ಶಿಕ್ಷಣ ಸಂಸ್ಥೆಗಳ ರಾಂಕಿಂಗ್: ಐಐಎಸ್‌ಸಿಗೆ ಮೊದಲ ಸ್ಥಾನ


Team Udayavani, Apr 4, 2017, 3:45 AM IST

iisc.jpg

ಹೊಸದಿಲ್ಲಿ: ಕಳೆದ ತಿಂಗಳು “ಟೈಮ್ಸ್‌ ಹೈಯರ್‌ ಎಜುಕೇಶನ್‌’ ಪಟ್ಟಿಯಲ್ಲಿ ಎಂಟನೇ ಸ್ಥಾನ ಗಳಿಸಿದ್ದ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸೋಮವಾರ ಪ್ರಕಟಿಸಿದ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳ ರಾಂಕಿಂಗ್ನ ಎಲ್ಲ ವಿಭಾಗಗಳಲ್ಲಿಯೂ ಅಗ್ರ ಸ್ಥಾನ ಪಡೆದುಕೊಂಡಿದೆ.

ನ್ಯಾಶನಲ್ಸ್‌ ಇನ್‌ಸ್ಟಿಟ್ಯೂಷನ್ಸ್‌ ರಾಂಕಿಂಗ್ ಫ್ರೆàಮ್‌ವರ್ಕ್‌ (ಎನ್‌ಐಆರ್‌ಎಫ್) ಸಿದ್ಧ ಪಡಿಸಿರುವ ಈ ರಾಂಕಿಂಗ್ ಪಟ್ಟಿಯಲ್ಲಿ ಏಳು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಐಐಟಿ) ಕೂಡ ಟಾಪ್‌ 10ರಲ್ಲೇ ಸ್ಥಾನ ಪಡೆದುಕೊಂಡಿವೆ. ಟಾಪ್‌ 10ರ ಕಡೆಯ ಎರಡು ಸ್ಥಾನಗಳಲ್ಲಿ ಬನಾರಸ್‌ ಹಿಂದೂ ವಿವಿ (ಬಿಎಚ್‌ಯು) ಮತ್ತು ಜವಾಹರಲಾಲ್‌ ನೆಹರೂ ವಿವಿ (ಜೆಎನ್‌ಯು) ಇವೆ.

ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ಈ ಕುರಿತು ಮಾಹಿತಿ ನೀಡಿದರು. ಕಳೆದ ವರ್ಷ ಈ ಸಮಯದಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳು, ಮ್ಯಾನೇಜ್‌ಮೆಂಟ್‌ ಮತ್ತು ಎಂಜಿನಿಯರಿಂಗ್‌ ಹಾಗೂ ಸಮಗ್ರ ರಾಂಕಿಂಗ್ ಬಿಡುಗಡೆಗೊಳಿಸಲಾಗಿತ್ತು. ಸಮಗ್ರ ಮತ್ತು ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಐಐಎಸ್‌ಸಿ ಅಗ್ರಸ್ಥಾನ ಗಳಿಸಿ, ಈಗಲೂ ಆ ಸ್ಥಾನ ಉಳಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದೆ. ಉಗ್ರ ಅಫ‌jಲ್‌ ಗುರು ಪರ ಕಾರ್ಯಕ್ರಮದಿಂದ ವಿಶ್ವಾದ್ಯಂತ ಸುದ್ದಿಯಾಗಿದ್ದ ದಿಲ್ಲಿಯ ಜವಾಹರ್‌ಲಾಲ್‌ ನೆಹರೂ ವಿವಿ ಕಳೆದ ಬಾರಿ ಎರಡನೇ ಸ್ಥಾನದಲ್ಲಿತ್ತು. ಈ ಬಾರಿ ಉತ್ತಮ ವಿವಿಗಳ ಪಟ್ಟಿಯಲ್ಲಿ 2ನೇ ಸ್ಥಾನಗಳಿಸಿದೆ.

ಉತ್ತಮ ರಾಂಕಿಂಗ್ಗೆ ಹೆಚ್ಚು ನಿಧಿ: ಉತ್ತಮ ರಾಂಕಿಂಗ್ಗೆ ಹೆಚ್ಚಿನ ಅನುದಾನ ಮತ್ತು ಸ್ವಾಯತ್ತತೆ ಸಿಗಲಿದೆ. ಇದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಹೇಳಿದ ಮಾತು. ಪಟ್ಟಿ ಬಿಡುಗಡೆಗೊಳಿಸಿದ ಅನಂತರ ಮಾತನಾಡಿದ ಅವರು, ವಿವಿಗಳು ಮತ್ತು ಕಾಲೇಜುಗಳ ನಡುವೆ ಉತ್ತಮ ಸ್ಪರ್ಧೆ ಏರ್ಪಡಲಿ ಎಂಬ ಉದ್ದೇಶದಿಂದ ಈ ರಾಂಕಿಂಗ್ ಪ್ರಕಟಿಸಲಾಗಿದೆ. ಹೆಚ್ಚಿನ ಶ್ರೇಣಿ ಪಡೆದ ಸಂಸ್ಥೆಗಳಿಗೆ ಸರಕಾರದ ಹೆಚ್ಚುವರಿ ಸೌಲಭ್ಯ ದೊರೆಯಲಿದೆ ಎಂದು ಹೇಳಿದ್ದಾರೆ.

ಐಐಎಸ್‌ಸಿ ವಿಶೇಷತೆ: ಬೆಂಗಳೂರಿನಲ್ಲಿರುವ ದೇಶದ ಪ್ರತಿಷ್ಠಿತ ಹಾಗೂ 108 ವರ್ಷಗಳ ಇತಿಹಾಸವುಳ್ಳ ಶಿಕ್ಷಣ ಸಂಸ್ಥೆ ಐಐಎಸ್‌ಸಿ. ವೈಜ್ಞಾನಿಕ ಸಂಶೋಧನೆ ಮತ್ತು ಉನ್ನತ ಶಿಕ್ಷಣ ನೀಡುವ ಮುಕ್ತ ವಿಶ್ವವಿದ್ಯಾಲಯ ಇದಾಗಿದೆ. ಮೈಸೂರು ಮಹಾರಾಜ ನಾಲ್ಕನೇ ಕೃಷ್ಣರಾಜ ಒಡೆಯರ್‌ ಮತ್ತು ಜೆಮ್‌ಶೇಟ್‌ಜೀ ಟಾಟಾ ಅವರ ಸಹಕಾರದಿಂದ 1909ರಲ್ಲಿ ಆರಂಭವಾಯಿತು. ಈಗಲೂ ಇದನ್ನು “ಟಾಟಾ ಇನ್‌ಸ್ಟಿಟ್ಯೂಟ್‌’ ಎಂದು ಕರೆಯಲಾಗುತ್ತದೆ. ವಿಶ್ವದ ಅಗ್ರಸ್ಥಾನದಲ್ಲಿರುವ ವಿಶ್ವವಿದ್ಯಾಲಯ ಗಳಲ್ಲಿ ಇದೂ ಒಂದು. ಐಐಎಸ್‌ಸಿಯಲ್ಲಿ 3,700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಾರೆ. ರಾಜ್ಯದ ಎರಡು ಕಡೆಗಳಲ್ಲಿ ಕ್ಯಾಂಪಸ್‌ ಇದ್ದು, ಪ್ರಧಾನ ಕ್ಯಾಂಪಸ್‌ ಬೆಂಗ ಳೂರು ನಗರದ ಉತ್ತರ ಭಾಗದಲ್ಲಿದೆ. ಇನ್ನೊಂದು ಕ್ಯಾಂಪಸ್‌ ಚಳ್ಳಕೆರೆಯಲ್ಲಿದೆ. ಐಐಎಸ್‌ಸಿ ವಿಶ್ವದ ಟಾಪ್‌ 10 ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡ ಮೊದಲ ವಿಶ್ವವಿದ್ಯಾಲಯ.

ಸಚಿವಾಲಯ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಉತ್ತಮ ಸ್ಥಾನ ಗಳಿಸಿರುವ ಸಂಸ್ಥೆಗಳಿಗೆ ಮುಂದಿನ ದಿನಗಳಲ್ಲಿ ಸ್ವಾಯತ್ತೆ, ಹೆಚ್ಚಿನ ಧನ ಸಹಾಯ ಮತ್ತು ಇತರ ನೆರವನ್ನು ನೀಡಲಾಗುತ್ತದೆ. ಈ ಬಗ್ಗೆ ಶೀಘ್ರ ನಿರ್ಧಾರ ಪ್ರಕಟಿಸಲಾಗುತ್ತದೆ.
-ಪ್ರಕಾಶ್‌ ಜಾವಡೇಕರ್‌, 
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.