ಚಿತ್ರದುರ್ಗದಲ್ಲಿ ಭೀಕರ ಸರಣಿ ಅಪಘಾತ: 14 ಸಾವು;15 ಮಂದಿಗೆ ಗಾಯ
Team Udayavani, Mar 18, 2017, 12:12 PM IST
ಮೊಳಕಾಲ್ಮೂರು: ತಾಲೂಕಿನ ರಾಮಪುರ ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 14 ಮಂದಿ ದಾರುಣವಾಗಿ ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಾರಿಯೊಂದರ ಚಕ್ರ ಸಿಡಿದು 2 ಆಟೋ ರಿಕ್ಷಾಗಳು ಮತ್ತು ಟೆಂಪೋ ಟ್ರಾವೆಲರ್ಗೆ ಢಿಕ್ಕಿಯಾಗಿ ಅವಘಡ ಸಂಭವಸಿದೆ . ಅಪಘಾತದ ತೀವ್ರತೆಗೆ ಆಟೋಗಳಲ್ಲಿದ್ದ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂವರು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಟಿಟಿ ವಾಹನದಲ್ಲಿದ್ದ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ 7 ಪುರುಷರು ,4 ಮಹಿಳೆಯರು ಮತ್ತು 3 ಬಾಲಕಿಯರು ಎಂದು ತಿಳಿದು ಬಂದಿದೆ.
ಬಳ್ಳಾರಿ ಕಡೆಗೆ ತೆರಳುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ಶಹಾಪುರದತ್ತ ತೆರಳುತ್ತಿದ್ದ ಟಿಟಿಗೆ ಢಿಕ್ಕಿಯಾಗಿದೆ. ಬಳಿಕ ರಿಕ್ಷಾಗಳಿಗೆ ಢಿಕ್ಕಿಯಾಗಿ ಅವಘಡ ಸಂಭವಸಿದೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು