ಆನೆಗುಡ್ಡೆ ದೇವಸ್ಥಾನಕ್ಕೆ : ಅತ್ಯಾಧುನಿಕ ಡಿಶ್‌ವಾಶರ್‌ ಉದ್ಘಾಟನೆ


Team Udayavani, Apr 6, 2017, 11:57 AM IST

06-REPORTER-3.jpg

ತೆಕ್ಕಟ್ಟೆ: ಶ್ರೀ ವಿನಾಯಕ ದೇವರೇ ಕರ್ಣಾಟಕ ಬ್ಯಾಂಕ್‌ನ ಪ್ರಧಾನ ಲಾಂಛನವಾಗಿದ್ದು ಪ್ರಸ್ತುತ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಅಗ್ರಣಿ ಸ್ಥಾನ
ದಲ್ಲಿದೆ; ಜತೆಗೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದೇವೆ ಎಂದು ಕರ್ಣಾಟಕ ಬ್ಯಾಂಕ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಪಿ. ಜಯರಾಮ್‌ ಭಟ್‌ ಹೇಳಿದರು.

ಅವರು ಮಂಗಳವಾರ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನ್ನದಾನ ವ್ಯವಸ್ಥೆಗೆ ಕರ್ಣಾಟಕ ಬ್ಯಾಂಕ್‌ ಕೊಡಮಾಡಿದ ಸುಮಾರು  10.5 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ತಂತ್ರಜ್ಞಾನದ ಡಿಶ್‌ ವಾಶರ್‌ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದರು.
ಕರ್ಣಾಟಕ ಬ್ಯಾಂಕ್‌ನ ಚೀಫ್‌ ಜನರಲ್‌ ಮ್ಯಾನೇಜರ್‌ ಎಂ.ಎಸ್‌. ಮಹಾಬಲೇಶ್ವರ ಭಟ್‌ ಮಾತನಾಡಿ, ಕರಾವಳಿ ಜಿಲ್ಲೆಗಳ ದೇವಸ್ಥಾನಗಳ ಸ್ವತ್ಛತೆ ಹಾಗೂ ಪಾವಿತ್ರವನ್ನು ಕಾಪಾ ಡುವಲ್ಲಿ ಶ್ರಮಿಸಬೇಕು ಎಂದರು.

ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಪ್ರಧಾನ ಪಾಕತಜ್ಞರಾಗಿರುವ ರಮೇಶ ಕಾರಂತ ಹಾಗೂ ವಾದಿರಾಜ ಮಡಿಕುಳ ಅವರನ್ನು ಪಿ. ಜಯರಾಮ್‌ ಭಟ್‌ ಸಮ್ಮಾನಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಧರ್ಮ
ದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಅವರಿಗೆ ಕರ್ಣಾಟಕ ಬ್ಯಾಂಕ್‌ನಿಂದ ಡಿಮ್ಯಾಂಡ್‌ ಡ್ರಾಫ್ಟ್‌ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಆನುವಂಶಿಕ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ಕರ್ಣಾಟಕ ಬ್ಯಾಂಕ್‌ನ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌ ವಿದ್ಯಾಲಕ್ಷ್ಮೀ, ಕುಂಭಾಶಿ ಕರ್ಣಾಟಕ ಬ್ಯಾಂಕ್‌ನ ಶಾಖಾ ಪ್ರಬಂಧಕ ಗೌರೀಶ್‌ ಎಸ್‌. ಜೋಶಿ ಮೊದಲಾದವರು ಉಪಸ್ಥಿತರಿದ್ದರು.

ಕೆ. ಸೂರ್ಯನಾರಾಯಣ ಉಪಾಧ್ಯಾಯ ಸ್ವಾಗತಿಸಿ, ಪ್ರಸ್ತಾವನೆಗೈ ದರು. ಕೆ. ಶ್ರೀರಮಣ ಉಪಾಧ್ಯಾಯ ವಂದಿಸಿದರು. ದೇವಸ್ಥಾನದ ಮ್ಯಾನೇಜರ್‌ ಆನಂದರಾಮ್‌ ಉರಾಳ ಹಂದಟ್ಟು ಕಾರ್ಯಕ್ರಮ ನಿರೂಪಿಸಿದರು.

ಗಂಟೆಗೆ ಸಾವಿರ ಬಟ್ಟಲು  ತೊಳೆಯುವ ಸಾಮರ್ಥ್ಯ
ಪ್ರಸ್ತುತ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಗುಣ
ಮಟ್ಟದ ಐಎಫ್‌ಬಿ ಕಂಪೆನಿಯ ಅತ್ಯಾಧುನಿಕ ಇಟಾಲಿಯನ್‌ ತಂತ್ರ ಜ್ಞಾನದ ಈ ಡಿಸ್‌ ವಾಶರ್‌ ಯಂತ್ರವು  ಶೇ. 80ರಷ್ಟು ಬಿಸಿ ನೀರನ್ನು ಶೇ. 60 ಸಾಂದ್ರತೆಯಲ್ಲಿ ವಾಷಿಂಗ್‌ ಲಿಕ್ವಿಡ್‌ ಸಹಿತ ಪ್ರತಿ ಗಂಟೆಗೆ ಸಾವಿರಕ್ಕೂ ಅಧಿಕ ಸ್ಟೀಲ್‌ ತಟ್ಟೆಗಳನ್ನು ತೊಳೆಯುವ ಸಾಮರ್ಥ್ಯ ಹೊಂದಿದೆ. ಸಂಪೂರ್ಣ ಪರಿಸರ ಸ್ನೇಹಿಯಾಗಿ ನೀರಿನ ಉಳಿತಾಯದೊಂದಿಗೆ ಕಾರ್ಯನಿರ್ವಹಿಸುವ ದಕ್ಷತೆಯನ್ನು ಹೊಂದಿದೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.