ಹೈಬ್ರಿಡ್‌ ಕಾರು: ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಬಂಕ್‌ ಸಿಬಂದಿ


Team Udayavani, Mar 28, 2017, 3:50 AM IST

28-SPORTS-10.gif

ಮಂಗಳೂರು: ಶಾಸಕ ಬಿ.ಎ. ಮೊದಿನ್‌ ಬಾವಾ ಅವರ ಹೊಚ್ಚ ಹೊಸ ವೋಲ್ವೋ ಎಕ್ಸ್‌ಸಿ 90 ಟಿ8 ಎಕ್ಸಲೆನ್ಸ್‌ ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಘಟನೆ ನಗರದ ಕದ್ರಿಯ ಪೆಟ್ರೋಲ್‌ ಬಂಕ್‌ನಲ್ಲಿ ಸೋಮವಾರ ಸಂಜೆ ನಡೆದಿದೆ. 

ಇದರಿಂದ ಕಾರು ಚಲಾಯಿಸಲಾಗದೆ ಪೆಟ್ರೋಲ್‌ ಬಂಕ್‌ನಲ್ಲಿ ಇರಿಸಲಾಗಿದೆ. ಕಾರಿನ ಇಂಧನ ಟ್ಯಾಂಕ್‌ನಲ್ಲಿ ತುಂಬಿಸಿರುವ ಡೀಸೆಲ್‌ ಹೊರ ತೆಗೆಯಲು ಅದನ್ನು ಲಾರಿಯಲ್ಲಿ ಹಾಕಿ ಬೆಂಗಳೂರಿಗೆ ಕೊಂಡೊಯ್ಯಬೇಕಾದ ಪ್ರಮೇಯ ಒದಗಿ ಬಂದಿದೆ.

ಶಾಸಕ ಮೊದಿನ್‌ ಬಾವಾ ಅವರು ಶನಿವಾರ ಈ ದುಬಾರಿ ಕಾರನ್ನು (ಬೆಲೆ 1.65 ಕೋಟಿ ರೂ.) ದೇಶದ ಮೊದಲ ಗ್ರಾಹಕರಾಗಿ ಖರೀದಿಸಿದ್ದರು. ಶಾಸಕರು ಸೋಮವಾರ ಕಾರನ್ನು ಮಂಗಳೂರಿನಲ್ಲಿ ಬಿಟ್ಟು ಬೆಂಗಳೂರಿಗೆ ತೆರಳಿದ್ದರು. ಅವರ ಪುತ್ರ ಈ ಹೊಸ ಕಾರನ್ನು ನಗರದಲ್ಲಿ ಚಲಾಯಿಸಿ ಅದರ ಅನುಭವ ಪಡೆಯುತ್ತಿದ್ದರು. ಹಾಗೆ ಸಂಜೆ ಹೊತ್ತು ಪೆಟ್ರೋಲ್‌ ಖಾಲಿಯಾದ ಪ್ರಯುಕ್ತ ಕದ್ರಿಯ ಪೆಟ್ರೋಲ್‌ ಪಂಪ್‌ಗೆ ತೆರಳಿದ್ದರು.

ಬಂಕ್‌ನಲ್ಲಿ ಕಾರು ನಿಲ್ಲಿಸಿದಾಗ ಅಲ್ಲಿನ ಸಿಬಂದಿ ಬ್ಯುಸಿಯಾಗಿದ್ದರು. ಓರ್ವ ಸಿಬಂದಿ ಪಕ್ಕಕ್ಕೆ ಬಂದಾಗ ಶಾಸಕರ ಪುತ್ರನು ಈ ಕಾರಿಗೆ ಪೆಟ್ರೋಲ್‌ ಎಂದು ಹೇಳಿದ್ದಾರೆ. ಆದರೆ ಅಷ್ಟರಲ್ಲಿ ದೂರದಲ್ಲಿದ್ದ ಇನ್ನೋರ್ವ ಸಿಬಂದಿ ಓಡಿ ಬಂದು ಡೀಸೆಲ್‌ ಹಾಕಿದ್ದಾನೆ. ಆತ ಡೀಸೆಲ್‌ ಹಾಕುತ್ತಿದ್ದಾನೆ ಎಂಬ ಸಂಗತಿ ಶಾಸಕರ ಪುತ್ರನಿಗೆ ತಿಳಿಯುವಷ್ಟರಲ್ಲಿ 6 ಲೀಟರ್‌ಗಳಷ್ಟು ಡೀಸೆಲ್‌ ಇಂಧನ ಟ್ಯಾಂಕ್‌ಗೆ ಪೂರೈಕೆಯಾಗಿದೆ. 

ಈ ಅಚಾತುರ್ಯದ ಬಗ್ಗೆ ಶಾಸಕರ ಪುತ್ರ ಮತ್ತು ಬಂಕ್‌ ಸಿಬಂದಿ ಮಧ್ಯೆ ವಾಗ್ವಾದ ನಡೆದಿದ್ದು, ಆಗ ಜನ ಸೇರಿದ್ದಾರೆ. ಪೆಟ್ರೋಲ್‌ ಚಾಲಿತ ಕಾರಿಗೆ ಡೀಸೆಲ್‌ ತುಂಬಿಸಿ ಚಲಾಯಿಸಿದರೆ ಎಂಜಿನ್‌ಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಕಾರನ್ನು ಪೆಟ್ರೋಲ್‌ ಬಂಕ್‌ನಲ್ಲಿಯೇ ಇರಿಸಲಾಗಿದೆ. ಅದಕ್ಕೆ ಹಾಕಿದ ಡೀಸೆಲ್‌ ಖಾಲಿ ಮಾಡಿಸಲು ಮಂಗಳೂರಿನಲ್ಲಿ ತಾಂತ್ರಿಕ ವ್ಯವಸ್ಥೆ ಇಲ್ಲದಿರುವುದರಿಂದ ಬೆಂಗಳೂರಿಗೆ ಕೊಂಡೊಯ್ಯಬೇಕಾಗಿ ಬಂದಿದೆ.

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.