ವಿಚಾರವಾದಿ ಪ್ರೊ| ನರೇಂದ್ರ ನಾಯಕ್‌ ಕೊಲೆಗೆ ಸಂಚು?


Team Udayavani, Mar 17, 2017, 11:05 AM IST

NAyak.jpg

ಮಂಗಳೂರು: ವಿಚಾರವಾದಿಗಳ ಸಂಘದ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಪ್ರೊ | ನರೇಂದ್ರ ನಾಯಕ್‌ ಅವರು ತನ್ನ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ನಗರದ ಉರ್ವ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ. 

ಪ್ರೊ| ನರೇಂದ್ರ ನಾಯಕ್‌  ಅವರು ಬುಧವಾರ ಬೆಳಗ್ಗೆ  ನಗರದ ಹ್ಯಾಟ್‌ಹಿಲ್‌ನಲ್ಲಿರುವ  (ಲಾಲ್‌ಬಾಗ್‌ ಬಳಿ) ತನ್ನ ಮನೆಯಿಂದ ಕಾರಿನಲ್ಲಿ ಹೊರಟು ಬಂದಾಗ ಬುಲೆಟ್‌ ಬೈಕ್‌ನಲ್ಲಿ ಬಂದ ಇಬ್ಬರು ತಡೆದು ನಿಲ್ಲಿಸಿ “ನಿಮ್ಮ ಕಾರಿನ ಟೈರ್‌ನಲ್ಲಿ  ಗಾಳಿ ಇಲ್ಲ’ ಎಂದು ಹೇಳಿ ಹಲ್ಲೆಗೆ ಯತ್ನಿಸಿದ್ದಾರೆ ಎಂದವರು ದೂರಿನಲ್ಲಿ ವಿವರಿಸಿದ್ದಾರೆ.

“ನಾನು ಕಾರನ್ನು ನಿಲ್ಲಿಸದೆ ಮುಂದುವರಿದು ಸಮೀಪದ ಪೆಟ್ರೋಲ್‌ ಬಂಕ್‌ಗೆ ತೆರಳಿ ಪರಿಶೀ ಲಿಸಿದಾಗ   ಕಾರಿನ ಟೈರ್‌ನಲ್ಲಿ  ಗಾಳಿ ಕಡಿಮೆಯಾಗಿಲ್ಲದಿರುವುದು ಕಂಡು ಬಂದಿದೆ. ಹಾಗಾಗಿ ಬೈಕ್‌ನಲ್ಲಿ ಬಂದವರು ಸುಳ್ಳು  ಹೇಳಿದ್ದಾರೆ. ಅವರು ನನ್ನ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದು, ನನ್ನ ಮೇಲೆ ದಾಳಿ ನಡೆಸುವುದು ಅವರ ಉದ್ದೇಶವಾಗಿತ್ತೆಂದು ಭಾಸವಾಗುತ್ತಿದೆ. ಒಂದೊಮ್ಮೆ ನಾನು ಕಾರಿನಿಂದ ಇಳಿಯುತ್ತಿದ್ದರೆ ನನ್ನ ಮೇಲೆ ದಾಳಿ ನಡೆಯುತ್ತಿತ್ತು ಎಂಬ ಸಂಶಯವಿದೆ’ ಎಂದವರು ತಿಳಿಸಿದ್ದಾರೆ. 

ವರ್ಷದ ಹಿಂದೆ ಕೊಲೆಯಾದ ಆರ್‌ಟಿಐ ಕಾರ್ಯಕರ್ತ ವಿನಾ ಯಕ ಬಾಳಿಗಾ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವ ದಿಶೆಯಲ್ಲಿ  ಪ್ರೊ| ನರೇಂದ್ರ ನಾಯಕ್‌ ಹೋರಾಟ ನಡೆಸುತ್ತಿದ್ದಾರೆ. 

ಅವರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ  ಕಳೆದ ಐದಾರು ತಿಂಗಳಿಂದ ಗನ್‌ ಮ್ಯಾನ್‌ ಸೌಲಭ್ಯ ಒದಗಿಸಲಾಗಿದೆ. ಬುಧವಾರ ಗನ್‌ ಮ್ಯಾನ್‌ ಬರುವುದಕ್ಕೆ ಮೊದಲೇ ಅವರು ಮನೆಯಿಂದ ಹೊರಟಿದ್ದರು. ಹಾಗಾಗಿ ಗನ್‌ ಮ್ಯಾನ್‌ ಜತೆಗಿರಲಿಲ್ಲ. 

ಪ್ರೊ| ನರೇಂದ್ರ ನಾಯಕ್‌ ಅವರು ಸಲ್ಲಿಸಿರುವ ದೂರನ್ನು ಉರ್ವ ಪೊಲೀಸರು ಸ್ವೀಕರಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಎಫ್‌ಐಆರ್‌ ದಾಖಲಾಗಬೇಕಿದೆ. 

ತನಿಖೆ ನಡೆಯುತ್ತಿದೆ: 
ಕಮಿಷನರ್‌

ಪ್ರೊ| ನರೇಂದ್ರ ನಾಯಕ್‌ ಅವರು ಬುಧವಾರದ ಘಟನೆಯ ಬಗ್ಗೆ ನೀಡಿರುವ ದೂರಿನ ಬಗ್ಗೆ  ತನಿಖೆ ನಡೆಸುತ್ತಿದ್ದೇವೆ.  ಅವರಿಗೆ ಕಳೆದ ಐದಾರು ತಿಂಗಳಿಂದ ಹಗಲು ಹೊತ್ತು ಗನ್‌ ಮ್ಯಾನ್‌ ಸೌಲಭ್ಯ ನೀಡಲಾಗಿದ್ದು, ಇದೀಗ ಅವರ ಭದ್ರತೆಗಾಗಿ ರಾತ್ರಿ ವೇಳೆಗೆ ಇನ್ನೋರ್ವ ಗನ್‌ ಮ್ಯಾನ್‌ ಸೌಲಭ್ಯ ಒದಗಿಸಲಾಗಿದೆ  ಎಂದು ಪೊಲೀಸ್‌ ಆಯುಕ್ತ ಎಂ. ಚಂದ್ರಶೇಖರ್‌ ತಿಳಿಸಿದ್ದಾರೆ. 
 

ಟಾಪ್ ನ್ಯೂಸ್

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.