ಜಿಎಸ್ಟಿಗೆ ರಾಜ್ಯಸಭೆ ಅಸ್ತು; ಜುಲೈನಿಂದ ಜಾರಿ
Team Udayavani, Apr 7, 2017, 3:45 AM IST
ನವದೆಹಲಿ: ಐತಿಹಾಸಿಕ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತಿದ್ದು, ಜುಲೈನಿಂದಲೇ ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆಯನ್ನು ಜಾರಿಮಾಡಲು ಇದ್ದ ಎಲ್ಲ ಅಡೆತಡೆಗಳೂ ನಿವಾರಣೆಯಾಗಿವೆ.
ಮೇಲ್ಮನೆಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್-ಬಿಜೆಪಿ ನಡುವೆ ಒಪ್ಪಂದವೇರ್ಪಟ್ಟ ಹಿನ್ನೆಲೆಯಲ್ಲಿ ಮಸೂದೆಗೆ ಅನುಮೋದನೆ ಸಿಕ್ಕಿದೆ.
ಆರಂಭದಲ್ಲಿ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ವಿಧೇಯಕಕ್ಕೆ ಕೆಲವೊಂದು ತಿದ್ದುಪಡಿಗಳನ್ನು ಪ್ರಸ್ತಾಪಿಸಿದರಾದರೂ, ಕೊನೆಗೆ ಜಿಎಸ್ಟಿ ಸರ್ವಾನುಮತದಿಂದ ಅಂಗೀ ಕಾರವಾಗಬೇಕು ಎಂಬ ಮಾಜಿ ಪ್ರಧಾನಿ ಮನಮೋಹನ್ಸಿಂಗ್ ಅವರ ಸೂಚನೆಯ ಮೇರೆಗೆ ತಮ್ಮ ಪ್ರಸ್ತಾಪವನ್ನು ಕೈಬಿಟ್ಟರು. ಹೀಗಾಗಿ, ರಾಜ್ಯಸಭೆಯಲ್ಲಿ ಯಾವುದೇ ಅಡ್ಡಿಗಳಿಲ್ಲದೆ ವಿಧೇಯಕ ಅಂಗೀಕಾರಗೊಂಡಿತು.
ಇನ್ನು ರಾಜ್ಯ ಸರ್ಕಾರಗಳು ಜಿಎಸ್ಟಿಯನ್ನು ಪಾಸ್ ಮಾಡಿದರೆ, ಜುಲೈನಿಂದಲೇ ಏಕರೂಪದ ತೆರಿಗೆ ಜಾರಿಯಾಗಲಿದೆ.8 ಗಂಟೆಗಳ ಕಾಲ ನಡೆದ ಚರ್ಚೆ ವೇಳೆ, ವಿತ್ತ ಸಚಿವ ಜೇಟಿÉ ಅವರು, ಜಿಎಸ್ಟಿ ಕ್ರೆಡಿಟ್ ಅನ್ನು ಹಿಂದಿನ ಯುಪಿಎ ಸರ್ಕಾರಕ್ಕೆ ನೀಡಬಯಸುತ್ತೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ