ಗಿಳಿಯಾರು: ಬೆಂಕಿ ಅವಘಡ; ಕಲ್ಲಂಗಡಿ ಕೃಷಿಗೆ ಹಾನಿ
Team Udayavani, Mar 25, 2017, 3:54 PM IST
ಕೋಟ: ಕೋಟ ಗ್ರಾ.ಪಂ. ವ್ಯಾಪ್ತಿಯ ಮೂಡುಗಿಳಿಯಾರಿನ ಕೃಷಿಭೂಮಿಯಲ್ಲಿ ಮಾ.23ರಂದು ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ತೀವ್ರತೆ ನೂರಾರು ಎಕ್ರೆ ಕೃಷಿಭೂಮಿಗೆ ವ್ಯಾಪಿಸಿತು ಹಾಗೂ ಹೇರಳವಾಗಿ ಬೆಳೆದಿದ್ದ ಕಲ್ಲಂಗಡಿ ಬೆಳೆಗೆ ಹಾನಿಯಾಯಿತು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳ ಜಂಟಿ ಕಾರ್ಯಾಚರಣೆಯಿಂದ ಸಂಭಾವ್ಯ ಭಾರೀ ಅನಾಹುತ ತಪ್ಪಿದೆ.
ಅಗ್ನಿಶಾಮಕದಳ ವಾಹನದ ಅವಸ್ಥೆ ಕುಂದಾಪುರ ಅಗ್ನಿಶಾಮಕ ಠಾಣೆಯಲ್ಲಿ ಕಾರ್ಯನಿರ್ವಹಿಸುವ ವಾಹನವು ಸುಮಾರು ಇಪ್ಪತ್ತು ವರ್ಷಗಳಿಗಿಂತ ಹಳೆಯದಾಗಿದ್ದು ತುರ್ತು ಸಂದರ್ಭಗಳಲ್ಲಿ ಕಾರ್ಯಾಚರಣೆ ನಡೆಸಲು ಇದರಿಂದ ಸಾಧ್ಯವಾಗುತ್ತಿಲ್ಲ. ಗುರುವಾರ ಗಿಳಿಯಾರಿನಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಸ್ಥಳಕ್ಕಾಗಮಿಸಿದ ವಾಹನ ತುರ್ತು ಕಾರ್ಯಾಚರಿಸುವಲ್ಲಿ ವಿಫಲವಾಯಿತು. ಈ ಕುರಿತು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿ ಜಿ.ಪಂ.ಸದಸ್ಯ ರಾಘವೇಂದ್ರ ಕಾಂಚನ್ ಅವರ ಗಮನಕ್ಕೆ ತಂದರು. ಅನಂತರ ಜಿ.ಪಂ. ಸದಸ್ಯರು ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳುವಂತೆ ವಿನಂತಿಸಿದ್ದಾಗಿ ಪತ್ರಿಕೆಗೆ ತಿಳಿಸಿದ್ದಾರೆ.
ಸ್ಥಳಕ್ಕೆ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್, ಕೋಟ ಸಿ.ಎ.ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ, ತಾ.ಪಂ.ಮಾಜಿ ಸದಸ್ಯ ಭರತ್ ಶೆಟ್ಟಿ, ಗ್ರಾ.ಪಂ.ಸದಸ್ಯೆ ಜ್ಯೋತಿ ಬಿ.ಶೆಟ್ಟಿ ಭೇಟಿ ನೀಡಿದ್ದಾರೆ ಹಾಗೂ ಅಗ್ನಿಶಾಮಕದಳದ ಸಿಬಂದಿಗಳಾದ ನವೀನ್, ಚೆನ್ನಯ ಪೂಜಾರಿ , ಸಂತೋಷ್ ಶೆಟ್ಟಿ, ವಿಷ್ಣು ಡಿ.ಗೌಡ, ದೀಪಕ್ ಬೆಂಕಿ ನಂದಿಸುವಲ್ಲಿ ಪರಿಶ್ರಮಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!