ಗೇರುಕಟ್ಟೆ ಗಂಗಯ್ಯ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ, ತಾಳಮದ್ದಳೆ


Team Udayavani, Apr 4, 2017, 4:57 PM IST

01-Mum01.jpg

ಪುಣೆ: ಕರಾವಳಿ ಯಕ್ಷಗಾನ ರಂಗದ ಮೇರು  ಕಲಾವಿದ ಕಟೀಲು ಮೇಳದಲ್ಲಿ ದೀರ್ಘ‌ ಕಾಲ ಸೇವೆ ಸಲ್ಲಿಸಿ ಇತ್ತೀಚಿಗೆ ಕಲಾಸೇವೆಗೈಯ್ಯುತ್ತಿರುವಾಗಲೇ ಕುಸಿದು ಬಿದ್ದು ನಿಧನ ಹೊಂದಿದ  ಗೇರುಕಟ್ಟೆ ಗಂಗಯ್ಯ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಪುಣೆ ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿ ವತಿಯಿಂದ ಗರ್ವಾರೆ ಕಾಲೇಜು ಕ್ಯಾಂಟೀನ್‌  ಹಾಲ್‌ನಲ್ಲಿ ಆಯೋಜಿಸಲಾಗಿತ್ತು.

ಸಂಘದ ಅಧ್ಯಕ್ಷ ಪಾಂಗಾಳ   ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಮೊದಲಿಗೆ ದಿವಂಗತ  ಶೆಟ್ಟಿಯವರ ಭಾವಚಿತ್ರಕ್ಕೆ ವಿಶ್ವನಾಥ ಶೆಟ್ಟಿ ಅವರು ಹಾರಾರ್ಪಣೆ ಮಾಡಿ ಅನಂತರ ಎರಡು  ನಿಮಿಷಗಳ ಮೌನ ಪ್ರಾರ್ಥನೆಯೊಂದಿಗೆ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅನಂತರ ಪಾಂಗಾಳ ವಿಶ್ವನಾಥ ಶೆಟ್ಟಿ ಅವರು ಮಾತನಾಡಿ, ದಿ| ಗಂಗಯ್ಯ ಶೆಟ್ಟಿಯವರು ಯಕ್ಷಗಾನ ರಂಗವನ್ನು ಹೊಸ ಆಯಾಮಗಳೊಂದಿಗೆ ತನ್ನ ಅಪಾರವಾದ ಕಲಾಸೇವೆಯನ್ನು ಸಲ್ಲಿಸುವ ಮೂಲಕ ಸಮೃದ್ಧಿಗೊಳಿಸಿದವರಾಗಿದ್ದು, ಅವರ ಮಾತುಗಾರಿಕೆ, ಕುಣಿತ, ಮಹಿಷಾಸುರನ ಪಾತ್ರದ ನಿರ್ವಹಣೆ ಅದ್ಭುತವಾಗಿದ್ದು, ಬಹಳಷ್ಟು  ವರ್ಷಗಳ ಹಿಂದೆ ಕಂಡಂತಹ ಅವರ ನೆನಪು ಇನ್ನೂ ಹಸಿರಾಗಿದೆ. ಒಬ್ಬ ಮಹಾನ್‌ ಕಲಾವಿದನನ್ನು ಅಗಲಿ ಯಕ್ಷಗಾನ ರಂಗಕ್ಕೆ ದೊಡ್ಡ ನಿರ್ವಾತವನ್ನು ಸೃಷ್ಟಿಸಿದೆ ಎಂದರು.

ಹಿರಿಯ ಕಲಾವಿದ ನಾಟ್ಯಗುರು ಮದಂಗಲ್ಲು ಆನಂದ ಭಟ್‌ ಅವರು ಮಾತನಾಡಿ,  ಜೀವನದುದ್ದಕ್ಕೂ ಯಕ್ಷ ಗಾನವನ್ನೇ  ಉಸಿರಾಗಿಸಿಕೊಂಡು ಕಲಾ ಶ್ರೀಮಂತಿಕೆ ಮೆರೆದು ವಿಶೇಷವಾಗಿ ದೇವಿ ಮಹಾತೆ¾ಯ ಮಹಿಷಾಸುರನ ಪಾತ್ರವನ್ನು ತನ್ನದೇ ವಿಶೇಷ ಆಕರ್ಷಣೆಯೊಂದಿಗೆ ಪ್ರಸ್ತುತಪಡಿಸಿ ಕಲಾರಸಿಕರ ಹೃದಯದಲ್ಲಿ ನೆಲೆಯಾದ ಕಲಾವಿದ ಗಂಗಯ್ಯ ಶೆಟ್ಟಿಯವರೆಂದರೆ ತಪ್ಪಾಗಲಾರದು. ಅವರ ವಿಶಿಷ್ಟ ಬಣ್ಣಗಾರಿಕೆ  ಹಾವಭಾವ, ಜೀವನ ಶೈಲಿ, ಶಿಸ್ತುಬದ್ಧತೆ ಎಲ್ಲರಿಗೂ ಮಾದರಿಯಾಗಿದ್ದು ಅವರ ಅಗಲಿಕೆ ಕಲಾರಂಗಕ್ಕೆ ನಷ್ಟವೆನ್ನಬಹುದಾಗಿದೆ ಎಂದು ಹೇಳಿದರು.

ಮಂಡಳಿಯ ಉಪಾಧ್ಯಕ್ಷ ಪ್ರಕಾಶ್‌ ಹೆಗ್ಡೆ ಮಟ್ಟಾರ್‌ ಅವರು ಮಾತನಾಡಿ, ಯಕ್ಷಗಾನ ರಂಗಕ್ಕೆ ವಿಶೇಷ ಕೊಡುಗೆ ನೀಡಿದ ಮಹಾನ್‌ ಕಲಾವಿದರ ಅಗಲಿಕೆಯಿಂದ ಪ್ರತಿಯೊಬ್ಬ ಕಲಾಭಿಮಾನಿಗೂ ಅಪಾರ ದುಃಖವಾಗುತ್ತಿದೆ. ಅಂತಹ  ಶ್ರೇಷ್ಠ ಕಲಾವಿದರಿಂದಲೇ ಇಂದು ಕೂಡಾ ಯಕ್ಷಗಾನ ಕಲೆ ಬೆಳೆಯುತ್ತಿದೆ. ಅವರ ಶ್ರದ್ಧಾಂಜಲಿ  ಸಭೆಯನ್ನು  ಆಯೋಜಿಸುತ್ತಿರುವುದು ಸ್ತುತ್ಯರ್ಹವಾಗಿದೆ ಎಂದರು.

ಅನಂತರ ಮಂಡಳಿಯ ಕಲಾವಿದರಿಂದ ಗೇರುಕಟ್ಟೆಯವರ ನೆನಪಿನಲ್ಲಿ  ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಲೆಯನ್ನು ಆಯೋಜಿಸಲಾಯಿತು. ಮದಂಗಲ್ಲು ಆನಂದ ಭಟ್‌, ಪಾಂಗಾಳ ವಿಶ್ವನಾಥ ಶೆಟ್ಟಿ, ವಿಕೇಶ್‌ ರೈ ಶೇಣಿ, ವಾಸು ಕುಲಾಲ್‌ ವಿಟ್ಲ, ಸುಕೇಶ್‌  ಶೆಟ್ಟಿ ಎಣ್ಣೆಹೊಳೆ ಅವರು ಪಾಲ್ಗೊಂಡರು.  ಪ್ರಕಾಶ್‌  ಹೆಗ್ಡೆ ಸ್ವಾಗತಿಸಿ ಸುಕೇಶ್‌ ಶೆಟ್ಟಿ ಎಣ್ಣೆಹೊಳೆ ವಂದಿಸಿದರು. ನ್ಯಾಯವಾದಿ ಪದ್ಮನಾಭ ಬೆಲ್ಚಡ, ನಾಗೇಶ್‌  ಕುಲಾಲ…  ಮತ್ತಿತರ ಸದಸ್ಯರು ಉಪಸ್ಥಿತರಿದ್ದರು. 

ಚಿತ್ರ -ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.