ಎ.1ರಿಂದ ಮಳೆ ನೀರು ಕೊಯ್ಲು ಕಡ್ಡಾಯ 


Team Udayavani, Mar 21, 2017, 5:12 PM IST

male-koylu.jpg

ಮಹಾನಗರ: ಎಪ್ರಿಲ್‌ 1ರಿಂದಲೇ ಜಿಲ್ಲಾದ್ಯಂತ ಮಳೆ ಕೊಯ್ಲು ಯೋಜನೆಯನ್ನು ಕಡ್ಡಾಯ ಗೊಳಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌, ಮುಂಬರುವ ಮಳೆಗಾಲವನ್ನು ಸಮೃದ್ಧವಾಗಿ ಹಿಡಿದಿಟ್ಟು ಕೊಳ್ಳಲು ಮುಂದಾಗಿದೆ.

ಅಂತರ್ಜಲ ಮಟ್ಟ ಹೆಚ್ಚಿಸುವಲ್ಲಿ ಹಾಗೂ ಮುಂಬ ರುವ ದಿನದಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆ ಯಲ್ಲಿ ಇಂಗುಗುಂಡಿಗಳ ರಚನೆ ಹಾಗೂ ತೆರೆದ ಬಾವಿಗೆ ಜಲ ಮರುಪೂರಣ ಯೋಜನೆಯನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಸಿದ್ಧತೆ ನಡೆದಿದೆ.

ಎರಡು-ಮೂರು ತಿಂಗಳೊಳಗೆ ಸುರಿಯುವ ಮಳೆಯ ನೀರನ್ನು ಪೋಲಾಗದಂತೆ ಸಂಗ್ರಹಿಸಿಡಲು ಮಳೆನೀರು ಕೊಯ್ಲು ಜಾರಿ ತರಲಾಗುತ್ತಿದೆ. ಇದ ರೊಂದಿಗೆ ಅಂತರ್ಜಲ ಹೆಚ್ಚಳ ಮಾಡುವ ಈ ಯೋಜನೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಜಾರಿಗೆ ಬರಲಿದೆ. 

ಮೊದಲ ಹಂತದಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾ.ಪಂ./ಪೊಲೀಸ್‌ ಠಾಣೆಗಳಲ್ಲಿ ಕಡ್ಡಾಯವಾಗಿ ಮಳೆನೀರು ಕೊಯ್ಲು ಯೋಜನೆ ಅನುಷ್ಠಾನ‌ಗೊಳಿಸುವಂತೆ ಜಿ.ಪಂ. ಎಲ್ಲ ಗ್ರಾ.ಪಂಗಳಿಗೆ ಶೀಘ್ರವೇ ಸೂಚಿಸಲಿದೆ.

ಬೊಟ್ಟು ಮಾಡಿದರೆ ಆಗದು..
ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಸರಕಾರ /ಆಡಳಿತ ವ್ಯವಸ್ಥೆಗಳು ಯಾವುದೇ ನಿಯಮ/ಕಾನೂನು ಜಾರಿಗೊಳಿಸಿದರೂ ಸಾರ್ವಜನಿಕರ ಸಹಭಾಗಿತ್ವ ಅವಶ್ಯ. ಸರಕಾರವೇ ಎಲ್ಲಾ ಪರಿಹಾರವನ್ನು ಒದಗಿಸಬೇಕೆಂದು ಕುಳಿತುಕೊಳ್ಳುವಂತಿಲ್ಲ. ಪ್ರತೀ ವ್ಯಕ್ತಿ, ಖಾಸಗಿ ಸಂಸ್ಥೆಗಳು ನೀರಿನ ಸಮರ್ಪಕ ಸಂಗ್ರಹ ಮತ್ತು ಬಳಕೆಯತ್ತ ಗಮನಹರಿಸಬೇಕಿದೆ ಎನ್ನುತ್ತಾರೆ ಪರಿಣ ತರು. ಅದರಲ್ಲೂ ಕಟ್ಟಡ ನಿರ್ಮಾಣಗಾರರು, ವಸತಿ ಸಂಕೀರ್ಣ ನಿರ್ಮಿಸುವವರು ಮಳೆ ನೀರು ಸಂಗ್ರಹ ವ್ಯವಸ್ಥೆಯನ್ನು ತಮ್ಮ-ತಮ್ಮ ಕಟ್ಟಡಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

ಮನೆ ನಂಬರ್‌ ಸಿಗಬೇಕಾದರೆ ಮಳೆಕೊಯ್ಲು ಕಡ್ಡಾಯ
ಜಿ.ಪಂ. ವ್ಯಾಪ್ತಿಯಲ್ಲಿ 2,000 ಚದರ ಅಡಿಗಳಿಗಿಂತ ಹೆಚ್ಚಿನ ವಿಸ್ತೀರ್ಣದ ಮನೆ/ಕಟ್ಟಡ ನಿರ್ಮಿಸುವಾಗ ಮಳೆ ನೀರು ಕೊಯ್ಲು ಹಾಗೂ ಶೌಚಾಲಯ ಕಡ್ಡಾಯವಾಗಿ ಮಾಡಲೇಬೇಕು ಎಂಬ ನಿಯಮವಿದೆ. 

ಮನೆ ನಂಬರ್‌/ ಕಟ್ಟಡ ಸಂಖ್ಯೆ ನೀಡುವ ಸಂದರ್ಭದಲ್ಲಿ ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂಬ ನಡಾವಳಿಯನ್ನು ಕಳೆದ ವರ್ಷ ಜಿ.ಪಂ. ಕೈಗೊಂಡಿತ್ತು. ಪ್ರಸಕ್ತ ಇದು ಕೆಲವು ಗ್ರಾ.ಪಂ.ನಲ್ಲಿ ಮಾತ್ರ ಅನುಷ್ಠಾನವಾಗುತ್ತಿದ್ದು, ಬಹುತೇಕರು ಇದರ ಬಗ್ಗೆ ಕಾಳಜಿ ವಹಿಸಿದಂತಿಲ್ಲ.

ಕೊಯ್ಲು-ಮಾಡುವುದು ಹೇಗೆ?
ಮಳೆ ಬರುವ ಮೊದಲು, ಅಂದರೆ ಈಗಲೇ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದರೆ ಸುಲಭ. ಇದಕ್ಕಾಗಿ ಸರಕಾರ/ಪಾಲಿಕೆಯನ್ನು ಕಾಯಬೇಕಾಗಿಲ್ಲ. ಮನೆ-ಕಟ್ಟಡದಲ್ಲಿ ಮಳೆ ನೀರು ಕೊಯ್ಲು ಯೋಜನೆ ಅಳವಡಿಸಿಕೊಳ್ಳುವುದು ಭಾರೀ ಕಷ್ಟವಲ್ಲ. ಹೆಚ್ಚು ಖರ್ಚೂ ಇಲ್ಲ. ಮನೆ/ಕಟ್ಟಡದ ಛಾವಣಿ ಅಥವಾ ತಾರಸಿ, ಕಿಟಕಿ, ಬಾಗಿ ಲಿನ ಸಜ್ಜಾದ ಮೇಲೆ ಬೀಳುವ ಮಳೆ ನೀರು ಎಲ್ಲಿಯೂ ಸೋರಿ ಹೋಗದಂತೆ ಮೊದಲು ವ್ಯವಸ್ಥೆ ಮಾಡಬೇಕು. ಬಳಿಕ ಈ ಎಲ್ಲಾ ನೀರೂ ಕೊಳವೆ ಗಳ ಮೂಲಕ ಒಂದೆಡೆ ಸಂಗ್ರಹವಾಗುವಂತೆ ಮಾಡಬೇಕು. ನೀರು ಸಂಗ್ರಹ ಗೊಳ್ಳುವ ಜಾಗವನ್ನು ಸೂಕ್ತ ರೀತಿ ವ್ಯವಸ್ಥೆ ಮಾಡಿಕೊಳ್ಳಬೇಕು. ಮನೆಯ ಅಂಗಳದಲ್ಲಿ ಒಂದು ದೊಡ್ಡ ತೊಟ್ಟಿ ನಿರ್ಮಿಸಿ ಅದರಲ್ಲಿ ಮಳೆ ನೀರು ನೇರವಾಗಿ ಸಂಗ್ರಹವಾಗುವಂತೆ ಮಾಡಬಹುದು. (ನೀರು ಬಳಕೆಗೂ ಮೊದಲು ಶೋಧಿಸುವ ವ್ಯವಸ್ಥೆ ಮಾಡಬೇಕು).

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.