“ಮಕ್ಕಳಿಗೆ ಎಳವೆಯಲ್ಲೇ ಮೌಲ್ಯಗಳನ್ನು ಕಲಿಸಿ’


Team Udayavani, Mar 28, 2017, 11:24 AM IST

28-SUDINA-10.jpg

ನಗರ: ಇಂದು ಹಣದ ಲಾಲಸೆ ಮಾನವೀಯ ಸಂಬಂಧಗಳಿಗೆ ಅಡ್ಡಿಯಾಗುತ್ತಿದೆ. ಎಳವೆಯಿಂದಲೇ ಮಕ್ಕಳನ್ನು ಆರ್ಥಿಕ ಸಂಪಾದನೆಯ ಕುರಿತಾಗಿ ಚಿಂತನೆಗೆ ಹಚ್ಚುವ ಬದಲು ಮೌಲ್ಯಗಳ ಬಗೆಗೆ ಕಲಿಸಿಕೊಡಬೇಕಿದೆ ಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ರಾಕೇಶ್‌ ಕುಮಾರ್‌ ಕಮ್ಮಜೆ ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ನಗರದ ನಿವೇದಿತಾ ಶಿಶುಮಂದಿರದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಆಧುನಿಕ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಜೀವನ ನಡೆಸಬಹುದಾದಷ್ಟು ಆದಾಯವನ್ನು ಕಾಣಬಹುದಾಗಿದೆ. ಹೆತ್ತ ತಂದೆ-ತಾಯಿ ಹಾಗೂ ಜನ್ಮಭೂಮಿಯನ್ನು ದೂರ ಮಾಡಿ ನಗರಗಳೆಡೆಗೆ ವಲಸೆ ಹೋಗುವುದು ಅಕ್ಷಮ್ಯ ಎಂದು ಹೇಳಿದರು.

ಕೋಶಾಧಿಕಾರಿ ರಾಧೇಶ್ಯಾಂ ವಾರ್ಷಿಕ ವರದಿ ವಾಚಿಸಿದರು. ಶಿಶುಮಂದಿರದ ಆಡಳಿತ ಮಂಡಳಿಯ ಸಮಿತಿಯ ಸದಸ್ಯೆ ಲಕ್ಷ್ಮೀ ವಿ.ಜಿ. ಭಟ್‌ ವಿಜ್ಞಾಪನ ಪತ್ರ ಮಂಡಿಸಿದರು. ಹಿರಿಯ ವಿದ್ಯಾರ್ಥಿ ಚಿರಂತನ್‌ ಚೆಂಡೆ ನುಡಿಸಿದರು. ಶಿಶುಮಂದಿರದ ಅಧ್ಯಕ್ಷ ರಘುನಾಥ ಬಿ. ಅತಿಥಿಗಳನ್ನು ಸ್ವಾಗತಿ ಸಿದರು. ಕಾರ್ಯದರ್ಶಿ ಶ್ರೀಧರ ಕುಂಜಾರು ವಂದಿಸಿದರು. ಶಿಶುಮಂದಿರದ ಮಾತೃ ಮಂಡಳಿಯ ಸದಸ್ಯೆ ಸೌಮ್ಯಾ ಡಿ. ಕಾರ್ಯಕ್ರಮ ನಿರ್ವಹಿಸಿದರು.

ಸಭೆಯ ಬಳಿಕ ಶಿಶುಮಂದಿರದ ಪುಟಾಣಿಗಳು, ಬಾಲ ಗೋಕುಲದ ವಿದ್ಯಾರ್ಥಿಗಳು, ಮಾತೃಮಂಡಳಿಯ ಮಾತೆಯ ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.  ಪ್ರಾರ್ಥನೆ, ಪಂಚಾಂಗ, ಅಮೃತಬಿಂದು, ಅಮೃತವಚನ, ಗಾದೆಮಾತುಗಳು, ಕಬೀರದೋಹೆ, ಸರ್ವಜ್ಞನ ವಚನ ಹಾಗೂ ಭಗವದ್ಗೀತಾ ಪಠಣ ವನ್ನು ಶಿಶುಮಂದಿರದ ಪುಟಾಣಿಗಳು ನಡೆಸಿಕೊಟ್ಟರು.

ಸದ್ವಿಚಾರ ಕಲಿಸಿ
ಅಧ್ಯಕ್ಷತೆ ವಹಿಸಿದ ವಿವೇಕಾನಂದ ಅದ್ಯಯನ ಕೇಂದ್ರ ಯಶಸ್‌ನ ಆಡಳಿತ ಸಮಿತಿಯ ಸದಸ್ಯೆ ವಿದ್ಯಾ ಆರ್‌. ಗೌರಿ ಮಾತ ನಾಡಿ, ಎಳವೆಯಲ್ಲಿ ಮಕ್ಕಳಿಗೆ ಸದ್ವಿಚಾರಗಳನ್ನು ಕಲಿಸಬೇಕು. ಮಕ್ಕಳಲ್ಲಿರುವ ಕುತೂಹಲ ಭರಿತ ವಿಷಯಗಳಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಆಗ ಮಕ್ಕಳ ಸರ್ವ ತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ. ನಿವೇದಿತಾ ಶಿಶು ಮಂದಿರ ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆ,  ಭಾರತೀಯ ಶಿಕ್ಷಣವನ್ನು  ಒದಗಿಸಿಕೊಡುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.