯ ಅರಿವಾಗಿದೆ. ಆದರೆ ಇಂದಿನ ಜನಾಂಗಕ್ಕೆ ಅದು ಅಸಾಧ್ಯವಾಗಿದೆ. ಈಗಿನ ಜನಾಂಗವು ತಮ್ಮ ಹೆಚ್ಚಿನ ಸಮಯವನ್ನು ಶಿಕ್ಷಣಕ್ಕಾಗಿ ಶಾಲಾ ಕಾಲೇಜುಗಳಲ್ಲದೆ, ಖಾಸಗಿ ಟ್ಯೂಷನ್‌ ಹಾಗೂ ಆಧುನಿಕ ತಂತ್ರಜಾ°ನದೊಂದಿಗೆ ಕಳೆಯುತ್ತಿದ್ದು ತಮ್ಮ ಮಾತೃಭಾಷೆ, ಮಾತೃ ಸಂಸ್ಕೃತಿಯಿಂದ ವಂಚಿತರಾಗುತ್ತಿದ್ದು, ಇಂತಹ ಸಂಘ ಸಂಸ್ತೆಗಳ ಮೂಲಕ ಮಾತ್ರ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ. ಅಂತಹ ಸಂಘಟನೆಗಳಲ್ಲಿ ಬಂಟರ ಸಂಘ ಹಾಗೂ ಬಿಲ್ಲವರ ಅಸೋಸಿಯೇಶನ್‌ ಕೂಡಾ ಸೇರಿದ್ದು ತುಳು ಭಾಷೆ ಸಂಸ್ಕೃತಿಯನ್ನು ಮಹಾನಗರದಲ್ಲಿ ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದ್ದು ಅದರ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರನ್ನು ಇಂದು ಸಮ್ಮಾನಿಸಲು ಸಂತೋಷವಾಗುತ್ತಿದೆ 

 – ಪೇಟೆಮನೆ ಪ್ರಕಾಶ್‌ ಶೆಟ್ಟಿ (ಅಧ್ಯಕ್ಷರು :  ತುಳು ಸಂಘ ಬೊರಿವಲಿ).

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.