ಜಂತರ್ ಮಂತರ್ ನಲ್ಲಿ ತಮಿಳು ರೈತರ ಪರ ಪ್ರಕಾಶ್ ರೈ ಧ್ವನಿ
Team Udayavani, Mar 25, 2017, 3:50 AM IST
ಹೊಸದಿಲ್ಲಿ: ಕಳೆದ 11 ದಿನಗಳಿಂದ ಇಲ್ಲಿನ ಜಂತರ್ ಮಂತರ್ನಲ್ಲಿ ಪ್ರತಿಭಟಿಸುತ್ತಿರುವ ತಮಿಳುನಾಡು ರೈತರಿಗೆ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿಗೆ ತೆರಳಿ ಪ್ರತಿಭಟನಾನಿರತ ಕೃಷಿಕರನ್ನು ಭೇಟಿಯಾದ ಪ್ರಕಾಶ್ ರಾಜ್, “”ದೇಶಕ್ಕೆ ಅನ್ನ ನೀಡಲು ಇಡೀ ಬದುಕನ್ನು ಕಷ್ಟದಲ್ಲೇ ಕಳೆಯುವ ಕೃಷಿಕರ ನೋವನ್ನು ಯಾರೂ ಕೇಳುತ್ತಿಲ್ಲ. ಅವರ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ. ಹೀಗಾದರೆ ಅವರು ಬದುಕುವುದಾದರೂ ಹೇಗೆ?,” ಎಂದು ಪ್ರಶ್ನಿಸಿದ್ದಾರೆ.
ತಮಿಳು ನಟ ವಿಶಾಲ್ ಹಾಗೂ ನಿರ್ದೇಶಕ ಪಾಂಡಿರಾಜ್ ಕೂಡ ರೈತರ ಹೋರಾಟವನ್ನು ಬೆಂಬಲಿಸಿದ್ದಾರೆ. ಬರದಿಂದ ತತ್ತರಿಸಿರುವ ರಾಜ್ಯದ ಕೃಷಿಕರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಮಿಳುನಾಡು ರೈತರು ದಿಲ್ಲಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಕೇಂದ್ರ ಸರಕಾರ ಈಗಾಗಲೇ 1500 ಕೋಟಿ ರೂ. ಬರಪರಿಹಾರ ಘೋಷಿಸಿದ್ದರೂ ಅದು ಸಾಲುವುದಿಲ್ಲ ಎಂಬುದು ರೈತರ ವಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು