ಮೆಲ್ಬೋರ್ನ್: ಭಾರತೀಯ ಪಾದ್ರಿಗೆ ಇರಿತ; ಸೇವೆಗೆ ಅನರ್ಹ ಎಂದ ಹಲ್ಲೆಕೋರ


Team Udayavani, Mar 20, 2017, 11:09 AM IST

Tomy Mathew-700.jpg

ಮೆಲ್ಬೋರ್ನ್ : ಇಲ್ಲಿನ ಚರ್ಚ್‌ ಒಂದರಲ್ಲಿ  ಭಾರತೀಯ ಮೂಲದ ಕ್ಯಾಥೋಲಿಕ್‌ ಪಾದ್ರಿಯೊಬ್ಬರನ್ನು ಜನಾಂಗೀಯ ದ್ವೇಷದಲ್ಲಿ  ಚರ್ಚ್‌ನಲ್ಲೇ ಇರಿದು ಗಾಯಗೊಳಿಸಿದ ಘಟನೆ ವರದಿಯಾಗಿದೆ.

ಜನಾಂಗೀಯ ಹಲ್ಲೆಗೆ ಗುರಿಯಾದವರೆಂದರೆ 48ರ ಹರೆಯದ ಟಾಮಿ ಕಳತ್ತೂರ್‌ ಮ್ಯಾಥ್ಯೂ. ಫಾಕ್‌ನರ್‌ನಲ್ಲಿ ನಿನ್ನೆ ಸೈಂಟ್‌ ಮ್ಯಾಥ್ಯೂ ಪ್ಯಾರಿಷ್‌ನಲ್ಲಿ ಇಟಾಲಿಯನ್‌ ಭಾಷೆಯಲ್ಲಿ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ 72ರ ಹರೆಯದ ಫಾಕ್‌ನರ್‌ ನಿವಾಸಿಯೊಬ್ಬ ಟಾಮಿ ಮ್ಯಾಥ್ಯೂಸ್‌ ಅವರಿಗೆ “ನೀನು ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅನರ್ಹ; ಭಾರತೀಯನಾಗಿರುವ ನೀನು ಒಂದೋ ಹಿಂದೂ ಅಥವಾ ಮುಸ್ಲಿಮನಾಗಿರಬೇಕು’ ಎಂದು ಕೋಪೋದ್ರಿಕ್ತನಾಗಿ ಚೂರಿಯಿಂದ ಟಾಮಿ ಅವರ ಕುತ್ತಿಗೆಗೆ ಇರಿದು ಗಾಯಗೊಳಿಸಿದ. 

ಘಟನೆಯ ಬಳಿಕ ಪೊಲೀಸರು ಹಲ್ಲೆಕೋರ ಫಾಕ್‌ನರ್‌ ವ್ಯಕ್ತಿಯನ್ನು ಬಂಧಿಸಿ ಆತನ ವಿರುದ್ಧ ಉದ್ದೇಶಪೂರ್ವಕ ಮತ್ತು ನಿರ್ಲಕ್ಷ್ಯದಿಂದ ಇರಿದು ಗಾಯಗೊಳಿಸಿದ ಕೇಸು ಹಾಕಿದರು. ಜೂನ್‌ 13ರಂದು ಬ್ರಾಡ್‌ ಮೆಡೋಸ್‌ ಮ್ಯಾಜಿಸ್ಟ್ರೇಟರ ಮುಂದೆ ಹಾಜರಾಗಬೇಕೆಂಬ ಆದೇಶದೊಂದಿಗೆ ಆರೋಪಿ ಫಾಕ್‌ನರ್‌ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಕ್ಯಾಥೋಲಿಕ್‌ ಆರ್ಕ್‌ಡಯೋಸಿಸ್‌ನ ಮೆಲ್ಬೋರ್ನ್ ವಕ್ತಾರ ಶೇನ್‌ ಹೀಲಿ ಅವರು “ಈ ಘಟನೆಯು ಅತ್ಯಂತ ದುರದೃಷ್ಟಕರ ಮತ್ತು ಆಘಾತಕಾರಿ’ ಎಂದು ಪ್ರತಿಕ್ರಿಯಿಸಿದ್ದಾರೆ. 

ಇರಿತಕ್ಕೆ ಗುರಿಯಾಗಿ ಕುತ್ತಿಗೆಗೆ ಗಂಭೀರ ಗಾಯಗೊಂಡು “ದಿ ನಾರ್ದರ್ನ್ ಆಸ್ಪತ್ರೆಗೆ ಸೇರಿರುವ ಫಾದರ್‌ ಟಾಮಿ ಮ್ಯಾಥ್ಯೂಸ್‌  ಅವರ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. 

ವಿಕಾರ್‌ ಜನರಲ್‌ ಮಾನ್ಸಿಂಗರ್‌ ಗ್ರೆಗ್‌ ಬೆನೆಟ್‌ ಅವರು ಘಟನೆಯನ್ನು ಖಂಡಿಸಿದ್ದಾರೆ. “ಟಾಮಿ ಮ್ಯಾಥ್ಯೂಸ್‌ ಅವರು ಬೇಗನೆ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲು ಬಯಸಿದ್ದಾರೆ’ ಎಂದು ತಿಳಿಸಿದ್ದಾರೆ. 

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.