ನರೇಗಾ ಕೂಲಿ ಹಣ ವಿಳಂಬವಾದರೆ ಅಧಿಕಾರಿಗಳಿಂದ ಬಡ್ಡಿ ಹಣ: ಎಚ್ಚರಿಕೆ
Team Udayavani, Apr 5, 2017, 2:34 PM IST
ಧಾರವಾಡ: ನರೇಗಾ ಯೋಜನೆಯಡಿ ಕೆಲಸ ಮಾಡಿದವರಿಗೆ ಸಮಯಕ್ಕೆ ಸರಿಯಾಗಿ ಕೂಲಿ ಹಣ ಪಾವತಿಸದೇ ಹೋದರೆ ಅದರ ಬಡ್ಡಿ ಹಣವನ್ನು ಅಧಿಕಾರಿಗಳಿಂದಲೇ ವಸೂಲಿ ಮಾಡಲಾಗುವುದು ಎಂದು ಗ್ರಾಮೀಣ ಅಭಿವೃದ್ದಿ ಸಚಿವ ಎಚ್.ಕೆ.ಪಾಟೀಲ್ ಎಚ್ಚರಿಸಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಂಗಳವಾರ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಡಿ ಬರುವ ಬರಗಾಲ ಪರಿಹಾರ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 395 ಹಳ್ಳಿಗಳಿದ್ದು, ಎಲ್ಲಾ ಹಳ್ಳಿಗಳಿಗೂ ಕನಿಷ್ಠ ಒಂದೊಂದು ಕೆಲಸವನ್ನು ಕಡ್ಡಾಯಗೊಳಿಸಬೇಕು.
20 ಅಂಶಗಳ ಕಾರ್ಯಕ್ರಮ ಅನ್ವಯ ಒಂದಾದ ಮೇಲೆ ಒಂದರಂತೆ ಕೆಲಸ ಮಾಡಿಸಬೇಕು. 15 ದಿನಗಳೊಳಗೆ ಅವರಿಗೆ ಹಣ ಪಾವತಿಸಬೇಕು. ಇಲ್ಲವಾದರೆ ಆ ಹಣದ ಮೇಲಿನ ಬಡ್ಡಿಯನ್ನು ಸರ್ಕಾರಕ್ಕೆ ಬದಲಾಗಿ ಪ್ರಮಾದ ಮಾಡಿದ ಅಧಿಕಾರಿಯಿಂದಲೇ ವಸೂಲಿ ಮಾಡುತ್ತೇವೆ ಎಂದು ಖಡಕ್ಕಾಗಿ ಎಚ್ಚರಿಸಿದರು. ಇನ್ನು ಏಪ್ರಿಲ್,ಮೇ ಮತ್ತು ಜೂನ್ ತಿಂಗಳಿನಲ್ಲಿ ನರೇಗಾದ ಕೆಲಸಗಳು ಜಿಲ್ಲೆಯಲ್ಲಿ ಚುರುಕಾಗಿ ನಡೆಯಲಿ.
ಈ ಸಂದರ್ಭದಲ್ಲಿ ನರೇಗಾ ಕೆಲಸದಲ್ಲಿ ತೊಡಗಿದ ಕಾರ್ಮಿಕರ ಮಕ್ಕಳಿಗೆ ಕೆಲಸ ನಡೆಯುವ ಸ್ಥಳದಲ್ಲಿಯೇ ಸಣ್ಣ ನೆರಳು ವ್ಯವಸ್ಥೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಈ ಎಲ್ಲ ಕಾರ್ಮಿಕರಿಗೂ ಅಗತ್ಯವಾದ ವೈದ್ಯಕೀಯ ಸೌಲಭ್ಯ ಒದಗಿಸಿಕೊಡುವಂತೆ ಜಿಲ್ಲಾಡಳಿತ ಮತ್ತು ಜಿಪಂ ಸಿಇಒ ವ್ಯವಸ್ಥೆ ಮಾಡುವಂತೆ ಸಚಿವ ಎಚ್.ಕೆ.ಪಾಟೀಲ ಸಲಹೆ ನೀಡಿದರು.
ಸಿಇಒಗೆ ಸಲಹೆ: ಇನ್ನು ನರೇಗಾ ಮತ್ತು 20 ಅಂಶಗಳ ಕಾರ್ಯಕ್ರಮದ ಪ್ರಗತಿ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ ಸಚಿವ ಎಚ್.ಕೆ.ಪಾಟೀಲ ಅವರು ಧಾರವಾಡ ಜಿಪಂ ಸಿಇಒ ಸ್ನೇಹಲ್ ಅವರಿಗೆ, ಸರ್ಕಾರ ಸಾಕಷ್ಟು ಹಣ ಕೊಟ್ಟರೂ ಅಭಿವೃದ್ಧಿ ಕಾರ್ಯಗಳು ಯಾಕೆ ನಿಧಾನಕ್ಕೆ ಸಾಗುತ್ತಿವೆ.
ಕೂಡಲೇ ಎಲ್ಲ ಕಾಮಗಾರಿಗಳ ವೇಗ ಹೆಚ್ಚಿಸಲು ಯತ್ನಿಸುವಂತೆ ಸಲಹೆ ನೀಡಿದರು. ಇನ್ನು ತಾಲೂಕಾವಾರು ಬರ ಕಾಮಗಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಪಾಟೀಲ, ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸದೇ ಇರುವ ಕುರಿತು ಬಂದಿರುವ ದೂರುಗಳ ಸಮಗ್ರ ವಿವರವನ್ನು ಅಧಿಕಾರಿಗಳಿಗೆ ನೀಡಿದರು.
ಅಷ್ಟೇಯಲ್ಲ, ಶೀಘ್ರವೇ ಅವುಗಳನ್ನು ಸರಿಪಡಿಸುವಂತೆ ಕೂಡ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಮಾತನಾಡಿ, ಬರಗಾಲ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೈಗೊಂಡ ತುರ್ತು ಕಾಮಗಾರಿಗಳು ಸೇರಿದಂತೆ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಗ್ರಾಮೀಣ ಕುಡಿಯುವ ನೀರು ಇಲಾಖೆ ಹಿರಿಯ ಅಧಿಕಾರಿ ಪ್ರಕಾಶ, ಜಿಪಂ ಸಿಇಒ ಸ್ನೇಹಲ್, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಉಪಾಧ್ಯಕ್ಷ ಶಿವಾನಂದ ಕರಿಗಾರ ಸೇರಿದಂತೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ