ವಿದೇಶಿ ವಿದ್ಯಾರ್ಥಿಗಳಿಗೆ ಥಳಿತ: ಐವರ ಬಂಧನ
Team Udayavani, Mar 28, 2017, 11:21 PM IST
ಗ್ರೇಟರ್ ನೋಯ್ಡಾ/ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ ನೈಜೀರಿಯಾದ ನಾಲ್ವರು ವಿದ್ಯಾರ್ಥಿಗಳನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಸೋಮವಾರ ಈ ಘಟನೆ ನಡೆದಿದ್ದು, ಅದರ ಬಗ್ಗೆ ವಿದೇ ಶಾಂಗ ಇಲಾಖೆ ಕಳವಳ ವ್ಯಕ್ತಪಡಿಸಿದೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜತೆ ಮಾತುಕತೆ ನಡೆಸಿದ್ದರು. ಅದಕ್ಕೆ ಪೂರಕ ವಾಗಿ ನವದೆಹಲಿಯಲ್ಲಿ ಆಫ್ರಿಕ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವೂ ವಿದೇಶಾಂಗ ಸಚಿವರನ್ನು ಭೇಟಿಯಾಗಿತ್ತು.
ಮಾದಕ ವಸ್ತು ಸೇವನೆಯಿಂದ ಅಸುನೀಗಿದ್ದ ವಿದ್ಯಾರ್ಥಿಯೊಬ್ಬನ ಸ್ಮರಣಾರ್ಥವಾಗಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಸುತ್ತಿದ್ದಾಗ ಗುಂಪೊಂದು ಸೋಮವಾರ ರಾತ್ರಿ ವಿದ್ಯಾರ್ಥಿಗಳನ್ನು ಥಳಿಸಿ ಗಾಯಗೊಳಿಸಿತ್ತು. ಈ ಪ್ರಕರಣದಿಂದ ಆಕ್ರೋಶಗೊಂಡ ನೈಜೀರಿಯಾ ಹೈಕಮಿಷನ್ ಕಚೇರಿ ದೇಶದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸುರಕ್ಷಿತ ವಾತಾವರಣ ಇಲ್ಲ ಎಂದು ಅಭಿಪ್ರಾಯಪಟ್ಟಿತ್ತು. ವಿದೇಶಾಂಗ ಖಾತೆ ಸಹಾಯಕ ಸಚಿವ ಎಂ.ಜೆ.ಅಕºರ್ ಕೂಡ ಹೈಕಮಿಷನರ್ ಜತೆ ಮಾತುಕತೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ