ಐಐಎಸ್ಸಿ ದಾಳಿ: ಶಂಕಿತ ಆರೋಪಿ ಶೀಘ್ರ ನಗರಕ್ಕೆ
Team Udayavani, Mar 19, 2017, 3:50 AM IST
ಬೆಂಗಳೂರು: ನಗರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಆವರಣದಲ್ಲಿ 2005ರಲ್ಲಿ ನಡೆದಿದ್ದ ಉಗ್ರ ದಾಳಿಯ ಶಂಕಿತ ಆರೋಪಿ ಯನ್ನು ಶೀಘ್ರ ನಗರಕ್ಕೆ ಕರೆತರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ಉಗ್ರ ನಿಗ್ರಹ ದಳ ಹಾಗೂ ತ್ರಿಪುರಾ ಪೊಲೀಸರು ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಜೋಗೇಂದ್ರ ನಗರದ ಶಂಕಿತ ಆರೋಪಿ ಹಬೀಬ್ ಮಿಯಾ (37) ಎಂಬಾತನನ್ನು ಅಗರ್ತಲಾ ಬಳಿ ಬಂಧಿಸಲಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್, ಐಐಎಸ್ಸಿ ದಾಳಿಯ ಶಂಕಿತ ಆರೋಪಿ
ಯನ್ನು ತ್ರಿಪುರಾದ ಜೋಗೇಂದ್ರ ನಗರದಲ್ಲಿ ವಶಕ್ಕೆ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಕೋರ್ಟ್ ಅನುಮತಿ ನೀಡಿದ ಕೂಡಲೇ ಆರೋಪಿಯನ್ನು ನಗರಕ್ಕೆ ಕರೆತರಲಾಗುವುದು ಎಂದರು.
ಹವಾಮಾನ ಪರಿಸ್ಥಿತಿ ಆಧರಿಸಿ ಶನಿವಾರ ಅಥವಾ ರವಿವಾರ ಆರೋಪಿಯನ್ನು ವಿಮಾನದ ಮೂಲಕ ನಗರಕ್ಕೆ ಕರೆತರಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 2005ರ ಡಿ. 28ರಂದು ಬೆಂಗಳೂರಿನ ಐಐಎಸ್ಸಿ ಆವರಣಕ್ಕೆ ನುಗ್ಗಿದ ಉಗ್ರರು, ಗುಂಡಿನ ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು