ಇವರು ಯಾರು ಬಲ್ಲಿರೇನು?


Team Udayavani, Mar 25, 2017, 11:11 AM IST

mamatha-shenoy.jpg

ಮಮತಾ ಶೆಣೈ ನೆನಪಿದೆಯಾ? ಹಳಬರಿಗೂ ಅಷ್ಟೇ, ಬಹಳಷ್ಟು ಜನರಿಗೆ ಆ ಹೆಸರು ಮರೆತೇ ಹೋಗಿರಬಹುದು. ಏಕೆಂದರೆ, ಮಮತಾ ಶೆಣೈ ಅಭಿನಯದ ಕೊನೆಯ ಚಿತ್ರ ಬಿಡುಗಡೆಯಾಗಿಯೇ 35 ವರ್ಷಗಳಾಗಿವೆ. ಇನ್ನು ಆಕೆ ಚಿತ್ರರಂಗದಿಂದ ದೂರವಾಗಿಯೂ ಸಹ ಅಷ್ಟೇ ವರ್ಷಗಳಾಗಿವೆ. ಹಾಗಾಗಿ ಹೆಸರು ನೆನಪಿನ ಬುತ್ತಿಯಿಂದ ಮರೆಯಾಗಿದ್ದರೆ ಆಶ್ಚರ್ಯವಿಲ್ಲ. ಮಮತಾ ಶಣೈ ಅವರು ಒಂದು ಕಾಲದಲ್ಲಿ ಕನ್ನಡದಲ್ಲಿ ಜನಪ್ರಿಯ ನಟಿ. 56 ಚಿತ್ರಗಳಲ್ಲಿ ನಟಿಸಿದವರು.

1978ರಲ್ಲಿ ಬಿಡುಗಡೆಯಾದ “ಅಪರೂಪದ ಅತಿಥಿಗಳು’ ಚಿತ್ರದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಅವರು, ನಂತರದ ದಿನಗಳಲ್ಲಿ “ಭಾವ ತರಂಗ’, “ಕುಂಕುಮ ರಕ್ಷೆ’, “ಮಧುಚಂದ್ರ’, “ಅಪರಾಧಿ’, “ಮಂಜಿನ ತೆರೆ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಡಾ. ರಾಜಕುಮಾರ್‌ ಅವರೊಂದಿಗೆ “ಆಪರೇಷನ್‌ ಡೈಮೆಂಡ್‌ ರಾಕೆಟ್‌’, “ತಾಯಿಗೆ ತಕ್ಕ ಮಗ’ ಮತ್ತು “ಚಲಿಸುವ ಮೋಡಗಳು’ ಚಿತ್ರದಲ್ಲಿ ನಟಿಸಿದವರು.

“ತಾಯಿಗೆ ತಕ್ಕ ಮಗ’ ಚಿತ್ರದಲ್ಲಿ ಡಾ. ರಾಜ್‌ ಮತ್ತು ಮಮತಾ ಶೆಣೈ ಅಭಿನಯದ “ಎಂಥಾ ಸೊಗಸು ಮಗುವಿನ ಮನಸು …’ ಹಾಡು ಇಂದಿಗೂ ಜನಪ್ರಿಯ. ಅಂಥ ನಟಿ 35 ವರ್ಷಗಳ ನಂತರ ಮತ್ತೆ ಮಾಧ್ಯಮದವರೆದುರು ಶುಕ್ರವಾರ ಕಾಣಿಸಿಕೊಂಡರು. ಅದೂ “ಮದುವೆ ದಿಬ್ಬಣ’ ಎಂಬ ಚಿತ್ರದ ಮುಹೂರ್ತ ಸಮಾರಂಭದಲ್ಲಿ. ಈ ಚಿತ್ರದಲ್ಲಿ ಮಮತಾ ಅವರು ನಟಿಸುತ್ತಿಲ್ಲ. ಆದರೆ, ತಮ್ಮ ಸಹೋದರನ ಮಗಳಿಗೆ ಅವಕಾಶ ಕೇಳುವ ಕಾರಣದಿಂದಾಗಿ ಅವರು ಚಿತ್ರದ ಮುಹೂರ್ತಕ್ಕೆ ಬಂದಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನನ್ನ ಕೊನೆಯ ಸಿನಿಮಾ “ಚಲಿಸುವ ಮೋಡಗಳು’. ಆ ನಂತರ ಮದುವೆಯಾಯಿತು. ಮದುವೆಯಾದ ಮೇಲೆ ಯಾವುದೇ ಸಿನಿಮಾದಲ್ಲಿ ನಟಿಸಲಿಲ್ಲ. ಅಷ್ಟೇ ಅಲ್ಲ, ಚಿತ್ರರಂಗದವರ ಸಂಪರ್ಕವೇ ಇರಲಿಲ್ಲ. ಹಾಗಂತ ನಾನು ಎಲ್ಲೋ ಹೋಗಿರಲಿಲ್ಲ. ಇದೇ ಬೆಂಗಳೂರಿನಲ್ಲಿದ್ದೆ. ಆದರೆ, ಚಿತ್ರರಂಗದಿಂದ ದೂರ ಇದ್ದೆ ಅಷ್ಟೇ. ತಮ್ಮನ ಮಗಳಿಗೆ ನಟಿಸುವ ಇಚ್ಛೆ ಇದೆ. ನಿರ್ದೇಶಕ ಉಮೇಶ್‌ ಅವರಿಗೆ ಪರಿಚಯಿಸುವ ದೃಷ್ಟಿಯಿಂದ ಬಂದೆ’ ಎನ್ನುತ್ತಾರೆ ಅವರು.

ಹಾಗಾದರೆ, ಈ ಚಿತ್ರದಲ್ಲಿ ಅವರೂ ನಟಿಸುತ್ತಾರಾ? ಈ ಚಿತ್ರದ ಮೂಲಕ ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾರಾ ಎಂಬ ಪ್ರಶ್ನೆಗಳು ಬರಬಹುದು. ಆ ಬಗ್ಗೆ ಅವರಿಗೆ ಸದ್ಯಕ್ಕೆ ಯೋಚನೆಯಿಲ್ಲ. “ಕಂಬ್ಯಾಕ್‌ ಬಗ್ಗೆ ಯೋಚನೆ ಮಾಡಿಲ್ಲ. ಒಳ್ಳೆಯ ಅವಕಾಶ ಸಿಕ್ಕರೆ ನೋಡಬಹುದು. ನಾನು ಈ ಹಿಂದೆ ನಟಿಸಿದ ಚಿತ್ರಗಳಲ್ಲಿ, ನಾಲ್ಕು ಜನ ನೋಡೋ ಹಾಗೆ ಮಾಡಿದ್ದೆ. ಹಾಗಾಗಿ ಒಳ್ಳೆಯ ಅವಕಾಶಗಳು ಸಿಕ್ಕರೆ ನಟಿಸುವ ಆಸೆ ಇದೆ’ ಎನ್ನುತ್ತಾರೆ ಅವರು. 

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.