ರಾಮಮಂದಿರ ವಿವಾದ ಕೋರ್ಟ್ ಹೊರಗೆ ಇತ್ಯರ್ಥಪಡಿಸಿಕೊಳ್ಳಿ: ಸುಪ್ರೀಂ ಸಲಹೆ
Team Udayavani, Mar 21, 2017, 12:55 PM IST
ನವದೆಹಲಿ:ಕಳೆದ 6 ವರ್ಷಗಳಿಂದ ಬಾಕಿ ಉಳಿದಿದ್ದ ಅಯೋಧ್ಯೆಯ ರಾಮ ಮಂದಿರ ಬಾಬ್ರಿ ಮಸೀದಿ ವಿವಾದದ ಕುರಿತಂತೆ, ನ್ಯಾಯಾಂಗದ ಹೊರಗೆ ಪರಸ್ಪರ ಮಾತುಕತೆ ಮೂಲಕ ಸೌಹಾರ್ದತೆಯಿಂದ ಇತ್ಯರ್ಥಪಡಿಸಿಕೊಳ್ಳುವುದು ಉತ್ತಮವಾದ ಬೆಳವಣಿಗೆ ಎಂದು ಮಂಗಳವಾರ ಸುಪ್ರೀಂಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.
ರಾಮಜನ್ಮಭೂಮಿ, ಬಾಬ್ರಿ ಮಸೀದಿ ವಿವಾದ ಧಾರ್ಮಿಕ ಹಾಗೂ ಭಾವನಾತ್ಮಕ ವಿಚಾರಕ್ಕೆ ಸಂಬಂಧಿಸಿದ್ದು, ಹಾಗಾಗಿ ಹಿಂದೂಗಳ ಮತ್ತು ಮುಸ್ಲಿಮರ ಸುಮಾರು ಶತಮಾನದಷ್ಟು ಹಳೆಯ ವಿವಾದದ ಇತ್ಯರ್ಥವನ್ನು ಸಂಧಾನದ ಮೂಲಕ ನಡೆಸಲು ತಾವು ಪ್ರಿನ್ಸಿಪಾಲ್ ರಂತೆ ಮಧ್ಯವರ್ತಿಯಾಗಿ ಕುಳಿತುಕೊಳ್ಳಲು ಸಿದ್ಧ ಎಂದು ಸುಪ್ರೀಂ ಸಿಜೆಐ ಜೆಎಸ್ ಖೇಹರ್ ಈ ಸಂದರ್ಭದಲ್ಲಿ ಹೇಳಿದರು.
ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶೀಘ್ರವೇ ನಡೆಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಹಿಂದೂ, ಮುಸ್ಲಿಂ ಮುಖ್ಯಸ್ಥರು ಒಟ್ಟಾಗಿ ಕುಳಿತು ಮಾತುಕತೆ ನಡೆಸಿ ಒಂದು ನಿರ್ಧಾರಕ್ಕೆ ಬರುವಂತೆ ಹೇಳಿದರು.
ಇದೊಂದು ಸೂಕ್ಷ್ಮ ಮತ್ತು ಭಾವನಾತ್ಮಕ ವಿಚಾರವಾಗಿದ್ದರಿಂದ ಈ ವಿವಾದವನ್ನು ಪರಸ್ಪರ ಮಾತುಕತೆ ಮೂಲಕ ಕೋರ್ಟ್ ಹೊರಗೆ ಇತ್ಯರ್ಥಪಡಿಸಿಕೊಳ್ಳುವುದು ಉತ್ತಮ, ಅದರ ಫಲಿತಾಂಶ ಏನು ಎಂಬುದನ್ನು ಮಾರ್ಚ್ 31ರ ವಿಚಾರಣೆ ವೇಳೆ ತಿಳಿಸುವಂತೆ ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ