ದೇಶದೆಲ್ಲೆಡೆ ಮುಚ್ಚಿದ ಹೈವೇ ಬಾರ್
Team Udayavani, Apr 3, 2017, 12:52 PM IST
ಹೊಸದಿಲ್ಲಿ: ರಾಜ್ಯ, ರಾಷ್ಟ್ರೀಯ ಹೆದ್ದಾರಿ ಬದಿಯ ಬಾರ್ಗಳನ್ನು ಮುಚ್ಚಿಸುವ ಹೈಕೋರ್ಟ್ ಆದೇಶ ಕಟ್ಟುನಿಟ್ಟಾಗಿ ಜಾರಿಗೆ ಬಂದ ಬೆನ್ನಲ್ಲೇ, ವಸತಿ ಪ್ರದೇಶಗಳ ಸನಿಹದಲ್ಲಿರುವ ಮದ್ಯ ದಂಗಡಿಗಳನ್ನು ಮುಚ್ಚಿಸುವ ತಮ್ಮ ಬೇಡಿಕೆ ಈಡೇರಿಸಲು ನಿರಾಸಕ್ತಿ ತೋರಿದ ಜಿಲ್ಲಾಡಳಿತದ ಕ್ರಮಕ್ಕೆ ಬೇಸತ್ತ ಮಹಿಳೆಯರ ಗುಂಪೊಂದು ಮದ್ಯದಂಗಡಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಫೂಲ್ಗಡಿ ಪ್ರದೇಶದಲ್ಲಿ ನಡೆದಿದೆ. ಬೆಳಗ್ಗೆ 7 ಗಂಟೆಗೆ ಮದ್ಯದಂಗಡಿ ಬಾಗಿಲು ತೆರೆಯುತ್ತಿದ್ದಂತೆ ಅಂಗಡಿಗೆ ನುಗ್ಗಿದ ಮಹಿಳೆಯರು, ಅಲ್ಲಿನ ಸಿಬಂದಿಯನ್ನು ಥಳಿಸಿದ್ದಾರೆ. ಅನಂತರ ಮದ್ಯದ ಬಾಟಲಿಗಳನ್ನು ಒಡೆದು, ಇಡೀ ಅಂಗಡಿಗೆ ಬೆಂಕಿ ಹಚ್ಚಿದ್ದಾರೆ.
10 ಲಕ್ಷ ಉದ್ಯೋಗ ನಷ್ಟ: ಇದೇ ವೇಳೆ ಸುಪ್ರೀಂಕೋರ್ಟ್ ಆದೇಶದಿಂದಾಗಿ ದೇಶಾದ್ಯಂತ 10 ಲಕ್ಷ ಉದ್ಯೋಗ ನಷ್ಟ ಉಂಟಾಗಲಿದೆ ಎಂದು ನೀತಿ ಆಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್ ಟ್ವೀಟ್ ಮಾಡಿದ್ದಾರೆ. ಅದನ್ನೇಕೆ ಕೊಲ್ಲಬೇಕೆಂದು ಪ್ರಶ್ನಿಸಿದ್ದಾರೆ.
ಆದೇಶ ಜಾರಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯ 500 ಮೀ. ವ್ಯಾಪ್ತಿಯಲ್ಲಿನ ಮದ್ಯ ದಂಗಡಿಗಳನ್ನು ಮುಚ್ಚಿಸುವ ಸುಪ್ರೀಂ ಕೋರ್ಟ್ ಆದೇಶ ಎ.1ರಿಂದ ದೇಶಾದ್ಯಂತ ಜಾರಿಯಾಗಿದೆ. ಹೆದ್ದಾರಿ ಸಮೀಪದಲ್ಲಿರುವ ಪ್ರತಿಷ್ಠಿತ ಕ್ಲಬ್, ಪಂಚತಾರಾ ಹೊಟೇಲ್ಗಳು ಮತ್ತು ಪಬ್ಗಳ ಸುತ್ತ ‘ಒಣಹವೆ’ ಮುಂದುವರಿದಿದೆ. ಈ ದಿಢೀರ್ ಬೆಳವಣಿಗೆಯಿಂದ ಬಹುತೇಕ ಬೊಕ್ಕಸಕ್ಕೆ ಭಾರೀ ನಷ್ಟವಾಗಿದೆ ಎಂದು ಮದ್ಯ ಮಾರಾಟಗಾರರು, ವಿವಿಧ ರಾಜ್ಯಗಳ ಪ್ರಮುಖರು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ