ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಾಟ
Team Udayavani, Mar 28, 2017, 12:30 PM IST
ಬೆಂಗಳೂರು: ಆಯುಕ್ತರು ಮತ್ತು ಕಾರ್ಯದರ್ಶಿಗಳ ನಕಲಿ ಸಹಿ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಲಿ ನಿವೇಶನಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಬಿಡಿಎ ಕೇಸ್ ವರ್ಕರ್ಗಳನ್ನು ಶೇಷಾದ್ರಿಪುರಂ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
ರವಿ ಕುಮಾರ್ ಮತ್ತು ತಿಪ್ಪೇಸ್ವಾಮಿ ಬಂತರು. ಬಿಡಿಎನಲ್ಲಿ ಕೇಸ್ ವರ್ಕರ್ಗಳಾಗಿರುವ ಆರೋಪಿಗಳು, ಕೆಲ ವರ್ಷಗಳಿಂದ ಆಯುಕ್ತರು ಮತ್ತು ಕಾರ್ಯದರ್ಶಿಗಳ ನಕಲಿ ಸಹಿ ಬಳಸಿ ನಗರದ ಪ್ರಮುಖ ಬಡಾವಣೆಗಳ ಖಾಲಿ ನಿವೇಶನಗಳನ್ನು ಮಾರಾಟ ಮಾಡುತ್ತಿದ್ದರು.
ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಬಿಡಿಎ ಆಯುಕ್ತರು ಆತಂರಿಕ ತನಿಖೆ ನಡೆಸುವಂತೆ ಸೂಚಿಸಿದ್ದು, ಈ ವೇಳೆ ಆರೋಪಿಗಳ ಕೃತ್ಯ ಬಯಲಾಗಿದೆ. ಇದುವರೆಗೂ ಆರೋಪಿಗಳು ಸುಮಾರು 32ಕ್ಕೂ ಅಕ ಖಾಲಿ ನಿವೇಶನಗಳನ್ನು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.
ಆರೋಪಿಗಳ ವಿರುದ್ಧ ಕಾರ್ಯದರ್ಶಿ ಸತೀಶ್ ಬಾಬು ಎಂಬುವರು ದೂರು ನೀಡಿದ್ದು, ಈ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಂಗಳವಾರ ಬೆಳಗ್ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ