ಮೊದಲ ಸಭೆಯಲ್ಲೇ ಗದ್ದಲ; ಮಾತಿನ ಚಕಮಕಿ,ಸಭಾತ್ಯಾಗ


Team Udayavani, Mar 31, 2017, 3:52 PM IST

3003MLR102(a).jpg

ಲಾಲ್‌ಬಾಗ್‌: ಮೇಯರ್‌ ಕವಿತಾ ಸನಿಲ್‌ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಆರೋಗ್ಯ ಸ್ಥಾಯೀ ಸಮಿತಿ ನೂತನ ಅಧ್ಯಕ್ಷೆ ನಾಗವೇಣಿ ಅವರು ಧರಣಿ ನಡೆಸಿ, ಇತರ ಸದಸ್ಯರ ಜತೆಗೆ ಸಭಾತ್ಯಾಗ ಮಾಡಿದ ಘಟನೆ ಗುರುವಾರ ಮಹಾನಗರ ಪಾಲಿಕೆಯಲ್ಲಿ ನಡೆದಿದೆ.

ಆಡಳಿತ ಪಕ್ಷ ಮತ್ತು ವಿಪಕ್ಷ ಎಂಬ ಭೇದ ಮರೆತು ಕೆಲವು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೇಯರ್‌ ಕವಿತಾ ಸನಿಲ್‌ ತಮ್ಮ ಅಧಿಕಾರಾವಧಿಯ ಮೊದಲ ಸಭೆಯಲ್ಲೇ ಇರಿಸು- ಮುರಿಸು ಅನುಭವಿಸುವಂತಾಯಿತು.

ಘಟನೆಯ ವಿವರ
ಸಭೆ ಆರಂಭವಾಗುತ್ತಿದ್ದಂತೆ ಸಾರ್ವ ಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾ ಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷೆ ನಾಗವೇಣಿ ಅವರು, ಮೇಯರ್‌ ಪೀಠದೆದುರು ಧರಣಿ ಕುಳಿತರು. 

“ಪಾಲಿಕೆಯ ನಗರ ಬಡತನ ನಿರ್ಮೂ ಲನ ಕೋಶದ ವಿವಿಧ ಯೋಜನೆಗಳಡಿ ಫ‌ಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮವನ್ನು   ನನ್ನ ಗಮನಕ್ಕೆ ತಾರದೇ ಮಾ. 31ರಂದು ನಿಗದಿಪಡಿ ಸಲಾಗಿದೆ. ದಲಿತ ಸಮುದಾಯದ ಅಭ್ಯರ್ಥಿಯಾದ ನನ್ನನ್ನು ಕಡೆಗಣಿಸ ಲಾಗಿದೆ’ ಎಂದು ಅವರು ಆರೋಪಿಸಿ ದರು. ವಿಪಕ್ಷ ಸದಸ್ಯರೂ ಮೇಯರ್‌ ಅವರು ಸರ್ವಾಧಿಕಾರಿಯಂತೆ ವರ್ತಿಸು ತ್ತಿದ್ದಾರೆ ಎಂದು ಆಪಾದಿಸಿದರು. ಇದಕ್ಕೆ ಧ್ವನಿಗೂಡಿಸಿದ ಆಡಳಿತ ಪಕ್ಷದ ಕೆಲವು ಸದಸ್ಯರು ತಮ್ಮ ಅಸಮಾಧಾನ ಹೊರಹಾಕಿದರು.

ಮೇಯರ್‌ ಸ್ಪಷ್ಟನೆ
“ಪುರಭವನದಲ್ಲಿ ನಡೆಯುವ ಕಾರ್ಯಕ್ರಮ 2016- 17ನೇ ಸಾಲಿನ ಅವಧಿಯಲ್ಲಿ ಮಂಜೂರಾದ ಸವಲತ್ತು ಗಳಿಗೆ ಸಂಬಂಧಿಸಿದ್ದು. ಸ್ಥಾಯೀ ಸಮಿತಿ ಅಧ್ಯಕ್ಷರು ಈ ಬಗ್ಗೆ ಆಕ್ಷೇಪಿಸಿ ಪತ್ರ ಬರೆದಿದ್ದು, ಕಾರ್ಯಕ್ರಮ ಮುಂದೂ ಡಲು ಕೋರಿದ್ದಾರೆ. ಆದರೆ, ಹಿಂದೆಯೇ ನಿಗದಿಯಾದ ಕಾರ್ಯಕ್ರಮ  ಉಸ್ತುವಾರಿ ಸಚಿವರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಈಗ ಸಚಿವರು ನಾಳೆ ಕಾರ್ಯಕ್ರಮ ನಡೆಸಲು ದಿನಾಂಕ ಗೊತ್ತುಪಡಿಸಿದ್ದಾರೆ’ ಎಂದು ಮೇಯರ್‌, ಸ್ಪಷ್ಟಧಿಪಧಿಡಿಸಿ, ತಮ್ಮ ಸ್ಥಾನಗಳಿಗೆ ತೆರಧಿಳುವಂತೆ ಸ್ಥಾಯೀ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಲ್ಲಿ ವಿನಂತಿಸಿದರು. 

ಆಡಳಿತ ಪಕ್ಷದೊಳಗೇ ವಾಗ್ವಾದ
ಈ ಸಂದರ್ಭ ಮಾತಿನ ಚಕಮಕಿ ನಡೆದು, ಗದ್ದಲದ ವಾತಾವರಣ ಸೃಷ್ಟಿ ಯಾಯಿತು. ಆಡಳಿತ ಪಕ್ಷದ ಕೆಲ ಸದಸ್ಯರೂ ಎದ್ದುನಿಂತದ್ದು ಆ ಪಕ್ಷದ ಎರಡು ಗುಂಪುಗಳಲ್ಲೇ ವಾಗ್ವಾದಕ್ಕೆ ಕಾರಣವಾಯಿತು. ಮೇಯರ್‌ ಅವರು ಸಭೆ ಮುಂದೂಡಿದರು. ಈ ಮಧ್ಯೆ ಮೇಯರ್‌ ಕೊಠಡಿಯಲ್ಲಿ ಶಾಸಕ ಜೆ.ಆರ್‌. ಲೋಬೋ ಅವರು ಹಿರಿಯ ಸದಸ್ಯರ ಜತೆ ಸಂಧಾನದಲ್ಲಿ ತೊಡಗಿದ್ದರೆ, ಪರಿಷತ್ತಿನ ಸಭಾಂಗಣದಲ್ಲಿ ಆಡಳಿತ ಪಕ್ಷದ ಸದಸ್ಯರ ಎರಡು ಗುಂಪುಗಳು ವಾಗ್ವಾದದಲ್ಲಿ ತೊಡಗಿದ್ದವು. ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್‌ ಡಿ’ಸೋಜಾ, ಶಾಸಕ ಮೊದಿನ್‌ ಬಾವಾ  ಆಗಮಿಸಿ ಮಾತುಕತೆ ನಡೆಸಿದರು.
 
ಸದಸ್ಯರ ಸಭಾತ್ಯಾಗ
ಸುಮಾರು ಅರ್ಧ ತಾಸಿನ ಬಳಿಕ, ಸಭಾಂಗಣಕ್ಕೆ ಆಗಮಿಸಿದ ಮೇಯರ್‌, “ಸದಸ್ಯರೆಲ್ಲರೂ ತಮ್ಮ ಸ್ಥಾನಗಳಿಗೆ ತೆರಳಬೇಕು. ಈ ದಿನಾಂಕವನ್ನು ಉಸ್ತುವಾರಿ ಸಚಿವರು ನಿಗದಿಪಡಿಸಿದ್ದು, ಅವರ ಗಮನಕ್ಕೆ  ಈ ವಿಷಯವನ್ನು ತರಲಾಗುವುದು’ ಎಂದು ಹೇಳಿದರು. ಇದರಿಂದ ತೃಪ್ತರಾಗದ ನಾಗವೇಣಿ, ಉಪ ಮೇಯರ್‌ ರಜನೀಶ್‌, ಸ್ಥಾಯೀ ಸಮಿತಿ ಅಧ್ಯಕ್ಷರಾದ ಪ್ರತಿಭಾ ಕುಳಾಯಿ, ವಿಪಕ್ಷ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಸಿಪಿಎಂನ ದಯಾನಂದ ಶೆಟ್ಟಿ, ಜೆಡಿಎಸ್‌ನ ಅಬ್ದುಲ್‌ ಅಝೀಝ್ ಕುದ್ರೋಳಿ, ರಮೀಝಾ ಬಾನು, ಎಸ್‌ಡಿಪಿಐ ಅಯಾಝ್, ಪಕ್ಷೇತರರಾದ ರೇವತಿ ಪುತ್ರನ್‌ ಸಹ ಹೊರನಡೆದರು. 

ಸಭೆ ಮುಂದುವರಿಕೆ..!
ಈ ಹಿನ್ನೆಲೆಯಲ್ಲಿ   ಸಭೆ ಮುಂದುವರಿ ಸುವ ಬಗ್ಗೆ  ಆಯುಕ್ತ ಮಹಮ್ಮದ್‌ ನಝೀರ್‌ ಅವರನ್ನು ಕೋರಲಾಯಿತು. ಸಂಸದರು, ಶಾಸಕರೂ ಸಹಿತ ಒಟ್ಟು 70 ಮಂದಿ ಬಲದ ಪರಿಷತ್ತಿನ ಕಲಾಪ ನಡೆಸಲು ಮೂರನೇ ಒಂದರಷ್ಟು (23.3) ಸದಸ್ಯರ ಹಾಜರಾತಿ ಕಡ್ಡಾಯ. ಅದರಂತೆ 24 ಮಂದಿ ಹಾಜರಿರುವುದರಿಂದ ಸಭೆ ನಡೆಸಲು ತೀರ್ಮಾನಿಸಲಾಯಿತು. ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಅಬ್ದುಲ್‌ ರವೂಫ್, ಲೆಕ್ಕಪತ್ರ ಸ್ಥಾಯೀ ಸಮಿತಿ ಅಧ್ಯಕ್ಷೆ ಸಬಿತಾ ಮಿಸ್ಕಿತ್‌ ಉಪಸ್ಥಿತರಿದ್ದರು. 

ನಾಯಿ ಸಾಕಲು ಇನ್ನು ಪರವಾನಿಗೆ ಕಡ್ಡಾಯ
ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಸಾಕು ನಾಯಿಗಳಿಗೆ ಪ್ರಸಕ್ತ (2017-18) ಸಾಲಿನಿಂದಲೇ  ಜಾರಿಯಾ ಗುವಂತೆ ಪರವಾನಿಗೆ ಕಡ್ಡಾಯಗೊಳಿಸಲಾಗಿದೆ. ಅದರಂತೆ ಪ್ರಥಮ ವರ್ಷದಲ್ಲಿ ಉಚಿತವಾಗಿ ಪರವಾನಿಗೆ ಪಡೆಯಬಹುದಾಗಿದ್ದು, ಮುಂದಿನ ಸಾಲಿನಿಂದ ಶುಲ್ಕ ಪಾವತಿಸಿ ಪರವಾನಿಗೆಯನ್ನು ನವೀಕರಣ ಮಾಡಿಕೊಳ್ಳಬೇಕು. 

ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಿದ್ದು, ಪ್ರಸಕ್ತ ಸಾಲಿನಲ್ಲಿ ಉಚಿತವಾಗಿ ಪರವಾನಿಗೆಯನ್ನು ಪಡೆಯಬಹುದು. ಬಳಿಕ ಪ್ರತಿ ವರ್ಷ 300 ರೂ. ಶುಲ್ಕ ಹಾಗೂ ತಮ್ಮ ಸಾಕು ನಾಯಿಗಳಿಗೆ ಕಾಲ ಕಾಲಕ್ಕೆ ಲಸಿಕೆ ಹಾಕಿದ್ದಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸಿ ಪರವಾನಿಗೆ ನವೀಕರಿಸಿಕೊಳ್ಳಬೇಕು.

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನರಿಗೆ ಉಂಟಾಗುತ್ತಿರುವ ತೊಂದರೆ ನಿವಾರಿಸುವುದು, ಬೀದಿ ನಾಯಿಗಳ ಸಂತಾನೋತ್ಪತ್ತಿ ನಿಯಂತ್ರಿಸಲು 2016ರ ಮಾ.31ರಲ್ಲಿ ಡಾಗ್‌ ವೆಲ್ಫೆàರ್‌ ಸಮಿತಿ ಹಾಗೂ ಲೈಸೆನ್ಸ್‌ ಸಮಿತಿ ರಚನೆಗೆ ನಿರ್ಣಯಿಸಲಾಗಿತ್ತು. ಬೀದಿ ನಾಯಿ ಹಾಗೂ ಸಾಕು ನಾಯಿಗಳ ಸಮೀಕ್ಷೆ ಮಾಡಿ, ಸಾಕು ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸುವುದು ಈ ಸಮಿತಿಯ ಕಾರ್ಯ. ಈ ಬಗ್ಗೆ 2017ರ ಫೆ. 10ರಂದು ಡಾಗ್‌ ವೆಲ್ಫೆàರ್‌ ಸಮಿತಿ ಸಭೆಯನ್ನು ಆಯುಕ್ತರು ನಡೆಸಿದ್ದರು. ಅಂದು ನಿಗದಿಪಡಿಸಿದ್ದ ಕೆಲವು ಷರತ್ತುಗಳಿಗೆ ಇಂದಿನ‌ ಸಭೆಯಲ್ಲಿ ಅನುಮೋದನೆ ನೀಡಲಾಯಿತು. 

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.