ಬಿಜೆಪಿ ಪರ ಪ್ರಚಾರ ಆರಂಭಿಸಿದ ಎಸ್ಸೆಂಕೆ
Team Udayavani, Apr 4, 2017, 1:10 AM IST
ನಂಜನಗೂಡು/ಮೈಸೂರು: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ಅವರು ನಂಜನಗೂಡು, ಗುಂಡ್ಲುಪೇಟೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದರು. ಸೋಮವಾರ
ನಂಜನಗೂಡಿಗೆ ಆಗಮಿಸಿದ ಅವರು, ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೆಂಡಕಾರಿದ ಅವರು, ಕಳೆದ 55 ವರ್ಷಗಳಲ್ಲೇ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಆರೋಪಿಸಿದರು. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಾಣೆಯಾಗುತ್ತಿದೆ ಎಂದು ಲೇವಡಿ ಮಾಡಿದ ಅವರು, ನಿಮಗೆ ಆ ಪಕ್ಷದ ಪ್ರಭುತ್ವ ಕಂಡಲ್ಲಿ ನನಗೆ ತಿಳಿಸಿ ಎಂದು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದಲ್ಲಿರುವುದು ಗೊತ್ತು ಗುರಿಯಿಲ್ಲದ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ ಕೃಷ್ಣ, ಸಂಜೆ 5 ಕ್ಕೆ ಬಾಗಿಲು ಹಾಕಿ
ಮಾರನೇ ದಿನ ಮಧ್ಯಾಹ್ನ 11ಕ್ಕೆ ಬಾಗಿಲು ತೆರೆಯುವ ಆಡಳಿತ ಇದಾಗಿದ್ದು, ಇದಕ್ಕೆ ಗೊತ್ತು ಗುರಿ ಇಲ್ಲವೇ ಇಲ್ಲ
ಎಂದು ಟೀಕಿಸಿದರು. ಕೆಂಗಲ್ ಹನುಮಂತಯ್ಯ ಅವರನ್ನೂ ಸೇರಿದಂತೆ ಹಲವಾರು ಮುಖ್ಯಮಂತ್ರಿಗಳನ್ನು ನೋಡಿದ ತಮಗೆ ರಾಜ್ಯದಲ್ಲಿ ಸರ್ಕಾರವಿದೆ ಎಂದು ಅನ್ನಿಸುವುದೇ ಇಲ್ಲ ಎಂದ ಅವರು, ಬಲಿಷ್ಠ ಭಾರತದ ನಿರ್ಮಾಣಕ್ಕೆ ದಿನದ
24 ಗಂಟೆ ಕೆಲಸ ಮಾಡುವ ಪ್ರಧಾನಿ ಮೋದಿ ಅವರನ್ನು ಮೆಚ್ಚಿ ಬಿಜೆಪಿ ಸೇರಿದೆ.
ಬೇರಾವುದೇ ಆಸೆ, ಆಮಿಷ, ಅಧಿಕಾರದ ಲಾಲಸೆ ತಮಗಿಲ್ಲವೆಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಪ್ರಾರಂಭವಾಗಿದೆ. ಅದು ಅವ್ಯಾಹತವಾಗಿ ನಡೆಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ
Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ