ಮನೆಬಾಗಿಲಿಗೆ ಆರೋಗ್ಯ ಸೇವೆ: ಸಂಚಾರಿ ಘಟಕಗಳಿಗೆ ಚಾಲನೆ


Team Udayavani, Mar 26, 2017, 11:12 AM IST

sanchari-arogya.jpg

ಬೆಂಗಳೂರು: ಜನರ ಮನೆಬಾಗಿಲಿಗೆ ಆರೋಗ್ಯ ಭಾಗ್ಯ ತಲುಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ರಾಜ್ಯದಲ್ಲಿ 78 ಸಂಚಾರಿ ಆರೋಗ್ಯ ಘಟಕಗಳಿಗೆ ಚಾಲನೆ ನೀಡಿದೆ. ವಿಧಾನಸೌಧದ ಮುಂಭಾಗದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಸಂಚಾರಿ ಆರೋಗ್ಯ ಘಟಕಗಳಿಗೆ ಚಾಲನೆ ನೀಡಿದರು. ಪ್ರತಿ ಸಂಚಾರಿ ಘಟಕದಲ್ಲಿ ಒಬ್ಬ ವೈದ್ಯ, ಸಹಾಯಕ, ಲ್ಯಾಬ್‌ ಸಿಬ್ಬಂದಿ ಇರುವುದರ ಜತೆಗೆ ಅಗತ್ಯ ಔಷಧವೂ ಲಭ್ಯವಿರುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತಲೂ ಉತ್ತಮ ಸೇವೆ ಸಿಗುತ್ತಿದ್ದು, ಆದರೂ ಜನ ಖಾಸಗಿ ಆಸ್ಪತ್ರೆಗಳ ವ್ಯಾಮೋಹ ಬಿಟ್ಟಿಲ್ಲ. ಖಾಸಗಿ ಆಸ್ಪತ್ರೆಗಳಿಗೆ ಎಡತಾಕುವ ಜನರ ಪ್ರವೃತ್ತಿಗೆ ಕಡಿವಾಣ ಹಾಕಬೇಕಾಗಿದೆ. ಮೆರಿಟ್‌ ಆಧಾರದ ಮೇಲೆ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರನ್ನು ನೇಮಕ ಮಾಡಲಾಗುತ್ತದೆ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿರುವ ಬಹುತೇಕ ವೈದ್ಯರು ಡೊನೇಷನ್‌ ಕೊಟ್ಟು ಬಂದವರಾಗಿರುತ್ತಾರೆ. ಈ ವಿಚಾರವನ್ನು ಜನರ ಗಮನಕ್ಕೆ ತಂದು ಅವರನ್ನು ಸರ್ಕಾರಿ
ಆಸ್ಪತ್ರೆಯತ್ತ ಕರೆತರುವ ಪ್ರಯತ್ನವಾಗಬೇಕಿದೆ ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಲಭ್ಯವಿದ್ದರೂ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣಕ್ಕಾಗಿ ಅರ್ಜಿ ಹಾಕುತ್ತಾರೆ. ಎಲ್ಲ ಸೇವೆಯೂ ಸರ್ಕಾರಿ ಆಸ್ಪತ್ರೆಯÇÉೇ ಸಿಗುವಾಗ ಖಾಸಗಿ
ಆಸ್ಪತ್ರೆಗೆ ದಾಖಲಾಗುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು. ಆರೋಗ್ಯ ಸಚಿವ ಕೆ.ಆರ್‌.ರಮೇಶ್‌ಕುಮಾರ್‌ ಮಾತನಾಡಿ, ಎಲ್ಲರಿಗೂ ಆರೋಗ್ಯ ಭಾಗ್ಯ ಸಿಗಲಿ ಎಂಬ ದೃಷ್ಟಿಯಿಂದ 500 ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡಿ ಸಂಚಾರಿ ಆರೋಗ್ಯ ಘಟಕ ಸ್ಥಾಪಿಸಲಾಗುತ್ತಿದೆ. ಪ್ರಸ್ತುತ 78 ಘಟಕಗಳನ್ನು ಆರಂಭಿಸಲಾಗಿದ್ದು, ಇನ್ನೂ 130 ಘಟಕಗಳನ್ನು ಶೀಘ್ರವೇ ಆರಂಭಿಸಲಾಗುವುದು. ಆ ಮೂಲಕ ಜನರ ಮನೆಬಾಗಿಲಿಗೆ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಇದರ ಅನುಕೂಲ ಪಡೆದುಕೊಳ್ಳಬೇಕು ಎಂದರು.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌, ಆಯುಕ್ತ ಸುಬೋದ್‌ ಯಾದವ್‌, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ.ರತನ್‌ ಕೇಲ್ಕರ್‌, ಯೋಜನಾ ನಿರ್ದೇಶಕಿ ಡಾ.ಪಿ.ಸರೋಜಾ, ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಪಿ.ಎಲ್‌.ನಟರಾಜ್‌ ಮತ್ತಿತರರು ಹಾಜರಿದ್ದರು.

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಯಾರೂ ಲಘುವಾಗಿ ಮಾತನಾಡುವುದು ಸರಿಯಲ್ಲ. ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಇಲ್ಲದಂತೆ ಶ್ರೇಷ್ಠತೆಯಿಂದಲೇ ಅವು ಕೆಲಸ ಮಾಡುತ್ತಿವೆ. ಅತ್ಯುತ್ತಮ ವೈದ್ಯರು, ತಜ್ಞ ವೈದ್ಯರೂ ಲಭ್ಯರಿದ್ದಾರೆ.
ಆಸ್ಪತ್ರೆಯ ಸಿಬ್ಬಂದಿ ಸಾರ್ವಜನಿಕರಿಗೆ ಗೌರವ ಸಿಗುವ ರೀತಿಯಲ್ಲಿ ಕೆಲಸ ಮಾಡಿದರೆ ಮುಂದೆ ಖಾಸಗಿಗಿಂತ ಸರ್ಕಾರಿ ಆಸ್ಪತ್ರೆಗಳೇ ಹೆಚ್ಚು ಜನಪ್ರಿಯವಾಗುವುದರಲ್ಲಿ ಸಂಶಯವಿಲ್ಲ.

– ಕೆ.ಆರ್‌.ರಮೇಶ್‌ಕುಮಾರ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.