“ಕಾರ್ಮಿಕ ಸವಲತ್ತಿಗೆ ನೋಂದಣಿ ಕಡ್ಡಾಯ’


Team Udayavani, Mar 21, 2017, 4:04 PM IST

kaddaya.jpg

ಪುತ್ತೂರು: ಅಸಂಘಟಿತ ವಲಯದ ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಸವಲತ್ತು ಪಡೆದುಕೊಳ್ಳಲು ನೋಂದಣಿ ಕಡ್ಡಾಯ ಎಂದು ಪುತ್ತೂರು ಹಿರಿಯ ಕಾರ್ಮಿಕ ನಿರೀಕ್ಷಕ ರಾಮಚಂದ್ರ ಹೇಳಿದರು.

ಕೋ-ಆಪರೇಟಿವ್‌ ಟೌನ್‌ ಬ್ಯಾಂಕ್‌ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಏಳನೇ ವರ್ಷದ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಈಗ ಎಲ್ಲ ನೋಂದಣಿ ಕಾರ್ಯ ಡಿಜಿಟಲೀಕ ರಣಗೊಂಡಿರುವ ಕಾರಣ ಆನ್‌ಲೈನ್‌ ನೋಂದಣಿ ಅನಿವಾರ್ಯ. ಈ ಹಿಂದೆ ಎಲ್ಲ ಅರ್ಜಿಗಳನ್ನು ಕೈಬರೆಹದ ಮೂಲಕ ಪಡೆದುಕೊಂಡು ಗುರುತಿನ ಚೀಟಿ ನೀಡಲಾಗುತ್ತಿತ್ತು. ಈಗ ಎಲ್ಲ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ದಾಖಲು ಮಾಡಿಕೊಂಡು ಡಿಜಿಟಲ್‌ ಗುರುತಿನ ಚೀಟಿ ನೀಡಲಾಗುತ್ತಿದೆ ಎಂದರು. ಹಿಂದೆ ನೋಂದಣಿ ಶುಲ್ಕ 25 ರೂ.ಗಳಿಗೆ ಹೆಚ್ಚಿಸಲಾಗಿದೆ. ಮೂರು ವರ್ಷಗಳಿಗೊಮ್ಮೆ 150 ರೂ. ಶುಲ್ಕ ಪಾವತಿಸಬೇಕು. ಕಾಲ ಕಾಲಕ್ಕೆ ಗುರುತಿನ ಚೀಟಿಯನ್ನು ನವೀಕರಣ ಮಾಡಿಕೊಳ್ಳುತ್ತಿರ ಬೇಕು ಎಂದವರು ಹೇಳಿದರು.

ಆಧಾರ್‌ ಕಡ್ಡಾಯ 
ಪುತ್ತೂರು ಮತ್ತು ಸುಳ್ಯದ ಶೈಕ್ಷಣಿಕ ಸವಲತ್ತಿಗೆ ಸಂಬಂಧಿಸಿದ ಯಾವ ಅರ್ಜಿಗಳೂ ಬಾಕಿ ಉಳಿ ದಿಲ್ಲ. ಎಲ್ಲವನ್ನೂ ಅಂತಿಮಗೊಳಿಸಿ ಮೇಲಾ ಧಿಕಾರಿಗಳಿಗೆ ಕಳುಹಿಸಿ ಕೊಡಲಾಗಿದೆ. 

ಕಾರ್ಮಿಕರಿಗೆ ಉತ್ತಮ ಬೇಡಿಕೆ
ನಿವೃತ್ತ ಪ್ರೊಫೆಸರ್‌ ಬಿ.ಜೆ. ಸುವರ್ಣ ಮಾತನಾಡಿ, ಕುಶಲಕರ್ಮಿಗಳು ಅಸಂಘಟಿತ ವಲಯದಲ್ಲಿ ಇದ್ದಿರಬಹುದು. ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸುವಲ್ಲಿ ಈ ಕಾರ್ಮಿಕರಿಗೆ ಇರುವಷ್ಟು ಮಾನಸಿಕ ಭದ್ರತೆ ದೊಡ್ಡ ದೊಡ್ಡ ಸಂಬಳ ಪಡೆಯುವ, ದೊಡ್ಡ ಕಂಪೆನಿಗಳಲ್ಲಿ ಕೆಲಸ ಮಾಡುವ ನೌಕರರಲ್ಲಿ ಇಲ್ಲ. ನೌಕರರು ನಿತ್ಯ ಉದ್ಯೋಗ ಭದ್ರತೆಯ ಚಿಂತೆ ಮತ್ತು ಕೆಲಸದ ಒತ್ತಡದಲ್ಲಿ ಬಳಲುತ್ತಿರುತ್ತಾರೆ. ಆದರೆ ಕಟ್ಟಡ ಕಾರ್ಮಿಕರಂಥ ಅಸಂಘಟಿತ ವಲಯದ ಕಾರ್ಮಿಕರು ಒಂದಲ್ಲ ಒಂದು ಕಡೆ ಕೆಲಸ ಪಡೆಯುತ್ತಾರೆ. ಈ ಕೆಲಸಗಳಿಗೆ ಈಗ ಕಾರ್ಮಿಕರ ಸಮಸ್ಯೆ ಇರುವ ಕಾರಣ ಇರುವ ಕಾರ್ಮಿಕರಿಗೆ ಉತ್ತಮ ಬೇಡಿಕೆಯೂ ಉತ್ತಮ ಸಂಭಾವನೆಯೂ ಇದೆ. ನಿಮ್ಮನ್ನು ಸಮಾಜ ವೇದಿಕೆಗಳಲ್ಲಿ ಗುರುತಿಸದೇ ಇರಬಹುದು. ಆದರೆ ಬದುಕಿನ ನಿತ್ಯದ ಆಗುಹೋಗುಗಳಲ್ಲಿ ನಿಮ್ಮ ಮಹತ್ವ ಅತ್ಯಂತ ದೊಡ್ಡದು. ಕಾರ್ಮಿಕರೆಲ್ಲ ಒಟ್ಟಾಗಿ ಸಂಘಟನೆಯಿಂದ ಕೆಲಸ ಮಾಡಿದರೆ ಏನನ್ನೂ ಸಾಧಿಸಬಹುದು. ಹಾಗೆಂದು ಸಂಘಟನೆಯೆಂದರೆ ಜವಾಬ್ದಾರಿ ಕೇವಲ ಸೌಲಭ್ಯ ಪಡೆಯಲಿಕ್ಕೆ ಮಾತ್ರವಲ್ಲ, ಭವಿಷ್ಯದ ಉತ್ತಮ ಹಾದಿಗೆ ಸಂಘಟನೆ ಅಗತ್ಯ ಎಂದು ಅವರು ನುಡಿದರು.

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.