ಪ್ರತಿ ಮೂರು ವರ್ಷಕ್ಕೊಮ್ಮೆ ಮಾತು: ಜಡೆಯ ಸ್ವಾಮೀಜಿ


Team Udayavani, Mar 31, 2017, 1:10 PM IST

hub1.jpg

ಹುಬ್ಬಳ್ಳಿ: ವರ್ಷಕ್ಕೊಮ್ಮೆ ಯುಗಾದಿ ಹಬ್ಬದಂದು ಮಾತ್ರ ನಾವು ಮಾತನಾಡುತ್ತಿದ್ದೆವು. ಆದರೆ ಇನ್ನು ಮೇಲೆ ಮೂರು ವರ್ಷಕ್ಕೊಮ್ಮೆ ಮಾತನಾಡುವುದಾಗಿ ಎಂದು ಮೌನಯೋಗಿ ಜಡೆಯ ಶಾಂತಲಿಂಗೇಶ್ವರ ಮಹಾ ಸ್ವಾಮೀಜಿ ನುಡಿದರು. 

ಇಲ್ಲಿಯ ಲ್ಯಾಮಿಂಗ್ಟನ್‌ ರಸ್ತೆಯ ದಿ| ಪಾರ್ವತೆಮ್ಮ ಬುಳ್ಳಾ ಹತ್ತಿ ಕಾರ್ಖಾನೆ ಆವರಣದಲ್ಲಿ ನಡೆದ ಹೊಸ ಸಂವತ್ಸರ ಯುಗಾದಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು,ಪಾರ್ವತೆಮ್ಮ ಬುಳ್ಳಾ ಅವರು ತಾವು ಜೀವಂತ ಇರುವವರೆಗೂ ವರ್ಷಕ್ಕೊಮ್ಮೆ ಯುಗಾದಿ ಹಬ್ಬದ ದಿನದಿಂದಾದರೂ ಮಾತನಾಡಿ ಎಂದು ಮನವಿ ಮಾಡಿದ್ದರು.

ಹೀಗಾಗಿ ಪ್ರತಿ ವರ್ಷಕ್ಕೊಮ್ಮೆ ಮಾತನಾಡುತ್ತಿದ್ದೆವು. ಆದರೆ ಮಾತೋಶ್ರೀ ಅವರು ಕಳೆದ ನ. 6ರಂದು ನಮ್ಮನ್ನು ಬಿಟ್ಟು ಹೋಗಿದ್ದರಿಂದ ಇನ್ಮುಂದೆ ವರ್ಷಕ್ಕೊಮ್ಮೆ ಮಾತನಾಡುವುದಿಲ್ಲ. ಅಧಿಕ ಮಾಸ ಬಂದ ಆ ವರ್ಷದ ಯುಗಾದಿ ಹಬ್ಬದ ದಿನದಂದು ಅಂದರೆ ಮೂರು ವರ್ಷಕ್ಕೊಮ್ಮೆ ಮಾತ್ರ ಮಾತನಾಡುವುದಾಗಿ ಪ್ರಕಟಿಸಿದರು. 

ಹು-ಧಾ ನಡುವೆಯೂ ಸಮಾಧಾನ: ಕಲಬುರಗಿ, ಸೊಲ್ಲಾಪುರ, ವಿಜಯಪುರ, ಬಾಗಲಕೋಟೆ, ಬೆಂಗಳೂರಿನಲ್ಲಿ “ಸಮಾಧಾನ’ ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬಳ್ಳಿ- ಧಾರವಾಡ ನಡುವೆ ಸಮಾಧಾನವೊಂದನ್ನು ಸ್ಥಾಪಿಸಲು ಭಕ್ತರು ಮುಂದೆ ಬಂದಿದ್ದಾರೆ. ನಿಂಗಣ್ಣಗೌಡ ಎಂಬುವರು ಎರಡು ಎಕರೆ ಭೂಮಿ ನೀಡುತ್ತಿದ್ದಾರೆ.

ಸಮಾಧಾನದ ಎಲ್ಲ ಉಸ್ತುವಾರಿ ಭಕ್ತರೇ ನೋಡಿಕೊಳ್ಳುತ್ತಾರೆ. ನಾವು ಹಣಕಾಸು ಸೇರಿದಂತೆ ಯಾವ ವಿಚಾರದಲ್ಲೂ ತಲೆ ಹಾಕುವುದಿಲ್ಲ. ತಮ್ಮ ಹಿರಿಯ ಗುರುಗಳು ಮಠದ ಲೆಕ್ಕ ನೋಡಬ್ಯಾಡ- ನಿನ್ನ ಲೆಕ್ಕ ಬಿಡಬ್ಯಾಡ ಎಂದಿದ್ದರು. ಹಣ ಎಲ್ಲಿ ಕೂಡಿರುತ್ತದೆಯೋ ಅಲ್ಲಿ ಜಗಳ ಶುರುವಾಗುತ್ತೆ ಎಂದರು. ಮಕ್ಕಳಿಂದು ಏನೆಲ್ಲ ಸಂಪಾದಿಸುತ್ತಿದ್ದಾರೆ. 

ಆದರೆ ಹೆತ್ತ ತಂದೆ- ತಾಯಿಯನ್ನು ಗೌರವದಿಂದ ನೋಡಿಕೊಳ್ಳಲಾಗುತ್ತಿಲ್ಲ. ಜೀವನದುದ್ದಕ್ಕೂ ಮಕ್ಕಳ ಏಳ್ಗೆಗೆ ಶ್ರಮಿಸುವ ಗುರು-ಹಿರಿಯರಿಗೆ ಏನೂ ಕೊಡಬೇಕಿಲ್ಲ. ಅವರಿಗೆ ಒಂದಿಷ್ಟು ಪ್ರೀತಿ- ಗೌರವ, ಆಶ್ರಯ ನೀಡಿದರೆ ಅದೇ ದೊಡ್ಡ ಕೊಡುಗೆ ಎಂದರು. ನಾವು ಗುರು ಹಿರಿಯರನ್ನು ನೋಡಿದರೆ ಮುಂದೆ ನಮ್ಮ ಮಕ್ಕಳು ನಮ್ಮನ್ನು ನೋಡುತ್ತಾರೆ ಎನ್ನುವ ಮನೋಭಾವ ಎಲ್ಲರಲ್ಲಿ ಬರುವುದು ಅಗತ್ಯ.

ನಾಲ್ಕೈದು ಮಕ್ಕಳಿದ್ದರೂ ವಯೋವೃದ್ಧರು ಯಾರೂ ಇಲ್ಲದ ಹಾಗೆ ಬದುಕುವ ಸ್ಥಿತಿ ಹಾಗೂ ಮನಸ್ಸುಗಳು ನಿರ್ಮಾಣವಾಗುತ್ತಿವೆ. ಇದು ನಿವಾರಣೆಯಾಗಬೇಕು. ವಯೋವೃದ್ಧರನ್ನು ಸಲಹುವ ನಿಟ್ಟಿನಲ್ಲಿ ವೃದ್ಧಾಶ್ರಮವೊಂದನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ವೃದ್ಧಾಶ್ರಮ ಸ್ಥಾಪಿಸುವುದು ದೊಡ್ಡದಲ್ಲ.

ಸೇವೆಯಿಂದ ದುಡಿಯುವವರು ದೊರೆಯುವುದು ಮುಖ್ಯವಾಗಿದೆ. ಭಕ್ತರು ಹಣ-ದೇಣಿಗೆ ಕೊಡಬಹುದು. ಆದರೆ ಸೇವೆ ಮಾಡುವ ಭಕ್ತರು ಬೇಕಾಗಿದ್ದಾರೆ. ಸೇವೆ ಮಾಡುವರು ಮುಂದೆ ಬರಬೇಕೆಂದರು. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ವೃದ್ಧಾಶ್ರಮಕ್ಕಾಗಿ ಮೊದಲ ಹಂತವಾಗಿ ಎರಡು ಲಕ್ಷ ರೂ. ನೀಡುವುದಾಗಿ ಘೋಷಿಸಿದರಲ್ಲದೇ, ತಮಗೆ ಬಂದ ಆಸ್ತಿ ನೀಡುವುದಾಗಿ ಪ್ರಕಟಿಸಿದರು.

ಗೊಗ್ಗೆಹಳ್ಳಿ ಸಂಗಮೇಶ್ವರ ಶಿವಾಚಾರ್ಯರು ಆಶೀರ್ವಚನ  ನೀಡಿ, ಸೂರ್ಯ ಉದಯಿಸುವಾಗ ಓಂ ಎನ್ನುವ ಶಬ್ದ ಬರುತ್ತದೆ ಎಂಬುದನ್ನು ಸಾವಿರಾರು ವರ್ಷಗಳ ಹಿಂದೆ ಹೇಳಿದ್ದನ್ನು ನಾಸಾ ವಿಜ್ಞಾನಿಗಳು ದೃಢಪಡಿಸಿದ್ದಾರೆ ಎಂದರು. ಮೂಡಿಯ ಸದಾಶಿವ ಮಹಾಸ್ವಾಮೀಜಿ, ಜಡೆಯ ಅಮರೇಶ್ವರ ಶಿವಾಚಾರ್ಯರು, ಗೌಡೇಶ ಬಿರಾದಾರ ಸೇರಿದಂತೆ ಅಪಾರ ಭಕ್ತವಂದ ಹಾಜರಿದ್ದರು.  

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.