ಶೀಘ್ರ ಮಲಯಾಳ ಕಲಿಕೆ ಕಡ್ಡಾಯ ಅಧ್ಯಾದೇಶ ಕನ್ನಡಿಗರಲ್ಲಿ ಆತಂಕ 


Team Udayavani, Apr 7, 2017, 2:24 PM IST

07-KSRGOD-4.jpg

ಕಾಸರಗೋಡು: ಅಧ್ಯಾದೇಶ (ಸುಗ್ರೀವಾಜ್ಞೆ) ಹಾಗು ಪೊಲೀಸ್‌ ಬಲ ಪ್ರಯೋಗದ ಮೂಲಕ ತನ್ನ ತೀರ್ಮಾನಗಳನ್ನು ಜನರ ಮೇಲೆ ಹೇರಿ ಸುದ್ದಿ ಮಾಡುತ್ತಿರುವ ಎಡರಂಗ ಸರಕಾರ ಇದೀಗ ಅಧ್ಯಾದೇಶದ ಮೂಲಕ ಮಲಯಾಳವನ್ನು ಕಡ್ಡಾಯಗೊಳಿಸಿ ಭಾಷಾ ಅಲ್ಪಸಂಖ್ಯಾಕರನ್ನು ದಮನಿಸಲು ತೀರ್ಮಾನಿಸಿದೆ. ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗು ಸಿಬಿಎಸ್‌ಇ ಶಾಲೆಗಳಲ್ಲಿ ಮಲಯಾಳ ಕಲಿಕೆಯನ್ನು ಕಡ್ಡಾಯಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಭೆ ನಿರ್ಧರಿಸಿದೆ.

ರಾಜ್ಯದ ಕೆಲವು ಶಾಲೆಗಳಲ್ಲಿ ಮಲಯಾಳ ಬಳಕೆಗೆ ನಿಷೇಧವಿದೆಯಾದರೂ ಹಾಗೆಯೇ ಗಡಿಪ್ರದೇಶಗಳ ಶಾಲೆಗಳಲ್ಲಿ ಮಲಯಾಳ ಕಲಿಕೆಗೆ ಪರ್ಯಾಪ್ತವಾದ ಮೂಲ ಸೌಕರ್ಯ ಇಲ್ಲವೆಂದೂ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮಲಯಾಳ ಕಲಿಕೆಯನ್ನು ಶಾಲೆಗಳಲ್ಲಿ ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ.

ಇತ್ತೀಚೆಗೆ ಪೆರ್ಲ ಸಮೀಪದ ಪ್ರಾಥಮಿಕ ಶಾಲೆಯೊಂದರಲ್ಲಿ ಮಲಯಾಳವನ್ನು ಕಲಿಯಲು ಅಗತ್ಯವಾದ ವಿದ್ಯಾರ್ಥಿಗಳ ಕೊರತೆಯಿಂದ ಅಧ್ಯಾಪಕರ ಹುದ್ದೆ ರದ್ದಾಗುವುದೆಂದು ಅಧ್ಯಾಪಿಕೆ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದು ವರದಿಯಾಗಿತ್ತು. ಮಲಯಾಳ ಕಡ್ಡಾಯದ ಮೂಲಕ ಶಾಲೆಗಳಲ್ಲಿರುವ ಬಹುಸಂಖ್ಯಾತ ಕನ್ನಡ ವಿದ್ಯಾರ್ಥಿಗಳೂ ಮಲಯಾಳ ಕಲಿಯುವಂತೆ ಮಾಡಿ ಮಲಯಾಳ ಅಧ್ಯಾಪಕರ ಹುದ್ದೆಯನ್ನು ಉಳಿಸುವ ಹುನ್ನಾರದಿಂದ ಸರಕಾರ ಈ ತೀರ್ಮಾನ ಕೈಗೊಂಡಿದೆಯೆಂದು ಊಹಿಸಲಾಗಿದೆ.

ಭಾಷಾ ಅಲ್ಪಸಂಖ್ಯಾಕರ ಮೇಲೆ ಗದಾಪ್ರಹಾರ 
ಮಾತೃ ಭಾಷೆಯ ಬಗೆಗಿನ ಸಂವಿಧಾನದತ್ತ ಸಂರಕ್ಷಣೆ ದೊರೆಯದೆ ಅನುದಿನ ತಮ್ಮ ಭಾಷೆ, ಸಂಸ್ಕೃತಿ ಹಾಗು ಜೀವನವಕಾಶವನ್ನು ಕಳೆದುಕೊಳ್ಳುತ್ತಿರುವ ಕಾಸರಗೋಡಿನ ಭಾಷಾ ಅಲ್ಪಸಂಖ್ಯಾಕ ಕನ್ನಡಿಗರಿಗೆ ಆಳುವ ಸರಕಾರದ ಮಲಯಾಳ ಕಡ್ಡಾಯ ತೀರ್ಮಾನ ಅಂತಿಮ ಗದಾಪ್ರಹಾರವಾಗಲಿದೆ. ತುಳು, ಕೊಂಕಣಿ, ಮರಾಠಿ, ಉರ್ದು ಮೊದಲಾದ ಮನೆ ಮಾತುಗಳ ಆಧಾರದಲ್ಲಿ ಹಾಗು ಪಕ್ಷ ಜಾತಿ ಮತಗಳ ಆಧಾರದಲ್ಲಿ ಗಡಿನಾಡಿನ ಕನ್ನಡಿಗರ ಐಕ್ಯವನ್ನು ಒಡೆಯುವಲ್ಲಿ ಬಹುತೇಕ ಯಶಸ್ವಿಯಾಗಿರುವ ಕೇರಳ ಸರಕಾರ ಆಡಳಿತ, ವ್ಯವಹಾರ ಮೊದಲಾದ ಪ್ರತಿಯೊಂದು ರಂಗಗಳಲ್ಲೂ ಮಲಯಾಳವನ್ನು ಕಡ್ಡಾಯಗೊಳಿಸಿ ಕನ್ನಡವನ್ನು ನಿರ್ಲಕ್ಷಿಸುವ ಮೂಲಕ ಮಲಯಾಳವನ್ನು ಕಲಿಯದಿದ್ದರೆ ಉಳಿಗಾಲವಿಲ್ಲವೆಂಬ ಪರಿಸ್ಥಿತಿಯನ್ನು ನಿರ್ಮಿಸಿತು. ಪ್ರಾಮಾಣಿಕ ಕನ್ನಡಪರ ಹೋರಾಟಗಳಿಗೆ ಕೈಜೋಡಿಸಿದ ತಮ್ಮ ಸ್ವಾರ್ಥ ಉದಾಸೀನಗಳಲ್ಲಿ ಮುಳುಗಿ ಹೋದ ಕನ್ನಡಿಗರೂ ಈಗ ಬಲಹೀನರಾಗಿರುವುದನ್ನು ಸರಕಾರ ಅರಿತುಕೊಂಡಿದೆ. 

ಭಾಷಾವಾರು ಪ್ರಾಂತ್ಯ ರಚನೆಯ ಅರುವತ್ತನೇ ವರ್ಷಾಚರಣೆ ಸಂದರ್ಭದಲ್ಲಿ ಒಂದೆಡೆ ಮಲಯಾಳಕ್ಕೆ ಸರ್ವ ಮನ್ನಣೆ ಪ್ರಾಪ್ತವಾಗುತ್ತಿದ್ದರೆ ಇನ್ನೊಂದೆಡೆ ಕನ್ನಡವನ್ನು ನಿರ್ಮೂಲನ ಮಾಡುವ ಸ್ಥಿತಿ ನಿರ್ಮಾಣಗೊಂಡಿದೆ.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.