ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗ್ರೇಸ್‌ ಟೈಮ್‌ ರದ್ದು


Team Udayavani, Mar 23, 2017, 11:11 AM IST

sslc.jpg

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಬರುವಂತಿಲ್ಲ. ಬೆಳಗ್ಗೆ 9.30ಕ್ಕೆ ಪರೀಕ್ಷೆ ಪ್ರಾರಂಭಗೊಂಡ ನಂತರ ತಡವಾಗಿ ಬಂದರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿಲ್ಲ.!

ಇಂತದ್ದೊಂದು ನಿಯಮ ಜಾರಿಗೆ ತರಲು ಪ್ರೌಢ ಶಿಕ್ಷಣ ಮಂಡಳಿ ಮುಂದಾಗಿದೆ. ಪರೀಕ್ಷಾ ಅಕ್ರಮ ತಡೆಗಟ್ಟುವುದು ಹಾಗೂ ವಿದ್ಯಾರ್ಥಿಗಳು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಇರುವಂತೆ ಮಾಡುವುದು ಇದರ ಉದ್ದೇಶ ಎಂದು
ಮೂಲಗಳು ತಿಳಿಸಿವೆ. ಈ ಹಿಂದೆ ಪರೀಕ್ಷೆ ಪ್ರಾರಂಭವಾದ ಹದಿನೈದು ನಿಮಿಷದವರೆಗೂ “ಗ್ರೇಸ್‌ ಟೈಂ’ ಎಂದು ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುತ್ತಿತ್ತು.ಆದರೆ, ಈ ಬಾರಿ ಅದಕ್ಕೆ ಬ್ರೇಕ್‌ ಹಾಕಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳು ನಡೆಯಬಾರದು ಎನ್ನುವ ಕಾರಣಕ್ಕೆ ಇಲಾಖೆ ಈ ಬಾರಿ ಕಠಿಣ ಕ್ರಮ ಕೈಗೊಂಡಿದ್ದು, ನಿಗದಿತ ಅವಧಿಯೊಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ತಡವಾಗಿ ಬರುವ ವಿದ್ಯಾರ್ಥಿಗಳನ್ನು ವಾಪಸ್‌ ಕಳುಹಿಸುವಂತೆ ಪರೀಕ್ಷಾ ಸಿಬ್ಬಂದಿಗೆ ಸೂಚನೆ
ನೀಡಲಾಗಿದೆ ಎಂದು ಇಲಾಖಾ ಮೂಲಗಳು ತಿಳಿಸಿವೆ. ಇದೇ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಸಂಗ್ರಹಿಸಿಡಲು 30 ಜಿಲ್ಲಾ ಖಜಾನೆಗಳು ಹಾಗೂ 174 ತಾಲೂಕು ಉಪ ಖಜಾನೆಗಳಿವೆ. ಅಗತ್ಯ ಭದ್ರತಾ ಸಿಬ್ಬಂದಿ ವ್ಯವಸ್ಥೆ ಇದ್ದು, ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಸಾಗಿಸುವ
ವಾಹನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪೊಲೀಸ್‌ ಸಿಬ್ಬಂದಿ ಇರುತ್ತಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಜವಾಬ್ದಾರಿ ಹೊತ್ತ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ ಎಂದು ರಾಜ್ಯ
ಪ್ರೌಢಶಿಕ್ಷಣ ಮಂಡಳಿ ನಿರ್ದೇಶಕಿ ಯಶೋಧ ಬೋಪಣ್ಣ ತಿಳಿಸಿದ್ದಾರೆ.

ಮಾ.30ರಿಂದ ಏ.12ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ
ರಾಜ್ಯಾದ್ಯಂತ ಮಾ.30ರಿಂದ ಏ.12ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ಏ.13ರಂದು ಜಿಟಿಎಸ್‌ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖೀಕ ಪರೀಕ್ಷೆಗಳನ್ನು ಆಯಾ ಕೇಂದ್ರಗಳಲ್ಲಿ ನಡೆಸಲಾಗುವುದು. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳಿಗೆ 2.45 ಗಂಟೆ ಬರೆಯಲು ಮತ್ತು 15 ನಿಮಿಷ ಓದಲು ಅವಕಾಶವಿದೆ. ದ್ವಿತೀಯ ಮತ್ತು ತೃತೀಯ ಭಾಷೆಗೆ 2.15 ಗಂಟೆ ಬರೆಯಲು ಹಾಗೂ 15 ನಿಮಿಷ ಓದಲು ನಿಗದಿ ಮಾಡಲಾಗಿದೆ. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬೆಳಗ್ಗೆ 9.30ರಿಂದ 12.30ರವರೆಗೆ ನಡೆಯಲಿವೆ. ದ್ವಿತೀಯ ಮತ್ತು ತೃತೀಯ ಭಾಷೆ ಪರೀಕ್ಷೆ ಬೆಳಗ್ಗೆ 9.30ರಿಂದ 12 ರವರೆಗೆ ನಡೆಯಲಿದೆ. ಪ್ರಥಮ ಭಾಷೆಗೆ 100 ಗರಿಷ್ಠ ಅಂಕಗಳು, ಉಳಿದ ವಿಷಯಗಳಿಗೆ
ಗರಿಷ್ಠ 80 ಅಂಕಗಳಂತೆ ಪರೀಕ್ಷೆ ನಿಗದಿಯಾಗಿದೆ.

ಟಾಪ್ ನ್ಯೂಸ್

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.