ಪಿಲಿಕುಳ ನಿಸರ್ಗಧಾಮ: ಸದ್ಯಕ್ಕೆ ಎಲ್ಲವೂ ಕ್ಷೇಮ !


Team Udayavani, Apr 6, 2017, 3:32 PM IST

06-REPORTER-22.jpg

ಪಿಲಿಕುಳ: ಮಂಗಳೂರು ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ನೀರಿನ ಅಭಾವ ಕಂಡುಬರುತ್ತಿದ್ದರೂ ಪ್ರತಿಷ್ಠಿತ ಪ್ರವಾಸಿತಾಣ ಡಾ| ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ. ಹಾಗಾಗಿ ಇಲ್ಲಿನ ಪ್ರಾಣಿಗಳು ನಿರಾಂತಕವಾಗಿವೆ. ಮೇ ಅಂತ್ಯದವರೆಗೂ ಮಳೆ ಬಾರದೇ ಇದ್ದಲ್ಲಿ ನೀರಿನ ಸಮಸ್ಯೆ ಎದುರಾಗಬಹುದೆಂಬ ಆತಂಕವಿದೆ.

ಸರಾಸರಿ 3.5 ಲಕ್ಷ ಲೀ. ನೀರು.!
ಪ್ರಾಣಿಗಳಿಗೆ ಕುಡಿಯುವ ನೀರು, ಗಾರ್ಡನ್‌ನ ಗಿಡಗಳಿಗೆ ನೀರು ಹಾಗೂ ಪ್ರವಾಸಿಗರಿಗೆ ಕುಡಿಯುವ ನೀರು ಸಹಿತ ದಿನಕ್ಕೆ ಸರಾಸರಿ 3.5 ಲಕ್ಷ ಲೀ. ನೀರು ಬೇಕು. ಪ್ರಾಣಿಗಳು ಹಾಗೂ ಪ್ರವಾಸಿಗರಿಗೆ ಗುರುಪುರ ಫ‌ಲ್ಗುಣಿ ನದಿಯಿಂದ ದಿನಕ್ಕೆ 2 ಲಕ್ಷ ಲೀ. ನೀರನ್ನು ಜಾಕ್‌ವೆಲ್‌ ಮೂಲಕ ಸಂಗ್ರಹಿಸಿ, ಶುದ್ಧೀಕರಿಸಿ ಬಳಿಕ ಕುಡಿಯುವ ಉದ್ದೇಶಕ್ಕೆ ಬಳಸಲಾಗುತ್ತದೆ. ಗಾರ್ಡನ್‌ಗಳಿಗೆ ಪಾಲಿಕೆಯ ವ್ಯಾಪ್ತಿಯ ತ್ಯಾಜ್ಯ ನೀರನ್ನು ಖಾಸಗಿ ಸಂಸ್ಥೆಯ ಮೂಲಕ 1.5 ಲಕ್ಷ ಲೀ. ಶುದ್ಧೀಕರಿಸಿ ಬಳಸಲಾಗುತ್ತದೆ. ಹೀಗಾಗಿ ಪ್ರಸ್ತುತ ನೀರಿನ ಅಭಾವ ಕಂಡುಬಂದಿಲ್ಲ.  

ಕೊಳವೆಬಾವಿಗಳು
ಕುಡಿಯಲು ಹಾಗೂ ಗಿಡಗಳಿಗೆ ಪ್ರತ್ಯೇಕ ಮೂಲಗಳಿಂದ ನೀರನ್ನು ಬಳಸಲಾಗುತ್ತಿದ್ದು, ಎಲ್ಲಿ ಕೊರತೆ ಬಂದರೂ ಇಲ್ಲಿನ 4 ಕೊಳವೆಬಾವಿಗಳಿಂದ ನೀರು ಪೂರೈಸಲಾಗುವುದು. 2 ಲಕ್ಷ ಲೀ. ಹಾಗೂ 1.5 ಲಕ್ಷ ಲೀ. ಸಾಮರ್ಥ್ಯದ 2 ಅಂಡರ್‌ಗ್ರೌಂಡ್‌ ಟ್ಯಾಂಕ್‌ಗಳಿವೆ. ಜತೆಗೆ ಇಲ್ಲಿನ ಕೆರೆಗಳಲ್ಲೂ ಸಾಕಷ್ಟು ನೀರಿದ್ದು, ಅದನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿಲ್ಲ. ನೀರು ಇಂಗಲು ಇದು ಉತ್ತಮವಾದ ಮಾರ್ಗ.

ಹೊಸ ಟ್ಯಾಂಕ್‌ ನಿರ್ಮಾಣ
ಪ್ರಸ್ತುತ ನೀರಿನ ಅಗತ್ಯ ಈಡೇರಿಸಿಕೊಳ್ಳಲು ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ 1 ಲಕ್ಷ ಲೀ. ಸಾಮರ್ಥ್ಯದ ನೀರಿನ ಟ್ಯಾಂಕ್‌ ನಿರ್ಮಿಸಲಾಗುತ್ತಿದೆ. ಇದಕ್ಕೆ ಗುರುಪುರ ನದಿಯಿಂದ ನೀರು ಪೂರೈಕೆಯಾಗಲಿದ್ದು, ಒಂದಷ್ಟು ಬೇಡಿಕೆಯನ್ನು ಈಡೇರಿಸಲಿದೆ ಎನ್ನುತ್ತಾರೆ ಅಧಿಕಾರಿಗಳು.

ಬೇಸಗೆ ರಜೆ: ಪ್ರವಾಸಿಗರ ಸಂಖ್ಯೆ ಹೆಚ್ಚಳ
ಪ್ರಸ್ತುತ ಬೇಸಗೆ ರಜೆ ಸಮೀಪಿಸುತ್ತಿದ್ದು, ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗತೊಡಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಇರುವ ಎಪ್ರಿಲ್‌-ಮೇ, ನವೆಂಬರ್‌-ಡಿಸೆಂಬರ್‌ ತಿಂಗಳಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚು. ಆದ ಕಾರಣ ನೀರಿನ ಬೇಡಿಕೆಯೂ ಹೆಚ್ಚುತ್ತದೆ. ಸರಾಸರಿ ಲೆಕ್ಕಾಚಾರದ ಪ್ರಕಾರ ಶನಿವಾರ-ರವಿವಾರ ಪ್ರವಾಸಿಗರ ಸಂಖ್ಯೆ 2 ಸಾವಿರ ಇದ್ದರೆ, ಉಳಿದ ದಿನಗಳಲ್ಲಿ 400ರಿಂದ 500 ಮಂದಿ ಭೇಟಿ ನೀಡುತ್ತಾರೆ.

ಸದ್ಯಕ್ಕೆ ನೀರಿನ ಅಭಾವವಿಲ್ಲ
ಸದ್ಯಕ್ಕೆ ನೀರಿನ ಅಭಾವ ಕಂಡುಬಂದಿಲ್ಲ. ವಿವಿಧ ಮೂಲಗಳಿಂದ ನೀರನ್ನು ನಿರ್ವಹಿಸುತ್ತಿದ್ದೇವೆ. ಒಂದು ಹೊಸ ಟ್ಯಾಂಕನ್ನೂ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಬೇಸಗೆ ರಜೆ ಆಗಮಿಸುತ್ತಿದ್ದು, ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ನೀರಿನ ಬೇಡಿಕೆಯೂ ಸಹಜವಾಗಿಯೇ ಹೆಚ್ಚು.
ಪ್ರಸನ್ನ ವಿ., ಕಾರ್ಯನಿರ್ವಾಹಕ ನಿರ್ದೇಶಕರು

ಕಿರಣ್‌ ಸರಪಾಡಿ 

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.